Bengaluru - Mysore Expressway : ಮೊದಲ ಮಳೆಗೆ ಎಕ್ಸ್ಪ್ರೆಸ್ ವೇ ಜಲಾವೃತ! ಕೆರೆಯಂತಾದ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ!
1013 views
ರಾಮನಗರ ವಿಡಿಯೋಗಳಿಗೆ ಚಂದಾದಾರರಾಗಿರಾಮನಗರ : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೆ ವರುಣ ಅವಾಂತರ ಸೃಷ್ಟಿಸಿದ್ದಾನೆ. ರಾಮನಗರ ಸಮೀಪದ ಸಂಘಬಸವನದೊಡ್ಡಿ ಬಳಿ ಹೆದ್ದಾರಿ ಜಲಾವೃತವಾಗಿದೆ. ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿ ಮಳೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರಿನಲ್ಲಿಯೇ ವಾಹನ ಸಂಚರಿಸಿದ್ದರಿಂದ ಹಲವು ವಾಹನಗಳು ಕೆಟ್ಟು ನಿಂತಿವೆ. ಮಳೆನೀರು ಸರಾಗವಾಗಿ ಹರಿದುಹೋಗದೆ ಅವಾಂತರ ಸೃಷ್ಟಿಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಬಾರಿ ಟೋಲ್ ಕಟ್ಟಿದ್ರೂ ಸರಿಯಾದ ವ್ಯವಸ್ಥೆ ಇಲ್ಲ ಎಂದು ವಾಹನ ಸವಾರರು ಗರಂ ಆಗಿದ್ದಾರೆ.
ಇದಷ್ಟೇ ಅಲ್ಲದೇ ಮಳೆ ನೀರಿಗೆ ಕೆಟ್ಟು ನಿಂತ ಕಾರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಈ ವೇಳೆ ಹೆದ್ದಾರಿ ಪ್ರಾಧಿಕಾರಕ್ಕೆ ಕರೆ ಮಾಡಿದ್ರೂ ಅಧಿಕಾರಿಗಳು ನೆರವಿಗೆ ಬಂದಿಲ್ಲ ಎಂದು ಸರ್ಕಾರ ಹಾಗೂ ಹೆದ್ದಾರಿ
ಇದಷ್ಟೇ ಅಲ್ಲದೇ ಮಳೆ ನೀರಿಗೆ ಕೆಟ್ಟು ನಿಂತ ಕಾರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಈ ವೇಳೆ ಹೆದ್ದಾರಿ ಪ್ರಾಧಿಕಾರಕ್ಕೆ ಕರೆ ಮಾಡಿದ್ರೂ ಅಧಿಕಾರಿಗಳು ನೆರವಿಗೆ ಬಂದಿಲ್ಲ ಎಂದು ಸರ್ಕಾರ ಹಾಗೂ ಹೆದ್ದಾರಿ