ನನ್ನನ್ನು ಸಿಎಂ ಮಾಡ್ಬೇಕು ಅಂತಾ ನೀವು ಗೆಲ್ಲಿಸಿದ್ರಿ; ಆದರೆ, ಹೈಕಮಾಂಡ್ ಡಿಸಿಎಂ ಮಾಡಿದೆ: ಡಿಕೆ ಶಿವಕುಮಾರ್
1070 views
ರಾಮನಗರ ವಿಡಿಯೋಗಳಿಗೆ ಚಂದಾದಾರರಾಗಿರಾಮನಗರ: ನನ್ನನ್ನು ಸಿಎಂ ಮಾಡಬೇಕು ಎಂದು ನೀವು ಗೆಲ್ಲಿಸಿದ್ರಿ. ಆದರೆ, ಹೈಕಮಾಂಡ್ ನನಗೆ ಡಿಸಿಎಂ ಜವಾಬ್ದಾರಿ ನೀಡಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಿತವಚನ ನೀಡಿದ್ದಾರೆ. ಅವರ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮುಂದೆ ಸಿಎಂ ಆಗ್ತೀನಿ ಎಂದು ಹೇಳಿದ್ದಾರೆ.
ಕನಕಪುರದ ಕಲ್ಲಹಳ್ಳಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನನ್ನನ್ನ ರಾಜ್ಯದ ಉಪಮುಖ್ಯಮಂತ್ರಿ ಮಾಡಿದೆ. ನಾನು ಎಷ್ಟೇ ಎತ್ತರಕ್ಕೆ ಬೆಳೆದ್ರು ಇಲ್ಲಿ ಮಾತ್ರ ನಿಮ್ಮ ಮನೆಮಗ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ರಾಜಕಾರಣಕ್ಕೆ ಬಂದೆ. ನನಗೆ ಯಾವತ್ತೂ ಅಧಿಕಾರದ ಮದ ಇಲ್ಲ, ಮುಂದೆಯೂ ಇರಲ್ಲ. ಕನಕಪುರ ಮಾದರಿ ಕ್ಷೇತ್ರ ಆಗಬೇಕು. ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಕೊಟ್ಟಿದ್ದೇನೆ. ನನ್ನ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಆಗಬೇಕು. ಬಿಜೆಪಿ ಸರ್ಕಾರ ಮೆಡಿಕಲ್ ಕಾಲೇಜು ತಪ್ಪಿಸಿತ್ತು. ಅದನ್ನ ಮತ್ತೆ ತರಲು ನಾನು ಮುಂದಾಗಿದ್ದೇನೆ ಎಂದರು.
ಕನಕಪುರದ ಕಲ್ಲಹಳ್ಳಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನನ್ನನ್ನ ರಾಜ್ಯದ ಉಪಮುಖ್ಯಮಂತ್ರಿ ಮಾಡಿದೆ. ನಾನು ಎಷ್ಟೇ ಎತ್ತರಕ್ಕೆ ಬೆಳೆದ್ರು ಇಲ್ಲಿ ಮಾತ್ರ ನಿಮ್ಮ ಮನೆಮಗ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ರಾಜಕಾರಣಕ್ಕೆ ಬಂದೆ. ನನಗೆ ಯಾವತ್ತೂ ಅಧಿಕಾರದ ಮದ ಇಲ್ಲ, ಮುಂದೆಯೂ ಇರಲ್ಲ. ಕನಕಪುರ ಮಾದರಿ ಕ್ಷೇತ್ರ ಆಗಬೇಕು. ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಕೊಟ್ಟಿದ್ದೇನೆ. ನನ್ನ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಆಗಬೇಕು. ಬಿಜೆಪಿ ಸರ್ಕಾರ ಮೆಡಿಕಲ್ ಕಾಲೇಜು ತಪ್ಪಿಸಿತ್ತು. ಅದನ್ನ ಮತ್ತೆ ತರಲು ನಾನು ಮುಂದಾಗಿದ್ದೇನೆ ಎಂದರು.