ರಾಯಚೂರು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ
ರಾಯಚೂರು ವಿಡಿಯೋಗಳಿಗೆ ಚಂದಾದಾರರಾಗಿ
ರಾಯಚೂರು ಜಿಲ್ಲೆಯಲ್ಲಿ ಬಲಗಡೆ ತುಂಗಭದ್ರಾ, ಎಡಗಡೆ ಕೃಷ್ಣಾ ನದಿಗಳು ಹರಿಯುತ್ತಿದ್ದರೂ ಕೂಡ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕಳೆದ ಒಂದುವಾರದಿಂದ ಮೂರುದಿನಕ್ಕೊಮ್ಮೆ ನಗರಕ್ಕೆ ನೀರು ಬಿಡಲಾಗುತ್ತಿದ್ದರೆ, ಇನ್ನು ಗ್ರಾಮೀಣ ಪ್ರದೇದಲ್ಲಂತೂ ನೀರಿಗಾಗಿ ಮಹಿಳೆಯರು ಕಾಲಿ ಕೊಡ ಹಿಡಿದು ಹೊಲ ಗದ್ದೆಗಳಲ್ಲಿ ಇರುವ ಬೋರವೆಲ್ಲಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಒಂದು ತಿಂಗಳಿಂದ ರಾಯಚೂರು ತಾಲ್ಲೂಕಿನ ಪೂರತಿಪ್ಲಿ, ಅತ್ತನೂರು ಗ್ರಾಮ ಸೇರಿದಂತೆ ಸುತ್ತ ಮುತ್ತ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸಿನ ಯೋಜನೆಯಡಿ ಕೊಟಿಗಟ್ಟಲೆ ಹಣ ಮೀಸಲಿಟ್ಟರೂ ಕೂಡ ಸರಕಾರ ಕೊಟ್ಟ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ ಇರುವುದರಿಂದ ಇವತ್ತು ಕುಡಿಯುವ ನೀರು ಸಿಗದಂತಾಗಿದೆ.
ಕುಡಿಯುವ ನೀರಿಗಾಗಿ ಟ್ಯಾಂಕರ್ಗಳನ್ನೆ ನಂಬಿದ್ದು, ಗ್ರಾಮಕ್ಕೆ ಟ್ಯಾಂಕರ್ ಬಂದರೆ ಸಾಕು ಮಹಿಳೆಯರು ತಾ ಮುಂದು ನಾ ಮುಂದು ಎಂದು ಕೊಡ ಹಿಡಿದು ನೀರು ತುಂಬಲು ಹರಸಾಹಸ ಪಡುತ್ತಿದ್ದಾರೆ. ಈ ಬಾರಿ ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇದ್ದ ಕೊಳವೆ ಬಾವಿಗಳು ನೀರಿಲ್ಲದೇ ಬತ್ತಿ ಹೋಗಿದ್ದು, ಜನ, ಜಾನುವಾರುಗಳು ನೀರಿಗಾಗಿ ಅಲೆದಾಡುತ್ತಿವೆ. ಚಳಿಗಾಲದಲ್ಲಿಯೇ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಇನ್ನು ಬೇಸಿಗೆ ಕಾಲದಲ್ಲಿ ಯಾವ ರೀತಿ ಪರಿಸ್ಥಿತಿ ನಿರ್ಮಾಣ ವಾಗುತ್ತದೆ ಎಂಬುದು ಜನರನ್ನು ಮತ್ತಷ್ಟು ಯೋಚನೆಗೆ ದೂಡಿದೆ.
ಕಳೆದ ಒಂದು ತಿಂಗಳಿಂದ ರಾಯಚೂರು ತಾಲ್ಲೂಕಿನ ಪೂರತಿಪ್ಲಿ, ಅತ್ತನೂರು ಗ್ರಾಮ ಸೇರಿದಂತೆ ಸುತ್ತ ಮುತ್ತ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸಿನ ಯೋಜನೆಯಡಿ ಕೊಟಿಗಟ್ಟಲೆ ಹಣ ಮೀಸಲಿಟ್ಟರೂ ಕೂಡ ಸರಕಾರ ಕೊಟ್ಟ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ ಇರುವುದರಿಂದ ಇವತ್ತು ಕುಡಿಯುವ ನೀರು ಸಿಗದಂತಾಗಿದೆ.
ಕುಡಿಯುವ ನೀರಿಗಾಗಿ ಟ್ಯಾಂಕರ್ಗಳನ್ನೆ ನಂಬಿದ್ದು, ಗ್ರಾಮಕ್ಕೆ ಟ್ಯಾಂಕರ್ ಬಂದರೆ ಸಾಕು ಮಹಿಳೆಯರು ತಾ ಮುಂದು ನಾ ಮುಂದು ಎಂದು ಕೊಡ ಹಿಡಿದು ನೀರು ತುಂಬಲು ಹರಸಾಹಸ ಪಡುತ್ತಿದ್ದಾರೆ. ಈ ಬಾರಿ ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇದ್ದ ಕೊಳವೆ ಬಾವಿಗಳು ನೀರಿಲ್ಲದೇ ಬತ್ತಿ ಹೋಗಿದ್ದು, ಜನ, ಜಾನುವಾರುಗಳು ನೀರಿಗಾಗಿ ಅಲೆದಾಡುತ್ತಿವೆ. ಚಳಿಗಾಲದಲ್ಲಿಯೇ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಇನ್ನು ಬೇಸಿಗೆ ಕಾಲದಲ್ಲಿ ಯಾವ ರೀತಿ ಪರಿಸ್ಥಿತಿ ನಿರ್ಮಾಣ ವಾಗುತ್ತದೆ ಎಂಬುದು ಜನರನ್ನು ಮತ್ತಷ್ಟು ಯೋಚನೆಗೆ ದೂಡಿದೆ.