ನಾನು ಫೈಟರ್, ಹೋರಾಟಗಾರ್ತಿ, ನಾನು ವಿಚಲಿತಳಾಗಿಲ್ಲ ; ಶೋಭಾ ಕರಂದ್ಲಾಜೆ
1083 views
ವಿಜಯಪುರ ವಿಡಿಯೋಗಳಿಗೆ ಚಂದಾದಾರರಾಗಿವಿಜಯಪುರ : ದೇಶದಲ್ಲಿ ಚುನಾವಣಾ ಕಾವೇರಿದ್ದು, ಗುರುವಾರ ಅಥವಾ ಶುಕ್ರವಾರ ಚುನಾವಣಾ ಆಯೋಗದಿಂದ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ದೊಡ್ಡ ಪ್ರಜಾತಂತ್ರದ ಚುನಾವಣೆ. ಎಲ್ಲ ವರ್ಗದವರಿಗೂ ಮತದಾನದ ಹಕ್ಕು ನೀಡಲಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲಿದ್ದು, ಇಸ್ ಬಾರ್ ಚಾರ್ ಸೌ ಪಾರ್. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಜನರು ಮೋದಿಗೆ ಬೆಂಬಲ ನೀಡುತ್ತಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370 ಕಲಂ ಬದಲಾವಣೆ ಮಾಡಿದ್ದೇವೆ ಎಂದರು.
ಕಳೆದ ಹತ್ತು ವರ್ಷಗಳಲ್ಲಿ ದೇಶದ ಗೌರವ, ಭದ್ರತೆಗಾಗಿ ಮೋದಿ ಕೆಲಸ ಮಾಡಿದ್ದಾರೆ. ಹಿಂದಿನ ಯುಪಿಎ ಸರ್ಕಾರವನ್ನು ಗೋಟಾಲಾ ಸರ್ಕಾರ ಎನ್ನಲಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಧಾನಿ ಹೋದರೆ ಎದ್ದು ನಿಂತು ಗೌರವ ಕೊಡುತ್ತಿರಲಿಲ್ಲ. ಮೋದಿ ಪ್ರಧಾನಿಯಾದ ಮೇಲೆ ಎಲ್ಲ ಬದಲಾಗಿದೆ. ದೇಶದ ಸೈನ್ಯದ ದಿಕ್ಕು ಬದಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿದೆ. ಯಾವುದೇ ದೇಶಕ್ಕೆ ಹೋದರೂ ಭಾರತಕ್ಕೆ ಗೌರವ ಸಿಗುತ್ತಿದೆ. ಇದಕ್ಕೆಲ್ಲ ಪ್ರಧಾನಿ ಮೋದಿ ಅವರು ಕಾರಣ ಎಂದು ಹೇಳಿದರು.
ಬಡತನ ರೇಖೆಗಿಂತ ಕೆಳಗಿನರನ್ನು ಮೇಲೆಕ್ಕೆತ್ತಲಾಗಿದೆ. ರೈತರಿಗೆ ಮೋದಿ ಸಹಾಯ ಮಾಡಿದ್ದಾರೆ. 11 ನೇ ಆರ್ಥಿಕ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ. 2047 ಕ್ಕೆ ಭಾರತ ವಿಶ್ವಗುರು ಆಗಲಿದೆ ಎಂದ ಅವರು, ವಿಮಾನ ನಿಲ್ದಾಣಗಳನ್ನು, ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚಳ ಮಾಡಿದ್ದೇವೆ. ರೈಲ್ವೇಗೆ ಹೊಸ ಕಾಯಕಲ್ಪ ನೀಡಲಾಗಿದೆ. ವಂದೇ ಭಾರತ್ ರೈಲ್ವೇ ಯೋಜನೆ ಮಾಡಲಾಗಿದೆ. ಎಲ್ಲಾ ರಂಗಗಳಲ್ಲಿ ಭಾರತ ಸಾಧನೆ ಮಾಡಿದೆ ಎಂದರು.
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಾ ವಿಚಾರಕ್ಕೆ ಪ್ರತಿಕ್ರಿಯಿಸಿ, ಕ್ಷೇತ್ರದಲ್ಲಿ ಗೊಂದಲವಿದೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲೋ ಕ್ಷೇತ್ರ ಹಾಗಾಗಿ ಬೇಡಿಕೆಯಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿನ ಜನರು ನನ್ನನ್ನು ಎರಡು ಬಾರಿ ಗೆಲ್ಲಿಸಿದ್ದಾರೆ. ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಮಾಡಿದ್ದೇನೆ. ಬೇರೆಯವರು ಟಿಕೆಟ್ ಕೇಳುವುದು ತಪ್ಪಲ್ಲ. ಆದರೆ, ಬೇರೆಯವರನ್ನು ಅವಮಾನ ಮಾಡುವುದು ಸರಿಯಲ್ಲ. ಆದರೆ, ನಾನು ಈ ವಿಷಯದಲ್ಲಿ ವಿಚಲಿತಳಾಗಿಲ್ಲ ಎಂದರು.
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ರೈತರನ್ನು ಮರೆತಿದೆ. ಕೇಂದ್ರ ಕೊಟ್ಟ 235 ಕೋಟಿ ರೂ. ಹಣವನ್ನು ರೈತರಿಗೆ ನೀಡಿಲ್ಲ. ಹಾಗಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಣ ಕೊಡಲು ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಕೇಂದ್ರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. 33 ಸಾವಿರ ಕೋಟಿ ರೂಪಾಯಿ ಅನ್ನು ಫುಡ್ ಪ್ರೊಸೆಸ್ಸಿಂಗ್ಗೆ ಕೇಂದ್ರ ಇಟ್ಟಿದೆ. ಆದರೆ, ಈ ಕುರಿತು ಕೆಲಸ ಮಾಡಲು ರಾಜ್ಯ ಸರ್ಕಾರಕ್ಕೆ ಆಸಕ್ತಿ ಇಲ್ಲ ಎಂದು ಕಿಡಿಕಾರಿದರು.
ಇವರು ಗ್ಯಾರಂಟಿ ಯೋಜನೆಗಳ ಬೆನ್ನು ಬಿದ್ದಿದ್ದಾರೆ. ಸಿಎಂ, ಡಿಸಿಎಂ ಹಾಗೂ ಸಚಿವರಿಗೆ ಆಸಕ್ತಿಯಿಲ್ಲ. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಆದರೂ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ. ಬೆಂಗಳೂರಿನಲ್ಲಿ ಜನರಿಗೆ ನೀರಿಲ್ಲ ಎಂದು ಪರದಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು, ಲೋಕಸಭಾ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ನಮ್ಮ ಹಿರಿಯರು ತೀರ್ಮಾನ ಮಾಡುತ್ತಾರೆ ಎಂದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ದೊಡ್ಡ ಪ್ರಜಾತಂತ್ರದ ಚುನಾವಣೆ. ಎಲ್ಲ ವರ್ಗದವರಿಗೂ ಮತದಾನದ ಹಕ್ಕು ನೀಡಲಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲಿದ್ದು, ಇಸ್ ಬಾರ್ ಚಾರ್ ಸೌ ಪಾರ್. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಜನರು ಮೋದಿಗೆ ಬೆಂಬಲ ನೀಡುತ್ತಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370 ಕಲಂ ಬದಲಾವಣೆ ಮಾಡಿದ್ದೇವೆ ಎಂದರು.
ಕಳೆದ ಹತ್ತು ವರ್ಷಗಳಲ್ಲಿ ದೇಶದ ಗೌರವ, ಭದ್ರತೆಗಾಗಿ ಮೋದಿ ಕೆಲಸ ಮಾಡಿದ್ದಾರೆ. ಹಿಂದಿನ ಯುಪಿಎ ಸರ್ಕಾರವನ್ನು ಗೋಟಾಲಾ ಸರ್ಕಾರ ಎನ್ನಲಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಧಾನಿ ಹೋದರೆ ಎದ್ದು ನಿಂತು ಗೌರವ ಕೊಡುತ್ತಿರಲಿಲ್ಲ. ಮೋದಿ ಪ್ರಧಾನಿಯಾದ ಮೇಲೆ ಎಲ್ಲ ಬದಲಾಗಿದೆ. ದೇಶದ ಸೈನ್ಯದ ದಿಕ್ಕು ಬದಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿದೆ. ಯಾವುದೇ ದೇಶಕ್ಕೆ ಹೋದರೂ ಭಾರತಕ್ಕೆ ಗೌರವ ಸಿಗುತ್ತಿದೆ. ಇದಕ್ಕೆಲ್ಲ ಪ್ರಧಾನಿ ಮೋದಿ ಅವರು ಕಾರಣ ಎಂದು ಹೇಳಿದರು.
ಬಡತನ ರೇಖೆಗಿಂತ ಕೆಳಗಿನರನ್ನು ಮೇಲೆಕ್ಕೆತ್ತಲಾಗಿದೆ. ರೈತರಿಗೆ ಮೋದಿ ಸಹಾಯ ಮಾಡಿದ್ದಾರೆ. 11 ನೇ ಆರ್ಥಿಕ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ. 2047 ಕ್ಕೆ ಭಾರತ ವಿಶ್ವಗುರು ಆಗಲಿದೆ ಎಂದ ಅವರು, ವಿಮಾನ ನಿಲ್ದಾಣಗಳನ್ನು, ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚಳ ಮಾಡಿದ್ದೇವೆ. ರೈಲ್ವೇಗೆ ಹೊಸ ಕಾಯಕಲ್ಪ ನೀಡಲಾಗಿದೆ. ವಂದೇ ಭಾರತ್ ರೈಲ್ವೇ ಯೋಜನೆ ಮಾಡಲಾಗಿದೆ. ಎಲ್ಲಾ ರಂಗಗಳಲ್ಲಿ ಭಾರತ ಸಾಧನೆ ಮಾಡಿದೆ ಎಂದರು.
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಾ ವಿಚಾರಕ್ಕೆ ಪ್ರತಿಕ್ರಿಯಿಸಿ, ಕ್ಷೇತ್ರದಲ್ಲಿ ಗೊಂದಲವಿದೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲೋ ಕ್ಷೇತ್ರ ಹಾಗಾಗಿ ಬೇಡಿಕೆಯಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿನ ಜನರು ನನ್ನನ್ನು ಎರಡು ಬಾರಿ ಗೆಲ್ಲಿಸಿದ್ದಾರೆ. ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಮಾಡಿದ್ದೇನೆ. ಬೇರೆಯವರು ಟಿಕೆಟ್ ಕೇಳುವುದು ತಪ್ಪಲ್ಲ. ಆದರೆ, ಬೇರೆಯವರನ್ನು ಅವಮಾನ ಮಾಡುವುದು ಸರಿಯಲ್ಲ. ಆದರೆ, ನಾನು ಈ ವಿಷಯದಲ್ಲಿ ವಿಚಲಿತಳಾಗಿಲ್ಲ ಎಂದರು.
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ರೈತರನ್ನು ಮರೆತಿದೆ. ಕೇಂದ್ರ ಕೊಟ್ಟ 235 ಕೋಟಿ ರೂ. ಹಣವನ್ನು ರೈತರಿಗೆ ನೀಡಿಲ್ಲ. ಹಾಗಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಣ ಕೊಡಲು ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಕೇಂದ್ರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. 33 ಸಾವಿರ ಕೋಟಿ ರೂಪಾಯಿ ಅನ್ನು ಫುಡ್ ಪ್ರೊಸೆಸ್ಸಿಂಗ್ಗೆ ಕೇಂದ್ರ ಇಟ್ಟಿದೆ. ಆದರೆ, ಈ ಕುರಿತು ಕೆಲಸ ಮಾಡಲು ರಾಜ್ಯ ಸರ್ಕಾರಕ್ಕೆ ಆಸಕ್ತಿ ಇಲ್ಲ ಎಂದು ಕಿಡಿಕಾರಿದರು.
ಇವರು ಗ್ಯಾರಂಟಿ ಯೋಜನೆಗಳ ಬೆನ್ನು ಬಿದ್ದಿದ್ದಾರೆ. ಸಿಎಂ, ಡಿಸಿಎಂ ಹಾಗೂ ಸಚಿವರಿಗೆ ಆಸಕ್ತಿಯಿಲ್ಲ. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಆದರೂ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ. ಬೆಂಗಳೂರಿನಲ್ಲಿ ಜನರಿಗೆ ನೀರಿಲ್ಲ ಎಂದು ಪರದಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು, ಲೋಕಸಭಾ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ನಮ್ಮ ಹಿರಿಯರು ತೀರ್ಮಾನ ಮಾಡುತ್ತಾರೆ ಎಂದರು.