ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಬಾಂಬರ್ ಬಸ್ನಲ್ಲಿ ಓಡಾಡಿರುವ ಮಾಹಿತಿ ಲಭ್ಯ ; ಪರಮೇಶ್ವರ್
1477 views
ತುಮಕೂರು ವಿಡಿಯೋಗಳಿಗೆ ಚಂದಾದಾರರಾಗಿತುಮಕೂರು: ಬಾಂಬ್ ಬ್ಲಾಸ್ಟ್ ಮಾಡಿದ ವ್ಯಕ್ತಿಯನ್ನ ಟ್ರ್ಯಾಕ್ ಮಾಡುತ್ತಿದ್ದೇವೆ, ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಅವರು ಯಾವ್ಯಾವ ದಿಕ್ಕಿನಲ್ಲಿ ಹೋಗಿದ್ದಾರೆ ಅನ್ನೋದನ್ನ ಕಂಡು ಹಿಡಿಯಬೇಕಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ತುಮಕೂರಲ್ಲಿ ಮಾತನಾಡಿದ ಅವರು, ಪೊಲೀಸರ ಏಳೆಂಟು ತಂಡಗಳನ್ನು ಮಾಡಿ ಹುಡುಕ್ತಾ ಇದ್ದೇವೆ. ಸಿಸಿಬಿ ಜೊತೆಗೆ ಎನ್ಐಎ ನವರು ಪಿಕ್ಚರ್ಗೆ ಬಂದಿದ್ದಾರೆ. ಹಾಗಾಗಿ ಸಿಸಿಬಿಯವರು ಯಾವ ಬಸ್ಗೆ ಆ ವ್ಯಕ್ತಿ ಹೋಗಿದ್ದ. ಯಾವ ರೂಟ್ನಲ್ಲಿ ಹೋಗಿದ್ದಾರೆ ಅನ್ನುವ ಲೀಡ್ ಹಿಡ್ಕೊಂಡು. ಹೋದಾಗ ತುಮಕೂರಿಗೆ ಬಂದಿದ್ದಾನೆ ಅನ್ನೋ ಮಾಹಿತಿ. ಅದಕ್ಕಿಂತ ಮುಂದೆ ಹೋಗಿದ್ದಾನೆ ಅನ್ನೋ ಮಾಹಿತಿಯೂ ಇದೆ. ಸಿಸಿಟಿವಿ ಪುಟೇಜ್ ಸೇರಿ ಎಲ್ಲವನ್ನು ಪರಿಶೀಲನೆ ಮಾಡ್ತಿದ್ದಾರೆ. ಯಾವ ಸಮಯದಲ್ಲಿ ಹೋಗಿದ್ದಾರೆ, ಏನು ಅನ್ನೋದನ್ನ ನೋಡ್ತಿದ್ದಾರೆ. ಕೆಲವು ಪಿಕ್ಚರ್ಸ್ ಬೆಂಗಳೂರಿನಲ್ಲಿ ಸಿಕ್ಕಿದೆ. ಅದನ್ನು ಪರಿಶೀಲನೆ ಮಾಡಿ ಟ್ರ್ಯಾಕ್ ಮಾಡ್ತಿದ್ದಾರೆ ಎಂದು ಹೇಳಿದರು.
ನನಗನ್ನಿಸುತ್ತೆ ಆದಷ್ಟು ಶೀಘ್ರವಾಗಿ ಈ ಪ್ರಕರಣ ಭೇಧಿಸುವ ವಿಶ್ವಾಸವಿದೆ. ಆ ವ್ಯಕ್ತಿ ಸಿಗುವವರೆಗೂ ಆತನಿಗೆ ಸಂಘಟನೆಯ ನಂಟಿದೆ ಎಂದು ಹೇಳೋಕಾಗಲ್ಲ, ಶಂಕಿತ ನಾಲ್ವರನ್ನ ವಿಚಾರಣೆ ಮಾಡಿ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಹೇಳಿದರು.
ದಲಿತ ಸಿಎಂ ಬಗ್ಗೆ ನಾನೇನು ಮಾತಾಡಲ್ಲ. ಅದರ ಬಗ್ಗೆ ಉತ್ತರ ಕೊಡಲ್ಲ. ಸ್ಥಿರವಾದಂತಹ ಸರ್ಕಾರ ಕರ್ನಾಟಕದಲ್ಲಿದೆ, ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡಿತಾ ಇದೆ. ಹಾಗಾಗಿ ದಲಿತ ಸಿಎಂ ಬಗ್ಗೆ ಮಾತನಾಡುವುದು ಪ್ರಸ್ತುತ ಅಲ್ಲ. ಮುಂದಿನ ದಿನದಲ್ಲಿ ದಲಿತ ಸಿಎಂ ಆಗಬೇಕೆಂಬ ಪ್ರಶ್ನೆಗೆ. ಮುಂದಿನದು ಮುಂದೆ ನೋಡೋಣ ಎಂದು ಹೇಳಿದರು.
ತುಮಕೂರಲ್ಲಿ ಮಾತನಾಡಿದ ಅವರು, ಪೊಲೀಸರ ಏಳೆಂಟು ತಂಡಗಳನ್ನು ಮಾಡಿ ಹುಡುಕ್ತಾ ಇದ್ದೇವೆ. ಸಿಸಿಬಿ ಜೊತೆಗೆ ಎನ್ಐಎ ನವರು ಪಿಕ್ಚರ್ಗೆ ಬಂದಿದ್ದಾರೆ. ಹಾಗಾಗಿ ಸಿಸಿಬಿಯವರು ಯಾವ ಬಸ್ಗೆ ಆ ವ್ಯಕ್ತಿ ಹೋಗಿದ್ದ. ಯಾವ ರೂಟ್ನಲ್ಲಿ ಹೋಗಿದ್ದಾರೆ ಅನ್ನುವ ಲೀಡ್ ಹಿಡ್ಕೊಂಡು. ಹೋದಾಗ ತುಮಕೂರಿಗೆ ಬಂದಿದ್ದಾನೆ ಅನ್ನೋ ಮಾಹಿತಿ. ಅದಕ್ಕಿಂತ ಮುಂದೆ ಹೋಗಿದ್ದಾನೆ ಅನ್ನೋ ಮಾಹಿತಿಯೂ ಇದೆ. ಸಿಸಿಟಿವಿ ಪುಟೇಜ್ ಸೇರಿ ಎಲ್ಲವನ್ನು ಪರಿಶೀಲನೆ ಮಾಡ್ತಿದ್ದಾರೆ. ಯಾವ ಸಮಯದಲ್ಲಿ ಹೋಗಿದ್ದಾರೆ, ಏನು ಅನ್ನೋದನ್ನ ನೋಡ್ತಿದ್ದಾರೆ. ಕೆಲವು ಪಿಕ್ಚರ್ಸ್ ಬೆಂಗಳೂರಿನಲ್ಲಿ ಸಿಕ್ಕಿದೆ. ಅದನ್ನು ಪರಿಶೀಲನೆ ಮಾಡಿ ಟ್ರ್ಯಾಕ್ ಮಾಡ್ತಿದ್ದಾರೆ ಎಂದು ಹೇಳಿದರು.
ನನಗನ್ನಿಸುತ್ತೆ ಆದಷ್ಟು ಶೀಘ್ರವಾಗಿ ಈ ಪ್ರಕರಣ ಭೇಧಿಸುವ ವಿಶ್ವಾಸವಿದೆ. ಆ ವ್ಯಕ್ತಿ ಸಿಗುವವರೆಗೂ ಆತನಿಗೆ ಸಂಘಟನೆಯ ನಂಟಿದೆ ಎಂದು ಹೇಳೋಕಾಗಲ್ಲ, ಶಂಕಿತ ನಾಲ್ವರನ್ನ ವಿಚಾರಣೆ ಮಾಡಿ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಹೇಳಿದರು.
ದಲಿತ ಸಿಎಂ ಬಗ್ಗೆ ನಾನೇನು ಮಾತಾಡಲ್ಲ. ಅದರ ಬಗ್ಗೆ ಉತ್ತರ ಕೊಡಲ್ಲ. ಸ್ಥಿರವಾದಂತಹ ಸರ್ಕಾರ ಕರ್ನಾಟಕದಲ್ಲಿದೆ, ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡಿತಾ ಇದೆ. ಹಾಗಾಗಿ ದಲಿತ ಸಿಎಂ ಬಗ್ಗೆ ಮಾತನಾಡುವುದು ಪ್ರಸ್ತುತ ಅಲ್ಲ. ಮುಂದಿನ ದಿನದಲ್ಲಿ ದಲಿತ ಸಿಎಂ ಆಗಬೇಕೆಂಬ ಪ್ರಶ್ನೆಗೆ. ಮುಂದಿನದು ಮುಂದೆ ನೋಡೋಣ ಎಂದು ಹೇಳಿದರು.