ಉಡುಪಿ ಕಾಲೇಜ್ ವಿಡಿಯೋ ಪ್ರಕರಣ ಖಂಡಿಸಿ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರೊಟೆಸ್ಟ್
ಉಡುಪಿ ವಿಡಿಯೋಗಳಿಗೆ ಚಂದಾದಾರರಾಗಿ
ಉಡುಪಿಯ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡ್ತಿದೆ. ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ರಾಜ್ಯದ ನಾನಾ ಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಪ್ರತಿಭಟನೆಯಲ್ಲಿ ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ್ ಭಾಗಿವಹಿಸಿ, ತಪ್ಪಿತ್ತಸ್ಥರ ವಿರುದ್ಧ ಸೂಕ್ತ ಕ್ರಮ ಆಗಬೇಕು, ಅಲ್ಲದೇ ತನಿಖೆಯನ್ನು ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ..
ಬೆಂಗಳೂರು: ಉಡುಪಿಯ ಕಾಲೇಜು ವಿದ್ಯಾರ್ಥಿನಿಯ ಖಾಸಗಿ ದೃಶ್ಯವನ್ನು ಸೆರೆ ಹಿಡಿದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ FIR ದಾಖಲಿಸಲು ವಿಳಂಬ ಧೋರಣೆ ತೋರುವ ಜತೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು, ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಭಾಗವಹಿಸಿ ಸರ್ಕಾರ್ ನಡೆಯನ್ನು ಖಂಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ ಎಂಬ ಸಂದೇಶ ರವಾನೆಯಾಗುತ್ತಿದೆ. ಹೆಣ್ಣು ಮಕ್ಕಳ ಘನತೆ ಕಾಪಾಡದ ಸರ್ಕಾರ ಘಟನೆ ನಡೆದೇ ಇಲ್ಲ ಎಂದು ಬಿಂಬಿಸಲು ಯತ್ನಿಸುತ್ತಿರುವುದು ಖಂಡನೀಯ. ಈ ವಿಚಾರ ತಮಾಷೆಯೂ ಅಲ್ಲ, ಮಕ್ಕಳಾಟವೂ ಅಲ್ಲ. ಈ ಘಟನೆಯನ್ನು ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಉಡುಪಿಯ ಕಾಲೇಜು ವಿದ್ಯಾರ್ಥಿನಿಯ ಖಾಸಗಿ ದೃಶ್ಯವನ್ನು ಸೆರೆ ಹಿಡಿದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ FIR ದಾಖಲಿಸಲು ವಿಳಂಬ ಧೋರಣೆ ತೋರುವ ಜತೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು, ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಭಾಗವಹಿಸಿ ಸರ್ಕಾರ್ ನಡೆಯನ್ನು ಖಂಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ ಎಂಬ ಸಂದೇಶ ರವಾನೆಯಾಗುತ್ತಿದೆ. ಹೆಣ್ಣು ಮಕ್ಕಳ ಘನತೆ ಕಾಪಾಡದ ಸರ್ಕಾರ ಘಟನೆ ನಡೆದೇ ಇಲ್ಲ ಎಂದು ಬಿಂಬಿಸಲು ಯತ್ನಿಸುತ್ತಿರುವುದು ಖಂಡನೀಯ. ಈ ವಿಚಾರ ತಮಾಷೆಯೂ ಅಲ್ಲ, ಮಕ್ಕಳಾಟವೂ ಅಲ್ಲ. ಈ ಘಟನೆಯನ್ನು ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.