ರಾಯಚೂರು: ನೀರು ಪೂರೈಕೆ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ, ಪಂಪ್ಹೌಸ್ಗೆ ಮುಂದೆ ಪ್ರತಿಭಟನೆ
ರಾಯಚೂರು ವಿಡಿಯೋಗಳಿಗೆ ಚಂದಾದಾರರಾಗಿ
ರಾಯಚೂರು: ವಾರದಿಂದ ಕುಡಿಯುವ ನೀರು ಪೂರೈಕೆ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜನರು ಪಂಪ್ಹೌಸ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ಹೈದರಾಬಾದ್ ರಸ್ತೆಯಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ನೀರು ಸರಬರಾಜು ಘಟಕದಲ್ಲಿ ಐಪಿ ಪಂಪ್ ಸೆಟ್ಗಳು ಹಾಳಾಗಿವೆ ಎಂದು ನೆಪವೊಡ್ಡಿ ಕಳೆದ ವಾರದಿಂದ ಕುಡಿಯುವ ನೀರು ಬಿಟ್ಟಿಲ್ಲ. ಇದರ ಪರಿಣಾಮ ನಾನಾ ಬಡವಣೆಗಳ ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೇಸತ್ತ ಜನ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಎಲ್ಬಿಎಸ್ ನಗರ, ಗಂಜ್ ಏರಿಯಾ, ಮಡ್ಡಿಪೇಟ, ಸಿಯಾತಲಾಬ್, ಅಂದ್ರೂನ್ ಕಿಲ್ಲಾ, ಬೇರೂನ್ ಕಿಲ್ಲಾ, ಮಕ್ತಲ್ ಪೇಟೆ, ಬೆಸ್ತವಾರಪೇಟ, ಲೋಹರ ವಾಡಿಯಲ್ಲಿ ಜನರಿಗೆ ನೀರು ಸರಬರಾಜು ಮಾಡಿಲ್ಲ. ಐಪಿ ಪಂಪ್ ಸೆಟ್ ಕೆಲಸ ಮಾಡುವ ಮೇಸ್ತ್ರಿ ಮೋಟಾರುಗಳು ಬಂದ್ ಮಾಡಿ ನೀರು ಬರದಂತೆ ಮಾಡುತ್ತಾರೆ ಎಂದು ಆರೋಪಿಸಿದರು. ವಿಷಯ ತಿಳಿಸಿದು ನಗರಸಭೆಯ ಕಿರಿಯ ಅಭಿಯಂತರರು ನವೀನ್ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿ, ಮೋಟಾರುಗಳು ಕೇಬಲ್ಗಳನ್ನು ಅಳವಡಿಸುವ ವ್ಯವಸ್ಥೆ ಮಾಡಿದರು. ನೀರು ಬಿಡುವಂತೆ ಸಿಬ್ಬಂದಿಗಳಿಗೆ ತಾಕಿತು ಮಾಡಿದರು. ಜನರು ಘಟಕದ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.
ನಗರದ ಹೈದರಾಬಾದ್ ರಸ್ತೆಯಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ನೀರು ಸರಬರಾಜು ಘಟಕದಲ್ಲಿ ಐಪಿ ಪಂಪ್ ಸೆಟ್ಗಳು ಹಾಳಾಗಿವೆ ಎಂದು ನೆಪವೊಡ್ಡಿ ಕಳೆದ ವಾರದಿಂದ ಕುಡಿಯುವ ನೀರು ಬಿಟ್ಟಿಲ್ಲ. ಇದರ ಪರಿಣಾಮ ನಾನಾ ಬಡವಣೆಗಳ ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೇಸತ್ತ ಜನ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಎಲ್ಬಿಎಸ್ ನಗರ, ಗಂಜ್ ಏರಿಯಾ, ಮಡ್ಡಿಪೇಟ, ಸಿಯಾತಲಾಬ್, ಅಂದ್ರೂನ್ ಕಿಲ್ಲಾ, ಬೇರೂನ್ ಕಿಲ್ಲಾ, ಮಕ್ತಲ್ ಪೇಟೆ, ಬೆಸ್ತವಾರಪೇಟ, ಲೋಹರ ವಾಡಿಯಲ್ಲಿ ಜನರಿಗೆ ನೀರು ಸರಬರಾಜು ಮಾಡಿಲ್ಲ. ಐಪಿ ಪಂಪ್ ಸೆಟ್ ಕೆಲಸ ಮಾಡುವ ಮೇಸ್ತ್ರಿ ಮೋಟಾರುಗಳು ಬಂದ್ ಮಾಡಿ ನೀರು ಬರದಂತೆ ಮಾಡುತ್ತಾರೆ ಎಂದು ಆರೋಪಿಸಿದರು. ವಿಷಯ ತಿಳಿಸಿದು ನಗರಸಭೆಯ ಕಿರಿಯ ಅಭಿಯಂತರರು ನವೀನ್ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿ, ಮೋಟಾರುಗಳು ಕೇಬಲ್ಗಳನ್ನು ಅಳವಡಿಸುವ ವ್ಯವಸ್ಥೆ ಮಾಡಿದರು. ನೀರು ಬಿಡುವಂತೆ ಸಿಬ್ಬಂದಿಗಳಿಗೆ ತಾಕಿತು ಮಾಡಿದರು. ಜನರು ಘಟಕದ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.