ರಾಮನಗರ ಜಿಲ್ಲೆ ತೆಗೆಯುವಾಗ ಮಾತಾಡುತ್ತೇನೆ ; ಡಿಕೆಶಿ ವಿರುದ್ಧ ಎಚ್ಡಿ ರೇವಣ್ಣ ಕಿಡಿ
1069 views
ರಾಮನಗರ ವಿಡಿಯೋಗಳಿಗೆ ಚಂದಾದಾರರಾಗಿಹಾಸನ: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರಕ್ಕೆ ಡಿಕೆಶಿ ವಿರುದ್ಧ ಎಚ್ಡಿ ರೇವಣ್ಣ ಕಿಡಿಕಾರಿದ್ದಾರೆ. ನಮಗೆ ಗೊತ್ತಿಲ್ಲಪ್ಪ, ಯಾವುದನ್ನು ಸೇರಿಸುತ್ತಾರೆ, ಯಾರಿಗೆ ಗೊತ್ತಿದೆ, ರಾಮನಗರಕ್ಕೆ ಕುಮಾರಸ್ವಾಮಿ ಅವರು ಏನೇನ್ ಮಾಡಿದ್ದಾರೆ ಅಂತ ದಾಖಲೆ ತೆಗೆದು ನೋಡಿದ್ರೆ ಗೊತ್ತಾಗುತ್ತೆ ಎಂದು ಎಚ್ಡಿ ರೇವಣ್ಣ ಹೇಳಿದರು
ಹಾಸನದಲ್ಲಿ ಮಾತನಾಡಿದ ಅವರು, ಇಂಜಿನಿಯರಿಂಗ್ ಕಾಲೇಜಿಗೆ 120 ಕೋಟಿ ಕೊಟ್ಟಿದ್ದಾರೆ, ಯಾರ ಮಕ್ಕಳು ಓದ್ತಾರೆ, ಕುಮಾರಸ್ವಾಮಿ ಮಕ್ಕಳು ಓದ್ತಾರಾ?, ಮೆಡಿಕಲ್ ಕಾಲೇಜು ಬೇಕು ಅಂತ ಕೆಲವರು ತಡೆ ಹಿಡಿದಿದ್ದಾರೆ, ರಾಮನಗರವನ್ನು ಒಂದು ಜಿಲ್ಲಾ ಕೇಂದ್ರ ಮಾಡಬೇಕು, ಕೆಂಪೇಗೌಡರ ಹೆಸರು ಇಡಬೇಕು ಅಂತ ಕುಮಾರಸ್ವಾಮಿ ತೀರ್ಮಾನ ಮಾಡಿದ್ರು, ಇಲ್ಲಾ ರಾಮನಗರ ಜಿಲ್ಲೆ ಎದು ಹೆಸರು ಇಡಬೇಕು ಅಂತ ಕೆಲವರು ಹೇಳಿದ ಮೇಲೆ ರಾಮನಗರ ಅಂತ ಹೆಸರು ಇಟ್ಟರು. ರಾಮನಗರ ಜಿಲ್ಲೆಗೆ ಎಷ್ಟು ಕಾಲೇಜುಗಳು, ಕೆಪಿಎಸ್ಸಿ ಸ್ಕೂಲ್, ರಸ್ತೆಗಳು, ಡಿಪ್ಲೋಮಾ ಕಾಲೇಜು, ದಾಖಲೆಗಳನ್ನು ತೆಗೆದು ನೋಡಿದರೆ ಗೊತ್ತಾಗುತ್ತೆ ಎಂದರು.
ಮೈಸೂರು-ಬೆಂಗಳೂರು ಬೈಪಾಸ್ ರೋಡ್ ಕುಮಾರಣ್ಣ ಅವರ ಕಾಲದಲ್ಲಿ ಆಗಿದ್ದು, ನಮ್ಮ ಕಾಲದಲ್ಲಿ ರೈತರು 90% ಲ್ಯಾಂಡ್ ಕೊಟ್ಟಿದ್ದಕ್ಕೆ ಇವತ್ತು ಮೈಸೂರು-ಬೆಂಗಳೂರು ರಸ್ತೆ ಆಗಿದ್ದು ರಾಮನಗರ, ಚನ್ನಪಟ್ಟಣ, ಬಿಡದಿ ಬೈಪಾಸ್ ಮಾಡಿದವರು ಯಾರು? ಕುಮಾರಣ್ಣ ಅವರು ಏನ್ ಮಾಡಿದ್ದಾರೆ ಅನ್ನೋದನ್ನ ತೆಗೆದು ನೋಡಲಿ. ರಾಮನಗರ, ಚಿಕ್ಕಬಳ್ಳಾಪುರವನ್ನು ಯಾರು ಜಿಲ್ಲಾ ಕೇಂದ್ರ ಮಾಡಿದ್ದು?, ನಾನು ಯಾರ ಬಗ್ಗೆ ಟೀಕೆ, ಟಿಪ್ಪಣಿ ಮಾಡಲ್ಲ ಮೆಡಿಕಲ್ ಕಾಲೇಜು, ರಾಜೀವ್ಗಾಂಧಿ ವಿಶ್ವವಿದ್ಯಾಲಯವನ್ನು ಹತ್ತು ವರ್ಷದಿಂದ ಯಾರು ತಡೆದಿದ್ದಾರೆ. ಕಾಲ ಬಂದಾಗ ಹೇಳುತ್ತೇನೆ ಎಂದ ಅವರು ರಾಮನಗರ ಜಿಲ್ಲಾ ಕೇಂದ್ರ ತೆಗೆಯಲು ಬಂದಾಗ ಮಾತನಾಡುತ್ತೇನೆ ಎಂದರು.
ಹೊಸದಾಗಿ ಸೇರಿಸಲಿ ನಾವೇನು ಬೇಡ ಅಂತೀವಾ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಮಕ್ಕಳಿಗೆ ಮೂಲಭೂತ ಸೌಕರ್ಯ ಕೊಡಲು ಆಗಿಲ್ಲ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಲು ಆಗ್ತಿಲ್ಲ ಇನ್ನೇನು ಮಾಡ್ತಾರೆ ಇವ್ರು, ಕಾಲೇಜುಗಳಲ್ಲಿ ಡೆಸ್ಕ್, ಮೂಲಭೂತ ಸೌಕರ್ಯಗಳಿಲ್ಲ, ಉಪನ್ಯಾಸಕರಿಲ್ಲ. ಮೊದಲು ಮೂಲಭೂತ ಸೌಕರ್ಯ ಕೊಡಿ. ರೈತರ ಪಂಪ್ಸೆಟ್ಗಳಿಗೆ ಮೊದಲು ಹಗಲು ವೇಳೆ ಕರೆಂಟ್ ಕೊಡಿ ಎಂದರು.
ಹಾಸನದಲ್ಲಿ ಮಾತನಾಡಿದ ಅವರು, ಇಂಜಿನಿಯರಿಂಗ್ ಕಾಲೇಜಿಗೆ 120 ಕೋಟಿ ಕೊಟ್ಟಿದ್ದಾರೆ, ಯಾರ ಮಕ್ಕಳು ಓದ್ತಾರೆ, ಕುಮಾರಸ್ವಾಮಿ ಮಕ್ಕಳು ಓದ್ತಾರಾ?, ಮೆಡಿಕಲ್ ಕಾಲೇಜು ಬೇಕು ಅಂತ ಕೆಲವರು ತಡೆ ಹಿಡಿದಿದ್ದಾರೆ, ರಾಮನಗರವನ್ನು ಒಂದು ಜಿಲ್ಲಾ ಕೇಂದ್ರ ಮಾಡಬೇಕು, ಕೆಂಪೇಗೌಡರ ಹೆಸರು ಇಡಬೇಕು ಅಂತ ಕುಮಾರಸ್ವಾಮಿ ತೀರ್ಮಾನ ಮಾಡಿದ್ರು, ಇಲ್ಲಾ ರಾಮನಗರ ಜಿಲ್ಲೆ ಎದು ಹೆಸರು ಇಡಬೇಕು ಅಂತ ಕೆಲವರು ಹೇಳಿದ ಮೇಲೆ ರಾಮನಗರ ಅಂತ ಹೆಸರು ಇಟ್ಟರು. ರಾಮನಗರ ಜಿಲ್ಲೆಗೆ ಎಷ್ಟು ಕಾಲೇಜುಗಳು, ಕೆಪಿಎಸ್ಸಿ ಸ್ಕೂಲ್, ರಸ್ತೆಗಳು, ಡಿಪ್ಲೋಮಾ ಕಾಲೇಜು, ದಾಖಲೆಗಳನ್ನು ತೆಗೆದು ನೋಡಿದರೆ ಗೊತ್ತಾಗುತ್ತೆ ಎಂದರು.
ಮೈಸೂರು-ಬೆಂಗಳೂರು ಬೈಪಾಸ್ ರೋಡ್ ಕುಮಾರಣ್ಣ ಅವರ ಕಾಲದಲ್ಲಿ ಆಗಿದ್ದು, ನಮ್ಮ ಕಾಲದಲ್ಲಿ ರೈತರು 90% ಲ್ಯಾಂಡ್ ಕೊಟ್ಟಿದ್ದಕ್ಕೆ ಇವತ್ತು ಮೈಸೂರು-ಬೆಂಗಳೂರು ರಸ್ತೆ ಆಗಿದ್ದು ರಾಮನಗರ, ಚನ್ನಪಟ್ಟಣ, ಬಿಡದಿ ಬೈಪಾಸ್ ಮಾಡಿದವರು ಯಾರು? ಕುಮಾರಣ್ಣ ಅವರು ಏನ್ ಮಾಡಿದ್ದಾರೆ ಅನ್ನೋದನ್ನ ತೆಗೆದು ನೋಡಲಿ. ರಾಮನಗರ, ಚಿಕ್ಕಬಳ್ಳಾಪುರವನ್ನು ಯಾರು ಜಿಲ್ಲಾ ಕೇಂದ್ರ ಮಾಡಿದ್ದು?, ನಾನು ಯಾರ ಬಗ್ಗೆ ಟೀಕೆ, ಟಿಪ್ಪಣಿ ಮಾಡಲ್ಲ ಮೆಡಿಕಲ್ ಕಾಲೇಜು, ರಾಜೀವ್ಗಾಂಧಿ ವಿಶ್ವವಿದ್ಯಾಲಯವನ್ನು ಹತ್ತು ವರ್ಷದಿಂದ ಯಾರು ತಡೆದಿದ್ದಾರೆ. ಕಾಲ ಬಂದಾಗ ಹೇಳುತ್ತೇನೆ ಎಂದ ಅವರು ರಾಮನಗರ ಜಿಲ್ಲಾ ಕೇಂದ್ರ ತೆಗೆಯಲು ಬಂದಾಗ ಮಾತನಾಡುತ್ತೇನೆ ಎಂದರು.
ಹೊಸದಾಗಿ ಸೇರಿಸಲಿ ನಾವೇನು ಬೇಡ ಅಂತೀವಾ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಮಕ್ಕಳಿಗೆ ಮೂಲಭೂತ ಸೌಕರ್ಯ ಕೊಡಲು ಆಗಿಲ್ಲ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಲು ಆಗ್ತಿಲ್ಲ ಇನ್ನೇನು ಮಾಡ್ತಾರೆ ಇವ್ರು, ಕಾಲೇಜುಗಳಲ್ಲಿ ಡೆಸ್ಕ್, ಮೂಲಭೂತ ಸೌಕರ್ಯಗಳಿಲ್ಲ, ಉಪನ್ಯಾಸಕರಿಲ್ಲ. ಮೊದಲು ಮೂಲಭೂತ ಸೌಕರ್ಯ ಕೊಡಿ. ರೈತರ ಪಂಪ್ಸೆಟ್ಗಳಿಗೆ ಮೊದಲು ಹಗಲು ವೇಳೆ ಕರೆಂಟ್ ಕೊಡಿ ಎಂದರು.