ವಿಧಾನಸೌಧದಿಂದ ತಳಮಟ್ಟದವರೆಗೂ ಮಟ್ಕಾ, ಬೆಟ್ಟಿಂಗ್ ದಂಧೆ: ಎಚ್ಡಿ ಕುಮಾರಸ್ವಾಮಿ ಕಿಡಿ
1009 views
ವಿಜಯಪುರ ವಿಡಿಯೋಗಳಿಗೆ ಚಂದಾದಾರರಾಗಿವಿಜಯಪುರ: ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ ಸರಕಾರ ಚಕಾರ ಎತ್ತದೇ ಮೌನವಾಗಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದರು.
ವಿಜಯಪುರದ ಸಿಂದಗಿ ಕ್ಷೇತ್ರ ವ್ಯಾಪ್ತಿಯ ಯಂಕಂಚಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ದಂಧೆಯ ಕಬಂಧ ಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಈ ದಂಧೆ ಮಿತಿಮೀರಿ ನಡೆಯುತ್ತಿದೆ. ಹಣ ಕೊಟ್ಟು ಜಿಲ್ಲೆಗೆ ಪೋಸ್ಟಿಂಗ್ ಮಾಡಿಸಿಕೊಂಡು ಬಂದಿರುವ ಅಧಿಕಾರಿಗಳಿಗೆ ʼಮಂತ್ಲಿʼ ತಪ್ಪದೇ ಹೋಗುತ್ತಿದೆ. ದೊಡ್ಡದೊಂದು ಗ್ಯಾಂಗ್ ಜಿಲ್ಲೆಯಲ್ಲಿ ಈ ದಂಧೆಗಳನ್ನು ವ್ಯಾಪಕ ಮಟ್ಟದಲ್ಲಿ ಆಪರೇಟ್ ಮಾಡುತ್ತಿದ್ದು, ಜನರೇ ಬೀದಿಬೀದಿಗಳಲ್ಲಿ ನಿಂತು ಮಾತನಾಡುತ್ತಾ ಈ ಪೀಡೆಯನ್ನು ಹತ್ತಿಕ್ಕದ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರದ ಸಿಂದಗಿ ಕ್ಷೇತ್ರ ವ್ಯಾಪ್ತಿಯ ಯಂಕಂಚಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ದಂಧೆಯ ಕಬಂಧ ಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಈ ದಂಧೆ ಮಿತಿಮೀರಿ ನಡೆಯುತ್ತಿದೆ. ಹಣ ಕೊಟ್ಟು ಜಿಲ್ಲೆಗೆ ಪೋಸ್ಟಿಂಗ್ ಮಾಡಿಸಿಕೊಂಡು ಬಂದಿರುವ ಅಧಿಕಾರಿಗಳಿಗೆ ʼಮಂತ್ಲಿʼ ತಪ್ಪದೇ ಹೋಗುತ್ತಿದೆ. ದೊಡ್ಡದೊಂದು ಗ್ಯಾಂಗ್ ಜಿಲ್ಲೆಯಲ್ಲಿ ಈ ದಂಧೆಗಳನ್ನು ವ್ಯಾಪಕ ಮಟ್ಟದಲ್ಲಿ ಆಪರೇಟ್ ಮಾಡುತ್ತಿದ್ದು, ಜನರೇ ಬೀದಿಬೀದಿಗಳಲ್ಲಿ ನಿಂತು ಮಾತನಾಡುತ್ತಾ ಈ ಪೀಡೆಯನ್ನು ಹತ್ತಿಕ್ಕದ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.