ಯಲ್ಲಾಪುರ ಬ್ಯಾಂಕ್ನಿಂದ ಕದ್ದ ಎರಡೂವರೆ ಕೋಟಿ ಹಣದಿಂದ ಆನ್ಲೈನ್ ಗೇಮ್ಗೆ ಬಳಸಿ ಗುಂಡಾಂತರ ಮಾಡಿದ ಬ್ಯಾಂಕ್ ಸಿಬ್ಬಂದಿ
ಉತ್ತರ ಕನ್ನಡ ವಿಡಿಯೋಗಳಿಗೆ ಚಂದಾದಾರರಾಗಿ
ಭಾರೀ ಸದ್ದು ಮಾಡಿದ್ದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿದ್ದ 2.69 ಕೋಟಿ ರೂ. ಲಪಟಾಯಿಸಿದ್ದ ಅಸಿಸ್ಟೆಂಟ್ ಮ್ಯಾನೇಜರ್ ನನ್ನ ಬಂಧಿಸುವಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ವಿಚಾರಣೆಯ ವೇಳೆ ಆರೋಪಿ ಶಾಕಿಂಗ್ ಮಾಹಿತಿಯೊಂದನ್ನ ರಿವೀಲ್ ಮಾಡಿದ್ದು, ಇದು ಸದ್ಯ ಮತ್ತೊಂದು ತಲೆನೋವಿಗೆ ಕಾರಣವಾಗಿದೆ.
ಹೌದು, ಈರ್ವರು ಸಿಬ್ಬಂದಿಗಳ ಲಾಗಿನ್ ದುರುಪಯೋಗಪಡಿಸಿಕೊಂಡು, ಅವರ ಅರಿವಿಗೇ ಬಾರದಂತೆ ಏಪ್ರಿಲ್ ನಿಂದ ಸೆಪ್ಟೆಂಬರ್ 5ರವರೆಗೆ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದ ಕರೆಂಟ್ ಅಕೌಂಟ್ ನಿಂದ ತನ್ನ ಹೆಂಡತಿಯ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್, ಆಂಧ್ರಪ್ರದೇಶ ಮೂಲದ ಕುಮಾರ್ ಬೋನಾಲ, ನಂತರ ನಾಪತ್ತೆಯಾಗಿದ್ದ. ಈ ಪ್ರಕರಣ ರಾಜ್ಯದಾದ್ಯಂತ ಭಾರೀ ಸದ್ದು ಮಾಡಿತ್ತು. ಬ್ಯಾಂಕ್ ಅಧಿಕಾರಿಗಳೇ ಈ ರೀತಿ ವಂಚಿಸಿರುವುದು ಖಾತೆದಾರರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಆರೋಪಿಯ ಜಾಡು ಹಿಡಿದು ಪತ್ತೆಗೆ ಮುಂದಾಗಿದ್ದ ಯಲ್ಲಾಪುರ ಪೊಲೀಸರು, ಕೊನೆಗೂ ಹುಬ್ಬಳ್ಳಿಯಲ್ಲಿ ಈತನನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನ ವಿಚಾರಣೆಗಾಗಿ ಪೊಲೀಸರಿಗೆ ನೀಡಿದೆ.
ಇನ್ನು ಪೊಲೀಸರು ಆರೋಪಿಯನ್ನ ಲಪಟಾಯಿಸಿದ್ದ ಹಣಕ್ಕಾಗಿ ವಿಚಾರಣೆ ನಡೆಸಿದ್ದಾರೆ. ಆದರೆ, ಆರೋಪಿ ಕುಮಾರ್, ತಾನು ಲಪಟಾಯಿಸಿದ್ದ ಹಣವನ್ನೆಲ್ಲ ಆನ್ಲೈನ್ ಆಟದ ಗೀಳಿಗೆ ಬಿದ್ದು ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಸಿಕ್ಕ ಸಿಕ್ಕ ಆನ್ಲೈನ್ ಗೇಮ್ ಗಳನ್ನ ಆಡುವ ಚಟಕ್ಕೆ ಬಿದ್ದಿದ್ದ ಈತ, ಬ್ಯಾಂಕ್ ಅಕೌಂಟ್ ನಿಂದ ಹಣ ತೆಗೆಯುವುದು, ಆನ್ಲೈನ್ ನಲ್ಲಿ ಆಟವಾಡುವುದು ಮಾಡುತ್ತಿದ್ದ. ಹೀಗೆ ಎಲ್ಲಾ ಹಣವನ್ನೂ ಆರೋಪಿ ಕಳೆದುಕೊಂಡಿದ್ದಾನೆ. ಈ ಹಿಂದೆ ತನ್ನ ಹೆಂಡತಿಯ ಚಿನ್ನಾಭರಣವನ್ನೂ ಕೂಡ ಈತ ಈ ಆನ್ಲೈನ್ ಗೇಮ್ ಗಳನ್ನಾಡಲು ಬಳಸಿಕೊಂಡಿದ್ದನಂತೆ.
ಸದ್ಯ ಆನ್ಲೈನ್ ಗೇಮ್ ಆಡಿ ಆರೋಪಿ ತನ್ನ ಬಳಿಯಿದ್ದ ಎಲ್ಲಾ ಹಣವನ್ನ ಕಳೆದುಕೊಂಡಿದ್ದು, ಇದೀಗ 2.69 ಕೋಟಿ ಹಣದ ವಸೂಲಿ ಹೇಗೆ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ಖಾತೆದಾರರಿಗೆ ಆತಂಕ ಬೇಡ. ಲೂಟಿಯಾಗಿರೋದು ಬ್ಯಾಂಕ್ ಕರೆಂಟ್ ಅಕೌಂಟ್ ಹಣ ಹೊರತು ಗ್ರಾಹಕರದ್ದಲ್ಲ ಎನ್ನುತ್ತಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್.
ಹೌದು, ಈರ್ವರು ಸಿಬ್ಬಂದಿಗಳ ಲಾಗಿನ್ ದುರುಪಯೋಗಪಡಿಸಿಕೊಂಡು, ಅವರ ಅರಿವಿಗೇ ಬಾರದಂತೆ ಏಪ್ರಿಲ್ ನಿಂದ ಸೆಪ್ಟೆಂಬರ್ 5ರವರೆಗೆ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದ ಕರೆಂಟ್ ಅಕೌಂಟ್ ನಿಂದ ತನ್ನ ಹೆಂಡತಿಯ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್, ಆಂಧ್ರಪ್ರದೇಶ ಮೂಲದ ಕುಮಾರ್ ಬೋನಾಲ, ನಂತರ ನಾಪತ್ತೆಯಾಗಿದ್ದ. ಈ ಪ್ರಕರಣ ರಾಜ್ಯದಾದ್ಯಂತ ಭಾರೀ ಸದ್ದು ಮಾಡಿತ್ತು. ಬ್ಯಾಂಕ್ ಅಧಿಕಾರಿಗಳೇ ಈ ರೀತಿ ವಂಚಿಸಿರುವುದು ಖಾತೆದಾರರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಆರೋಪಿಯ ಜಾಡು ಹಿಡಿದು ಪತ್ತೆಗೆ ಮುಂದಾಗಿದ್ದ ಯಲ್ಲಾಪುರ ಪೊಲೀಸರು, ಕೊನೆಗೂ ಹುಬ್ಬಳ್ಳಿಯಲ್ಲಿ ಈತನನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನ ವಿಚಾರಣೆಗಾಗಿ ಪೊಲೀಸರಿಗೆ ನೀಡಿದೆ.
ಇನ್ನು ಪೊಲೀಸರು ಆರೋಪಿಯನ್ನ ಲಪಟಾಯಿಸಿದ್ದ ಹಣಕ್ಕಾಗಿ ವಿಚಾರಣೆ ನಡೆಸಿದ್ದಾರೆ. ಆದರೆ, ಆರೋಪಿ ಕುಮಾರ್, ತಾನು ಲಪಟಾಯಿಸಿದ್ದ ಹಣವನ್ನೆಲ್ಲ ಆನ್ಲೈನ್ ಆಟದ ಗೀಳಿಗೆ ಬಿದ್ದು ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಸಿಕ್ಕ ಸಿಕ್ಕ ಆನ್ಲೈನ್ ಗೇಮ್ ಗಳನ್ನ ಆಡುವ ಚಟಕ್ಕೆ ಬಿದ್ದಿದ್ದ ಈತ, ಬ್ಯಾಂಕ್ ಅಕೌಂಟ್ ನಿಂದ ಹಣ ತೆಗೆಯುವುದು, ಆನ್ಲೈನ್ ನಲ್ಲಿ ಆಟವಾಡುವುದು ಮಾಡುತ್ತಿದ್ದ. ಹೀಗೆ ಎಲ್ಲಾ ಹಣವನ್ನೂ ಆರೋಪಿ ಕಳೆದುಕೊಂಡಿದ್ದಾನೆ. ಈ ಹಿಂದೆ ತನ್ನ ಹೆಂಡತಿಯ ಚಿನ್ನಾಭರಣವನ್ನೂ ಕೂಡ ಈತ ಈ ಆನ್ಲೈನ್ ಗೇಮ್ ಗಳನ್ನಾಡಲು ಬಳಸಿಕೊಂಡಿದ್ದನಂತೆ.
ಸದ್ಯ ಆನ್ಲೈನ್ ಗೇಮ್ ಆಡಿ ಆರೋಪಿ ತನ್ನ ಬಳಿಯಿದ್ದ ಎಲ್ಲಾ ಹಣವನ್ನ ಕಳೆದುಕೊಂಡಿದ್ದು, ಇದೀಗ 2.69 ಕೋಟಿ ಹಣದ ವಸೂಲಿ ಹೇಗೆ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ಖಾತೆದಾರರಿಗೆ ಆತಂಕ ಬೇಡ. ಲೂಟಿಯಾಗಿರೋದು ಬ್ಯಾಂಕ್ ಕರೆಂಟ್ ಅಕೌಂಟ್ ಹಣ ಹೊರತು ಗ್ರಾಹಕರದ್ದಲ್ಲ ಎನ್ನುತ್ತಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್.