ತುಮಕೂರು: ಈ ಹಳ್ಳಿಯಲ್ಲಿ ಸ್ಮಶಾನವೇ ಇಲ್ಲ, ಜಾಗ ಸಿಗದೆ ರಸ್ತೆ ಪಕ್ಕದಲ್ಲಿಯೇ ಶವ ಸಂಸ್ಕಾರ
1125 views
ತುಮಕೂರು ವಿಡಿಯೋಗಳಿಗೆ ಚಂದಾದಾರರಾಗಿತುಮಕೂರು: ಗ್ರಾಮದಲ್ಲಿ ಸ್ಮಶಾನ ಇಲ್ಲದ ಕಾರಣ ರಸ್ತೆ ಪಕ್ಕದಲ್ಲೇ ಅಂತ್ಯ ಸಂಸ್ಕಾರ ನಡೆಸಿದ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರ ಜಿಲ್ಲೆಯಾಗಿರುವ ತುಮಕೂರಿನಲ್ಲಿ ನಡೆದಿದ್ದು ತಡವಾಗಿ ತಿಳಿದು ಬಂದಿದೆ. ತಾಲೂಕಿನ ದುರ್ಗದ ಹಳ್ಳಿ ಗ್ರಾಮದ ಪೆದ್ದಯ್ಯ ಎಂಬವರು ವಯೋಸಹಜವಾಗಿ ಸಾವನ್ನಪ್ಪಿದ್ದರು. ಆದರೆ ಗ್ರಾಮದಲ್ಲಿ ಅಧಿಕೃತವಾಗಿ ಯಾವುದೇ ಸ್ಮಶಾನ ಇಲ್ಲದ್ದರಿಂದ ದಿಕ್ಕು ತೋಚದ ಕುಟುಂಬಸ್ಥರು ರಸ್ತೆ ಪಕ್ಕದಲ್ಲಿಯೇ ಮೃತದೇಹದ ಅಂತ್ಯಸಂಸ್ಕಾರ ಮುಗಿಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 10 ದಿನಗಳ ಹಿಂದೆ ನಡೆದ ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು ಆಡಳಿತ ಯಂತ್ರದ ನಿರ್ಲಕ್ಷ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, '' ನಮ್ಮ ಗಮನಕ್ಕೆ ಬಂದ ತಕ್ಷಣ ನಾನೇ ಡೈರೆಕ್ಷನ್ ನೀಡಿದ್ದೇನೆ. ತಹಸೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರ ಮನವೊಲಿಸಿ ಬೇರೆ ಕಡೆ ಅಂತ್ಯ ಸಂಸ್ಕಾರ ಮಾಡಲು ತಿಳಿಸಿದ್ದೇನೆ. ಪಿಡಿಓ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪಿಡಿಓ ಅವರು ಸ್ಮಶಾನಕ್ಕೆ ದಾರಿ ಮಾಡಿಕೊಟ್ಟಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಇದನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ದಲಿತ ಸಮುದಾಯಗಳು ಸ್ಮಶಾನ ಇಲ್ಲದೇ ರಾಜ್ಯದಲ್ಲಿ ಏನೆಲ್ಲಾ ಕಷ್ಟಪಟ್ಟಿದ್ದಾರೆ ಅನ್ಮೊದು ಗೊತ್ತಿದೆ. 2013 ರಿಂದ 2018ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರತಿ ಗ್ರಾಮದಲ್ಲೂ ಸಾರ್ವಜನಿಕ ಸ್ಮಶಾನ ಇರಬೇಕು ಅಂತಾ ಕಾನೂನು ತಂದಿದ್ದೇವೆ. ಎಲ್ಲೆಲ್ಲಿ ಎಲೆಕ್ಟ್ರಿಕ್ ಚಿತಾಗಾರ ಅವಶ್ಯಕತೆ ಇದೆ ಅದನ್ನೂ ಸಹ ಮಾಡಬೇಕು'' ಎಂದಿದ್ದಾರೆ.
ಸುಮಾರು 250ಕ್ಕೂ ಅಧಿಕ ಮನೆಗಳಿರುವ ದುರ್ಗದ ಹಳ್ಳಿ ಗ್ರಾಮದಲ್ಲಿ ಈವರೆಗೂ ಯಾವುದೇ ಸ್ಮಶಾನವಿಲ್ಲ. ಇಷ್ಟರವರೆಗೂ ಖಾಸಗಿಯವರ ಜಮೀನಿನಲ್ಲಿ ಗ್ರಾಮಸ್ಥರು ಅಂತ್ಯಸಂಸ್ಕಾರ ನಡೆಸುತ್ತಿದ್ದರು. ಈದರೆ ಈ ಬಾರಿ ಜಮೀನು ಮಾಲೀಕರು ಅವಕಾಶ ಕೊಡಲಿಲ್ಲ. ಈ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆ ಮಾಡಲು ಕುಟುಂಬಸ್ಥರು ಬಹಳ ಪ್ರಯತ್ನಪಟ್ಟಿದ್ದರು. ಆದರೆ ಯಾವುದೇ ವ್ಯವಸ್ಥೆಯಾಗಲಿಲ್ಲ. ಮನೆಯಲ್ಲಿ ಹೆಚ್ಚು ಹೊತ್ತು ಶವವನ್ನು ಇಡುವಂತೆಯೂ ಇರಲಿಲ್ಲ. ಹೀಗಾಗಿ ಬೇರೆ ದಾರಿ ಕಾಣದೆ ಕುಟುಂಬಸ್ಥರು, ಗ್ರಾಮಸ್ಥರು ರಸ್ತೆ ಪಕ್ಕದಲ್ಲಿಯೇ ಮಣ್ಣು ಮಾಡಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, '' ನಮ್ಮ ಗಮನಕ್ಕೆ ಬಂದ ತಕ್ಷಣ ನಾನೇ ಡೈರೆಕ್ಷನ್ ನೀಡಿದ್ದೇನೆ. ತಹಸೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರ ಮನವೊಲಿಸಿ ಬೇರೆ ಕಡೆ ಅಂತ್ಯ ಸಂಸ್ಕಾರ ಮಾಡಲು ತಿಳಿಸಿದ್ದೇನೆ. ಪಿಡಿಓ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪಿಡಿಓ ಅವರು ಸ್ಮಶಾನಕ್ಕೆ ದಾರಿ ಮಾಡಿಕೊಟ್ಟಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಇದನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ದಲಿತ ಸಮುದಾಯಗಳು ಸ್ಮಶಾನ ಇಲ್ಲದೇ ರಾಜ್ಯದಲ್ಲಿ ಏನೆಲ್ಲಾ ಕಷ್ಟಪಟ್ಟಿದ್ದಾರೆ ಅನ್ಮೊದು ಗೊತ್ತಿದೆ. 2013 ರಿಂದ 2018ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರತಿ ಗ್ರಾಮದಲ್ಲೂ ಸಾರ್ವಜನಿಕ ಸ್ಮಶಾನ ಇರಬೇಕು ಅಂತಾ ಕಾನೂನು ತಂದಿದ್ದೇವೆ. ಎಲ್ಲೆಲ್ಲಿ ಎಲೆಕ್ಟ್ರಿಕ್ ಚಿತಾಗಾರ ಅವಶ್ಯಕತೆ ಇದೆ ಅದನ್ನೂ ಸಹ ಮಾಡಬೇಕು'' ಎಂದಿದ್ದಾರೆ.
ಸುಮಾರು 250ಕ್ಕೂ ಅಧಿಕ ಮನೆಗಳಿರುವ ದುರ್ಗದ ಹಳ್ಳಿ ಗ್ರಾಮದಲ್ಲಿ ಈವರೆಗೂ ಯಾವುದೇ ಸ್ಮಶಾನವಿಲ್ಲ. ಇಷ್ಟರವರೆಗೂ ಖಾಸಗಿಯವರ ಜಮೀನಿನಲ್ಲಿ ಗ್ರಾಮಸ್ಥರು ಅಂತ್ಯಸಂಸ್ಕಾರ ನಡೆಸುತ್ತಿದ್ದರು. ಈದರೆ ಈ ಬಾರಿ ಜಮೀನು ಮಾಲೀಕರು ಅವಕಾಶ ಕೊಡಲಿಲ್ಲ. ಈ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆ ಮಾಡಲು ಕುಟುಂಬಸ್ಥರು ಬಹಳ ಪ್ರಯತ್ನಪಟ್ಟಿದ್ದರು. ಆದರೆ ಯಾವುದೇ ವ್ಯವಸ್ಥೆಯಾಗಲಿಲ್ಲ. ಮನೆಯಲ್ಲಿ ಹೆಚ್ಚು ಹೊತ್ತು ಶವವನ್ನು ಇಡುವಂತೆಯೂ ಇರಲಿಲ್ಲ. ಹೀಗಾಗಿ ಬೇರೆ ದಾರಿ ಕಾಣದೆ ಕುಟುಂಬಸ್ಥರು, ಗ್ರಾಮಸ್ಥರು ರಸ್ತೆ ಪಕ್ಕದಲ್ಲಿಯೇ ಮಣ್ಣು ಮಾಡಿದ್ದಾರೆ.