ಗ್ಯಾರಂಟಿ ಮೇಲೆ ಗೆದ್ದ ಸರ್ಕಾರ, ಜನರಿಗೆ, ರೈತರಿಗೆ ನೀಡಿದ ಭರವಸೆ ಈಡೇರಿಸಲೇಬೇಕು: ರೈತ ಸಂಘ
1138 views
ಶಿವಮೊಗ್ಗ ವಿಡಿಯೋಗಳಿಗೆ ಚಂದಾದಾರರಾಗಿಶಿವಮೊಗ್ಗ: ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ರವರು ಉಪಮುಖ್ಯಮಂತ್ರಿಯಾಗಿದ್ದಾರೆ. ಜೊತೆಗೆ 8 ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದನ್ನ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಭಿನಂದಿಸುತ್ತದೆ ಎಂದು ರಾಜ್ಯಾಧ್ಯಕ್ಷರು ಹೇಳಿದರು.
ಕರ್ನಾಟಕದಲ್ಲಿ ವಿಶೇಷವಾಗಿ ರೈತರು, ಕೃಷಿ ಕಾರ್ಮಿಕರು, ದುಡಿಯುವ ವರ್ಗದ ಜನರು, ಬಡವರು ಎಲ್ಲಾ ಜಾತಿಯ, ಧರ್ಮದ ಜನರು ಸರ್ಕಾರದ ಮೇಲೆ ತುಂಬಾ ನಂಬಿಕೆಯಿಟ್ಟು ಮತ ಹಾಕಿ ಗೆಲ್ಲಿಸಿದ್ದಾರೆ. ಜನರಿಗೆ ಭರವಸೆ ಕೊಟ್ಟಂತೆ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸುವುದು, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದು, ಡಾ. ಸ್ವಾಮಿನಾಥನ್ ವರದಿ ಪ್ರಕಾರ ರೈತ ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡುವುದು, ರೈತರಿಂದ ದವಸ ಧಾನ್ಯಗಳನ್ನ ಖರೀದಿ ಮಾಡಲು ಆವರ್ತನಿಧಿ ಮೀಸಲಿಡುವುದು, ಬಗರ್ಹುಕುಂ ರೈತರಿಗೆ ಹಕ್ಕುಪತ್ರ ವಿತರಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ವಿಶೇಷವಾಗಿ ರೈತರು, ಕೃಷಿ ಕಾರ್ಮಿಕರು, ದುಡಿಯುವ ವರ್ಗದ ಜನರು, ಬಡವರು ಎಲ್ಲಾ ಜಾತಿಯ, ಧರ್ಮದ ಜನರು ಸರ್ಕಾರದ ಮೇಲೆ ತುಂಬಾ ನಂಬಿಕೆಯಿಟ್ಟು ಮತ ಹಾಕಿ ಗೆಲ್ಲಿಸಿದ್ದಾರೆ. ಜನರಿಗೆ ಭರವಸೆ ಕೊಟ್ಟಂತೆ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸುವುದು, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದು, ಡಾ. ಸ್ವಾಮಿನಾಥನ್ ವರದಿ ಪ್ರಕಾರ ರೈತ ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡುವುದು, ರೈತರಿಂದ ದವಸ ಧಾನ್ಯಗಳನ್ನ ಖರೀದಿ ಮಾಡಲು ಆವರ್ತನಿಧಿ ಮೀಸಲಿಡುವುದು, ಬಗರ್ಹುಕುಂ ರೈತರಿಗೆ ಹಕ್ಕುಪತ್ರ ವಿತರಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.