ಡಿಕೆಶಿ-ತಮಿಳುನಾಡು ಸಿಎಂ ನಡುವೆ ಬೆಂಗಳೂರಿನಲ್ಲಿ ಬಹಳ ವ್ಯವಹಾರ ಇದೆ ; ಸಿಪಿ ಯೋಗೇಶ್ವರ್
1128 views
ರಾಮನಗರ ವಿಡಿಯೋಗಳಿಗೆ ಚಂದಾದಾರರಾಗಿರಾಮನಗರ: ಕಾವೇರಿ ಜಲ ವಿವಾದವನ್ನು ಡಿಕೆ ಶಿವಕುಮಾರ್ ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ, ರಾಮನಗರದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾವೇರಿ ನೀರಿನ ವಿಚಾರವಾಗಿ ಡಿ.ಕೆ ಶಿವಕುಮಾರ್ ಸರಿಯಾಗಿ ಕೆಲಸ ಮಾಡ್ತಿಲ್ಲ, ಕಾವೇರಿ ಕೊಳ್ಳದ ಜನರ ಬಗ್ಗೆ ಅವರಿಗೆ ಅರಿವಿಲ್ಲ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ನೀರು ಬಿಡುತ್ತಿದ್ದಾರೆ ಎಂದು ಹೇಳಿದರು. ಅಲ್ಲದೇ ತಮಿಳುನಾಡು ಸಿಎಂ ಜೊತೆಗೆ ಡಿಕೆಶಿಗೆ ವ್ಯಾಪಾರ ಸಂಬಂಧ ಇದೆ, ಬೆಂಗಳೂರಿನಲ್ಲಿ ಇವರಿಬ್ಬರದ್ದು ಬಹಳ ವ್ಯವಹಾರಗಳಿವೆ, ರಾಜಕೀಯವಾಗಿ ಡಿಕೆಶಿ-ಸ್ಟಾಲಿನ್ ಪಾಟ್ನರ್ಸ್, ಹಾಗಾಗಿ ಕರ್ನಾಟಕ, ಮಂಡ್ಯ, ರಾಮನಗರ ಜನರ ಹಿತ ಬೇಕಿಲ್ಲ, ಹಳೇ ಮೈಸೂರು ಭಾಗದಲ್ಲಿ ಇರೋದು ಒಂದೇ ಡ್ಯಾಂ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಆಗುತ್ತೆ, ಸಮಸ್ಯೆ ಬಂದಾಗ ಮೇಕೆದಾಟು ಯೋಜನೆ ಅಂತ ಡ್ರಾಮಾ ಮಾಡ್ತಾರೆ, ಡಿಕೆ ಶಿವಕುಮಾರ್ ರಿಂದ ಈ ರಾಜ್ಯದ ಜನ ಏನೂ ನಿರೀಕ್ಷೆ ಮಾಡುವ ಹಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನೂ ಲೋಕಸಭೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬೇಕು, ಆ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ, ಮೈತ್ರಿ ಮಾಡಿಕೊಳ್ಳುವಂತೆ ಮಾಜಿ ಪ್ರಧಾನಿ ದೇವೇಗೌಡರಿಗೆ ವೈಯಕ್ತಿಕವಾಗಿ ಮನವಿ ಮಾಡುತ್ತೇನೆ, ಒಟ್ಟಿನಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲೇಬೇಕು ಎಂದು ಹೇಳಿದ್ದಾರೆ.
ಕಾವೇರಿ ನೀರಿನ ವಿಚಾರವಾಗಿ ಡಿ.ಕೆ ಶಿವಕುಮಾರ್ ಸರಿಯಾಗಿ ಕೆಲಸ ಮಾಡ್ತಿಲ್ಲ, ಕಾವೇರಿ ಕೊಳ್ಳದ ಜನರ ಬಗ್ಗೆ ಅವರಿಗೆ ಅರಿವಿಲ್ಲ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ನೀರು ಬಿಡುತ್ತಿದ್ದಾರೆ ಎಂದು ಹೇಳಿದರು. ಅಲ್ಲದೇ ತಮಿಳುನಾಡು ಸಿಎಂ ಜೊತೆಗೆ ಡಿಕೆಶಿಗೆ ವ್ಯಾಪಾರ ಸಂಬಂಧ ಇದೆ, ಬೆಂಗಳೂರಿನಲ್ಲಿ ಇವರಿಬ್ಬರದ್ದು ಬಹಳ ವ್ಯವಹಾರಗಳಿವೆ, ರಾಜಕೀಯವಾಗಿ ಡಿಕೆಶಿ-ಸ್ಟಾಲಿನ್ ಪಾಟ್ನರ್ಸ್, ಹಾಗಾಗಿ ಕರ್ನಾಟಕ, ಮಂಡ್ಯ, ರಾಮನಗರ ಜನರ ಹಿತ ಬೇಕಿಲ್ಲ, ಹಳೇ ಮೈಸೂರು ಭಾಗದಲ್ಲಿ ಇರೋದು ಒಂದೇ ಡ್ಯಾಂ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಆಗುತ್ತೆ, ಸಮಸ್ಯೆ ಬಂದಾಗ ಮೇಕೆದಾಟು ಯೋಜನೆ ಅಂತ ಡ್ರಾಮಾ ಮಾಡ್ತಾರೆ, ಡಿಕೆ ಶಿವಕುಮಾರ್ ರಿಂದ ಈ ರಾಜ್ಯದ ಜನ ಏನೂ ನಿರೀಕ್ಷೆ ಮಾಡುವ ಹಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನೂ ಲೋಕಸಭೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬೇಕು, ಆ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ, ಮೈತ್ರಿ ಮಾಡಿಕೊಳ್ಳುವಂತೆ ಮಾಜಿ ಪ್ರಧಾನಿ ದೇವೇಗೌಡರಿಗೆ ವೈಯಕ್ತಿಕವಾಗಿ ಮನವಿ ಮಾಡುತ್ತೇನೆ, ಒಟ್ಟಿನಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲೇಬೇಕು ಎಂದು ಹೇಳಿದ್ದಾರೆ.