ಪಠ್ಯ ಪುಸ್ತಕದ ಪರಿಷ್ಕರಣೆ 100% ಮಾಡುತ್ತೇವೆ; ಮಕ್ಕಳಿಗೆ ಏನು ಬೇಕೋ ಅದನ್ನು ನೀಡ್ತೀವಿ: ಮಧು ಬಂಗಾರಪ್ಪ
1052 views
ಶಿವಮೊಗ್ಗ ವಿಡಿಯೋಗಳಿಗೆ ಚಂದಾದಾರರಾಗಿಶಿವಮೊಗ್ಗ: ಶಾಸಕನಾಗಿ, ಮಂತ್ರಿಯಾಗಿ ಅದರಲ್ಲೂ ಮಕ್ಕಳ ವಿದ್ಯಾಭ್ಯಾಸ ಒದಗಿಸುವ ಮಂತ್ರಿ ಸ್ಥಾನ ಸಿಕ್ಕಿದ್ದು ನನಗೆ ತುಂಬಾ ಸಂತೋಷವಾಗಿದೆ. ಅದರಲ್ಲೂ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಂತಯೇ ನನಗೆ ಶಿವಮೊಗ್ಗ ಕ್ಷೇತ್ರದ ಜನತೆ ಆರ್ಶಿವಾದ ಹಾಗೂ ಪಕ್ಷದ ಅಭ್ಯರ್ಥಿಯಾಗಿ ಬೆಂಬಲ ಸಿಕ್ಕಿದೆ. ನನಗೆ ಅದ್ದೂರಿ ಸ್ವಾಗತ ನೀಡಿದ್ದು ನನಗೆ ತುಂಬ ಸಂತೋಷವಾಗಿದೆ. ನಮ್ಮ ಪ್ರಣಾಳಿಕೆಯಲ್ಲಿನ ಗ್ಯಾರಂಟಿಯನ್ನು ನೀಡುವುದು ನಮ್ಮ ಮುಖ್ಯ ಗುರಿಯಾಗಿದೆ. ಒಳ್ಳೆಯ ರೀತಿಯಲ್ಲಿ ಆಡಳಿತ ನೀಡುತ್ತೆವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪಠ್ಯ ಪುಸ್ತಕದ ಪರಿಷ್ಕರಣೆ 100% ಖಂಡಿತಾ ಮಾಡುತ್ತೇವೆ. ಯಾವುದೇ ಗೂಂದಲವಿಲ್ಲ. ಮಕ್ಕಳಿಗೆ ಅವಶ್ಯಕತೆ ಏನಿದೆ ಅದನ್ನು ನೀಡುತ್ತೇವೆ. ಮಕ್ಕಳಿಗೆ ಏನು ಬೇಕೋ ಅದನ್ನು ನೀಡುತ್ತೇವೆ ಎಂದು ಸಿಎಂ ಕೂಡ ಹೇಳಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಆಗುತ್ತದೆ ಎಂದು ತಿಳಿಸಿದ್ವಿ. ಈಗಾಗಲೇ ಪಠ್ಯ ಪುಸ್ತಕ ಶಾಲೆಗಳಿಗೆ ಹೋಗಿದೆ. ಅದನ್ನು ತಡೆಯಲು ಅಗಲಿಲ್ಲ. ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಪ್ರಿಂಟ್ ಅಗಿತ್ತು. ಕಾನೂನು ಬದ್ಧವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು.
ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಅವರೂ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಬೇಕೆಂಬ ಆಶಯ ಇಟ್ಟುಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಏನ್ ಬದಲಾವಣೆ ಮಾಡಬೇಕೋ ಅದನ್ನು ಮಾಡೇ ಮಾಡುತ್ತೇವೆ. ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೆನೆ. ಎಲ್ಲಾ ವಾತಾವರಣ ಚೆನ್ನಾಗಿದೆ. ಸ್ವಲ್ಪ ಆಡಳಿತವನ್ನು ಒಂದು ಹಂತಕ್ಕೆ ತರಬೇಕಿದೆ. ಉತ್ತಮ ಅಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳಿದ್ದಾರೆ, ಪೋಷಕರು ಇದ್ದಾರೆ ಎಲ್ಲಾವನ್ನು ಸರಿಮಾಡೋಣ ಎಂದರು. ಗ್ಯಾರಂಟಿ ನಾವು ನೀಡಿದ ಮೇಲೆ ವಿರೋಧ ಪಕ್ಷದವರ ರೂಟ್ ಬದಲಾವಣೆ ಆಗಿದೆ ಎಂದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪಠ್ಯ ಪುಸ್ತಕದ ಪರಿಷ್ಕರಣೆ 100% ಖಂಡಿತಾ ಮಾಡುತ್ತೇವೆ. ಯಾವುದೇ ಗೂಂದಲವಿಲ್ಲ. ಮಕ್ಕಳಿಗೆ ಅವಶ್ಯಕತೆ ಏನಿದೆ ಅದನ್ನು ನೀಡುತ್ತೇವೆ. ಮಕ್ಕಳಿಗೆ ಏನು ಬೇಕೋ ಅದನ್ನು ನೀಡುತ್ತೇವೆ ಎಂದು ಸಿಎಂ ಕೂಡ ಹೇಳಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಆಗುತ್ತದೆ ಎಂದು ತಿಳಿಸಿದ್ವಿ. ಈಗಾಗಲೇ ಪಠ್ಯ ಪುಸ್ತಕ ಶಾಲೆಗಳಿಗೆ ಹೋಗಿದೆ. ಅದನ್ನು ತಡೆಯಲು ಅಗಲಿಲ್ಲ. ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಪ್ರಿಂಟ್ ಅಗಿತ್ತು. ಕಾನೂನು ಬದ್ಧವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು.
ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಅವರೂ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಬೇಕೆಂಬ ಆಶಯ ಇಟ್ಟುಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಏನ್ ಬದಲಾವಣೆ ಮಾಡಬೇಕೋ ಅದನ್ನು ಮಾಡೇ ಮಾಡುತ್ತೇವೆ. ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೆನೆ. ಎಲ್ಲಾ ವಾತಾವರಣ ಚೆನ್ನಾಗಿದೆ. ಸ್ವಲ್ಪ ಆಡಳಿತವನ್ನು ಒಂದು ಹಂತಕ್ಕೆ ತರಬೇಕಿದೆ. ಉತ್ತಮ ಅಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳಿದ್ದಾರೆ, ಪೋಷಕರು ಇದ್ದಾರೆ ಎಲ್ಲಾವನ್ನು ಸರಿಮಾಡೋಣ ಎಂದರು. ಗ್ಯಾರಂಟಿ ನಾವು ನೀಡಿದ ಮೇಲೆ ವಿರೋಧ ಪಕ್ಷದವರ ರೂಟ್ ಬದಲಾವಣೆ ಆಗಿದೆ ಎಂದರು.