Stone For Ram Statue: ಅಯೋಧ್ಯೆಯ ರಾಮನ ಮೂರ್ತಿ ನಿರ್ಮಾಣಕ್ಕೆ ಕಾರ್ಕಳದಿಂದಲೂ ಕಲ್ಲು! ಬೃಹತ್ ಕಲ್ಲು ರವಾನೆ
1020 views
ಉಡುಪಿ ವಿಡಿಯೋಗಳಿಗೆ ಚಂದಾದಾರರಾಗಿಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮ ಮಂದಿರದ ಬಳಿ ಸ್ಥಾಪಿಸಲು ಉದ್ದೇಶಿಸಲಾಗಿರುವ ರಾಮನ ಪ್ರತಿಮೆ ನಿರ್ಮಾಣಕ್ಕೆ ಉಡುಪಿ ಜಿಲ್ಲೆಯ ಕಾರ್ಕಳದಿಂದಲೂ ಕಲ್ಲನ್ನು ಕಳಿಸಿಕೊಡಲಾಗಿದೆ. ದೇಶದ ಅನೇಕ ಭಾಗಗಳಿಂದ ಕಲ್ಲು ತರೆಸಿಕೊಂಡು, ಗುಣಮಟ್ಟ ಪರೀಕ್ಷಿಸಿದ ಬಳಿಕ, ಅಂತಿಮವಾಗಿ ಯಾವ ಕಲ್ಲಿನಿಂದ ಪ್ರತಿಮೆ ಮಾಡಬಹುದು ಎನ್ನುವುದನ್ನು ಶಿಲ್ಪಿಗಳು ನಿರ್ಧರಿಸುತ್ತಾರೆ. ಕರಿಯ ಕಲ್ಲಿನ ಊರು ಎಂದು ಹೆಸರಾದ ಕಾರ್ಕಳದ ಈದು ಪ್ರದೇಶದಿಂದ ಬೃಹತ್ ಗಾತ್ರದ ಕಲ್ಲು ತುಂಡು ರವಾನಿಸಲಾಗಿದೆ. ಗುರುವಾರ ರಾತ್ರಿ ವಿಶೇಷ ಪೂಜೆ ನಡೆಸುವ ಮೂಲಕ, ದೊಡ್ಡ ಲಾರಿಯಲ್ಲಿ ಭಾರಿ ತೂಕದ ಕಲ್ಲನ್ನು ತೆಗೆದುಕೊಂಡು ಹೋಗಲಾಗಿದೆ.
ಕಾರ್ಕಳದ ಈದು ಗ್ರಾಮದ ತುಂಗ ಪುಜಾರಿಯವರ ಭೂಮಿಯಲ್ಲಿದ್ದ ಕಲ್ಲನ್ನು ಆಯ್ಕೆ ಮಾಡಲಾಗಿತ್ತು. ಕಾರ್ಕಳ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ಈ ವೇಳೆ ಹಾಜರಿದ್ದು, ಘೋಷಣೆಗಳನ್ನು ಕೂಗಿದರು. ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಪುತ್ರ ಗಣೇಶ್ ಶೆಟ್ಟಿಯವರು ಲಾರಿಯ ವ್ಯವಸ್ಥೆ ಮಾಡಿದ್ದಾರೆ. ನೇಪಾಳದಿಂದ ಬಂದ ಸಾಲಿಗ್ರಾಮ ಶಿಲೆ ಪ್ರತಿಮೆ ನಿರ್ಮಾಣಕ್ಕೆ ಯೋಗ್ಯವಲ್ಲ ಎಂದು ನಿರ್ಧಾರಕ್ಕೆ ಬಂದ ಕಾರಣ, ದೇಶದ ವಿವಿಧ ಕಡೆಗಳಿಂದ ಬೇರೆ ಬೇರೆ ಗುಣಮಟ್ಟದ ಕಲ್ಲುಗಳನ್ನು ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಅಮರ ಶಿಲ್ಪಿ ಬೀರ ಕಲ್ಕುಡನ ಪಾದ ಸ್ಪರ್ಶದಿಂದ ಪುನೀತವಾಗಿ ಶಿಲ್ಪಿಗಳ ತವರೂರು ಎಂದು ಖ್ಯಾತಿ ಪಡೆದಿರುವ ಕಾರ್ಕಳದ ಊರಿನ ಕೃಷ್ಣ ಶಿಲೆಗೆ ರಾಮನಾಗುವ ಭಕ್ತಿಯೋಗ ಒಲಿದು ಬರಲಿ ಎಂದು ಸ್ಥಳೀಯರು ಆಶಿಸಿದ್ದಾರೆ.
ಕಾರ್ಕಳದ ಈದು ಗ್ರಾಮದ ತುಂಗ ಪುಜಾರಿಯವರ ಭೂಮಿಯಲ್ಲಿದ್ದ ಕಲ್ಲನ್ನು ಆಯ್ಕೆ ಮಾಡಲಾಗಿತ್ತು. ಕಾರ್ಕಳ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ಈ ವೇಳೆ ಹಾಜರಿದ್ದು, ಘೋಷಣೆಗಳನ್ನು ಕೂಗಿದರು. ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಪುತ್ರ ಗಣೇಶ್ ಶೆಟ್ಟಿಯವರು ಲಾರಿಯ ವ್ಯವಸ್ಥೆ ಮಾಡಿದ್ದಾರೆ. ನೇಪಾಳದಿಂದ ಬಂದ ಸಾಲಿಗ್ರಾಮ ಶಿಲೆ ಪ್ರತಿಮೆ ನಿರ್ಮಾಣಕ್ಕೆ ಯೋಗ್ಯವಲ್ಲ ಎಂದು ನಿರ್ಧಾರಕ್ಕೆ ಬಂದ ಕಾರಣ, ದೇಶದ ವಿವಿಧ ಕಡೆಗಳಿಂದ ಬೇರೆ ಬೇರೆ ಗುಣಮಟ್ಟದ ಕಲ್ಲುಗಳನ್ನು ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಅಮರ ಶಿಲ್ಪಿ ಬೀರ ಕಲ್ಕುಡನ ಪಾದ ಸ್ಪರ್ಶದಿಂದ ಪುನೀತವಾಗಿ ಶಿಲ್ಪಿಗಳ ತವರೂರು ಎಂದು ಖ್ಯಾತಿ ಪಡೆದಿರುವ ಕಾರ್ಕಳದ ಊರಿನ ಕೃಷ್ಣ ಶಿಲೆಗೆ ರಾಮನಾಗುವ ಭಕ್ತಿಯೋಗ ಒಲಿದು ಬರಲಿ ಎಂದು ಸ್ಥಳೀಯರು ಆಶಿಸಿದ್ದಾರೆ.