ಲೋಕಸಭೆ ಚುನಾವಣೆ ಮುಗಿಯಲಿ; ಯಾರೂ ನಿರೀಕ್ಷಿಸದ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಯತ್ನಾಳ್
1222 views
ವಿಜಯಪುರ ವಿಡಿಯೋಗಳಿಗೆ ಚಂದಾದಾರರಾಗಿವಿಜಯಪುರ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಜಾತಿಗಣತಿ ಸ್ವೀಕಾರ ಮಾಡಿರುವುದರಿಂದ ಸರಕಾರ ಪತನವಾಗಲಿದೆ. 50-60 ಶಾಸಕರಿಂದ ಸರಕಾರ ಬೀಳಲಿದೆ. ಈ ಸರಕಾರ ಬಹಳ ದಿನ ಮುಂದೆವರೆಯುವುದಿಲ್ಲ ಎಂದು ಹೇಳಿದ್ದಾರೆ.
ಜಾತಿ ಗಣತಿ ಸ್ವೀಕಾರ ವಿಚಾರವಾಗಿ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ಸಿನ ಶಾಸಕರಾದ ಶಾಮನೂರು ಶಿವಶಂಕರಪ್ಪ, ವಿನಯ್ ಕುಲಕರ್ಣಿ, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಧು ಬಂಗಾರಪ್ಪ ಅವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರಕಾರ ಪತನ ನಿಶ್ಚಿತವಾಗಿದೆ ಎಂದು ಭವಿಷ್ಯ ನುಡಿದರು.
ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಬಹುತೇಕ ಜನರ ಮನೆಗೆ ಹೋಗದೇ ವರದಿ ತಯಾರಿಸಲಾಗಿದೆ. ಮತ್ತೊಮ್ಮೆ ಸಮೀಕ್ಷೆ ನಡೆಸಬೇಕು. ಇದೇ ನೆಪದಲ್ಲಿ ಸರಕಾರ ಪತನವಾಗಲಿ ಎಂಬುದು ಅವರ ಮನಸ್ಸಿನಲ್ಲಿರಬೇಕು. ಈ ಜಾತಿ ವರದಿ ಸ್ವೀಕಾರ ಮಾಡಿದ್ದನ್ನು ಯಾವುದೇ ಪರಿಸ್ಥಿತಿಯಲ್ಲಿ ಸರಕಾರ ಒಪ್ಪಬಾರದು. ಒಂದು ವೇಳೆ ಒಪ್ಪಿದರೆ ಕರ್ನಾಟಕದಲ್ಲಿ ಬಹಳ ದೊಡ್ಡ ಅನಾಹುತ ಉಂಟಾಗಲಿದೆ ಎಂದರು.
ಪ್ರತಿದಿನ ಒಬ್ಬೊಬ್ಬ ನಾಯಕರು ಮತದಾರರ ವಿರುದ್ಧ ಒಂದೊಂದು ರೀತಿ ಹೇಳಿಕೆ ನೀಡಿ ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ಲೋಕಸಭೆ ಚುನಾವಣೆಯಲ್ಲಿ ಮತ ಪಡೆಯಲು ಹುನ್ನಾರ ನಡೆಸಿದ್ದಾರೆ. 28 ಲೋಕಸಭೆಯಲ್ಲಿ ಬಿಜೆಪಿ ಗೆಲ್ಲುವ ಭಯದಿಂದ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಸಿದ್ಧರಾಮಯ್ಯ ಸರಕಾರ ಯಾರೂ ನಿರೀಕ್ಷಿಸದ ರೀತಿಯಲ್ಲಿ ಪತನವಾಗಲಿದೆ ಎಂದರು.
ಗ್ಯಾರಂಟಿ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜನರಿಗೆ ತಲುಪಿಲ್ಲ. ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಗುತ್ತಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿಯನ್ನೂ ಇಟ್ಟಿಲ್ಲ. ಶಾಸಕರಷ್ಟೇ ಅಲ್ಲ, ಏಳೆಂಟೂ ಜನ ಸಚಿವರೂ ಅಸಮಾಧಾನ ಹೊಂದಿದ್ದು, ಎಲ್ಲರೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.
ಪಾಕಿಸ್ತಾನ ಪರ ಘೋಷಣೆ ವಿಚಾರ ಕುರಿತು ಕಿಡಿಕಾರಿದ ಯತ್ನಾಳ್, ನಾಸೀರ್ ಹುಸೇನ್ ಜಿಂದಾಬಾದ್ ಎಂದರೆ ನಮ್ಮ ತಕರಾರಿಲ್ಲ. ಆದರೆ, ಪಾಕಿಸ್ತಾನ ಪರ ಘೋಷಣೆ ಹಾಕಿರುವುದನ್ನು ಎಲ್ಲ ಮಾಧ್ಯಮದವರು ಪ್ರಸಾರ ಮಾಡಿದ್ದರು. ಅದನ್ನು ಸರಕಾರ ನಂಬಲಿಲ್ಲ. ಈ ಪ್ರಕರಣವನ್ನು ಜಮೀರ್ ಅಹ್ಮದ್, ಸಿ.ಎಂ. ಇಬ್ರಾಹಿಂ ಅಗಲಿ ಯಾವೊಬ್ಬ ಮುಸ್ಲಿಂ ನಾಯಕರು, ಸಚಿವರು ಖಂಡಿಸಲಿಲ್ಲ. ಈ ಮೂಲಕ ಅವರು ಸಿದ್ದರಾಮಯ್ಯ ಅವರ ಮರ್ಯಾದೆ ತೆಗೆದಿದ್ದಾರೆ. ಈಗಲಾದರೂ ಸಿದ್ಧರಾಮಯ್ಯ ಮುಸ್ಲಿಮರ ತುಷ್ಠಿಕರಣ ಬಿಡಲಿ. ಮುಸ್ಲಿಮರ ತುಷ್ಠಿಕರಣ ಅತೀಯಾಗಿದೆ ಎಂದರು.
ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರಿಗೇ ಟಿಕೆಟ್ ನೀಡಿದರೂ ನಾವು ಅವರ ಪರ ಕೆಲಸ ಮಾಡುತ್ತೇವೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಹಾಲಿ ಸಂಸದ ರಮೇಶ ಜಿಗಜಿಣಗಿಯಾಗಲಿ ಅಥವಾ ಬೇರೆ ಯಾರಿಗೇ ಆಗಲಿ ಟಿಕೆಟ್ ನೀಡಿದರೂ ನಾವು ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ದಲಿತ ಸಮುದಾಯದ ಯುವಕನಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಮೋದಿ ಪ್ರಧಾನಿ ಮಾಡಿಲು ಎಲ್ಲರೂ ಕೈಜೋಡಸಲಿದ್ದೇವೆ ಎಂದರು.
ಜಾತಿ ಗಣತಿ ಸ್ವೀಕಾರ ವಿಚಾರವಾಗಿ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ಸಿನ ಶಾಸಕರಾದ ಶಾಮನೂರು ಶಿವಶಂಕರಪ್ಪ, ವಿನಯ್ ಕುಲಕರ್ಣಿ, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಧು ಬಂಗಾರಪ್ಪ ಅವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರಕಾರ ಪತನ ನಿಶ್ಚಿತವಾಗಿದೆ ಎಂದು ಭವಿಷ್ಯ ನುಡಿದರು.
ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಬಹುತೇಕ ಜನರ ಮನೆಗೆ ಹೋಗದೇ ವರದಿ ತಯಾರಿಸಲಾಗಿದೆ. ಮತ್ತೊಮ್ಮೆ ಸಮೀಕ್ಷೆ ನಡೆಸಬೇಕು. ಇದೇ ನೆಪದಲ್ಲಿ ಸರಕಾರ ಪತನವಾಗಲಿ ಎಂಬುದು ಅವರ ಮನಸ್ಸಿನಲ್ಲಿರಬೇಕು. ಈ ಜಾತಿ ವರದಿ ಸ್ವೀಕಾರ ಮಾಡಿದ್ದನ್ನು ಯಾವುದೇ ಪರಿಸ್ಥಿತಿಯಲ್ಲಿ ಸರಕಾರ ಒಪ್ಪಬಾರದು. ಒಂದು ವೇಳೆ ಒಪ್ಪಿದರೆ ಕರ್ನಾಟಕದಲ್ಲಿ ಬಹಳ ದೊಡ್ಡ ಅನಾಹುತ ಉಂಟಾಗಲಿದೆ ಎಂದರು.
ಪ್ರತಿದಿನ ಒಬ್ಬೊಬ್ಬ ನಾಯಕರು ಮತದಾರರ ವಿರುದ್ಧ ಒಂದೊಂದು ರೀತಿ ಹೇಳಿಕೆ ನೀಡಿ ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ಲೋಕಸಭೆ ಚುನಾವಣೆಯಲ್ಲಿ ಮತ ಪಡೆಯಲು ಹುನ್ನಾರ ನಡೆಸಿದ್ದಾರೆ. 28 ಲೋಕಸಭೆಯಲ್ಲಿ ಬಿಜೆಪಿ ಗೆಲ್ಲುವ ಭಯದಿಂದ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಸಿದ್ಧರಾಮಯ್ಯ ಸರಕಾರ ಯಾರೂ ನಿರೀಕ್ಷಿಸದ ರೀತಿಯಲ್ಲಿ ಪತನವಾಗಲಿದೆ ಎಂದರು.
ಗ್ಯಾರಂಟಿ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜನರಿಗೆ ತಲುಪಿಲ್ಲ. ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಗುತ್ತಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿಯನ್ನೂ ಇಟ್ಟಿಲ್ಲ. ಶಾಸಕರಷ್ಟೇ ಅಲ್ಲ, ಏಳೆಂಟೂ ಜನ ಸಚಿವರೂ ಅಸಮಾಧಾನ ಹೊಂದಿದ್ದು, ಎಲ್ಲರೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.
ಪಾಕಿಸ್ತಾನ ಪರ ಘೋಷಣೆ ವಿಚಾರ ಕುರಿತು ಕಿಡಿಕಾರಿದ ಯತ್ನಾಳ್, ನಾಸೀರ್ ಹುಸೇನ್ ಜಿಂದಾಬಾದ್ ಎಂದರೆ ನಮ್ಮ ತಕರಾರಿಲ್ಲ. ಆದರೆ, ಪಾಕಿಸ್ತಾನ ಪರ ಘೋಷಣೆ ಹಾಕಿರುವುದನ್ನು ಎಲ್ಲ ಮಾಧ್ಯಮದವರು ಪ್ರಸಾರ ಮಾಡಿದ್ದರು. ಅದನ್ನು ಸರಕಾರ ನಂಬಲಿಲ್ಲ. ಈ ಪ್ರಕರಣವನ್ನು ಜಮೀರ್ ಅಹ್ಮದ್, ಸಿ.ಎಂ. ಇಬ್ರಾಹಿಂ ಅಗಲಿ ಯಾವೊಬ್ಬ ಮುಸ್ಲಿಂ ನಾಯಕರು, ಸಚಿವರು ಖಂಡಿಸಲಿಲ್ಲ. ಈ ಮೂಲಕ ಅವರು ಸಿದ್ದರಾಮಯ್ಯ ಅವರ ಮರ್ಯಾದೆ ತೆಗೆದಿದ್ದಾರೆ. ಈಗಲಾದರೂ ಸಿದ್ಧರಾಮಯ್ಯ ಮುಸ್ಲಿಮರ ತುಷ್ಠಿಕರಣ ಬಿಡಲಿ. ಮುಸ್ಲಿಮರ ತುಷ್ಠಿಕರಣ ಅತೀಯಾಗಿದೆ ಎಂದರು.
ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರಿಗೇ ಟಿಕೆಟ್ ನೀಡಿದರೂ ನಾವು ಅವರ ಪರ ಕೆಲಸ ಮಾಡುತ್ತೇವೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಹಾಲಿ ಸಂಸದ ರಮೇಶ ಜಿಗಜಿಣಗಿಯಾಗಲಿ ಅಥವಾ ಬೇರೆ ಯಾರಿಗೇ ಆಗಲಿ ಟಿಕೆಟ್ ನೀಡಿದರೂ ನಾವು ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ದಲಿತ ಸಮುದಾಯದ ಯುವಕನಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಮೋದಿ ಪ್ರಧಾನಿ ಮಾಡಿಲು ಎಲ್ಲರೂ ಕೈಜೋಡಸಲಿದ್ದೇವೆ ಎಂದರು.