ಯತೀಂದ್ರ ಮಾತಾಡಿದ್ದು ಗೊತ್ತಿಲ್ಲ ; ಸತ್ಯ ತಿಳಿದು ಮಾತಾಡುತ್ತೇನೆ ; ಎಂಬಿ ಪಾಟೀಲ್
1054 views
ವಿಜಯಪುರ ವಿಡಿಯೋಗಳಿಗೆ ಚಂದಾದಾರರಾಗಿವಿಜಯಪುರ: ಯತೀಂದ್ರ ಏನು ಮಾತಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಯತೀಂದ್ರ ಅವರ ವಿಡಿಯೋ ನೋಡಿಲ್ಲ, ಸತ್ಯಾಸತ್ಯತೆ ತಿಳಿದುಕೊಳ್ಳಬೇಕಾಗುತ್ತೆ ಎಂದು ಹೇಳಿದರು.
ಈಗ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಬಂದಿದೆ, ಹಿಂದೆ ಮಹಾರಾಷ್ಟ್ರ ಮೂಲದವನು ನಂದೇ ಒಂದು ಮಿಮಿಕ್ರಿ ಮಾಡಿದ್ದ, ಅವನನ್ನು ಅರೆಸ್ಟ್ ಮಾಡಿಸಿ ಜೈಲಿಗೆ ಹಾಕಿದ್ವಿ, ನಾಟಕ ಮಾಡುವವನು ಅವಾ, ಮಿಮಿಕ್ರಿ ಮಾಡ್ತಿದ್ದ, ಆರ್ಟಿಫಿಷೀಯಲ್ ಇಂಟಲಿಜೆನ್ಸ್ ಬಂದಿದೆ, ಏನುಬೇಕಾದ್ರೂ ಬದಲಾವಣೆ ಮಾಡಬಹುದು, ಹಸಿರು ಇರೋ ನಿಮ್ಮ ಶರ್ಟ್ ಕೆಂಪು ಮಾಡಬಹುದು ಎಂದು ಕಿಚಾಯಿಸಿದರು.
ವಿಜಯಪುರ ಲೋಕಸಭಾ ಆಕಾಂಕ್ಷಿಗಳ ವಿಚಾರಕ್ಕೆ ಮಾತನಾಡಿದ ಅವರು, ಬಹಳಷ್ಟು ಆಕಾಂಕ್ಷಿಗಳು ಇದ್ದಾರೆ, ಸತೀಶ್ ಜಾರಕಿಹೊಳಿ ಅವರು ಬಂದು ಮೀಟಿಂಗ್ ಮಾಡಿಕೊಂಡು ಹೋಗಿದ್ದಾರೆ, ಅದನ್ನ ಪಕ್ಷದಲ್ಲಿ ಚರ್ಚೆ ಮಾಡಲಾಗುವುದು. ಕೆಪಿಸಿಸಿ ಅಧ್ಯಕ್ಷರು, ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಎಲ್ಲವೂ ನಿರ್ಣಯ ಆಗ್ತದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ ಅವರ ಪಕ್ಷದ ವಿಚಾರ, ನಾನು ಆ ಬಗ್ಗೆ ಹೇಳಿಕೆ ನೀಡಲು ಬಯಸುವುದಿಲ್ಲ, ವಿಜಯೇಂದ್ರ ಅವರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರ ಹಿಂದೆ ಏನಿದೆ ಅಂದರೆ, ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನ ಉಪಯೋಗಿಸಿಕೊಳ್ಳಬೇಕೆಂದು ವಿಜಯೇಂದ್ರರನ್ನಾ ನೇಮಕ ಮಾಡಿದ್ದಾರೆ, ಯಾಕಂದರೆ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೊತ್ತಾಯಿತು ಲಿಂಗಾಯತ ಮತಗಳು ಬಿಜೆಪಿ ಕೈಬಿಟ್ಟು, ಕೇವಲ ಹದಿನೇಳು ಸೀಟು ಪಡೆದುಕೊಳ್ಳುವಂತಾಯಿತು, ಹೀಗಾಗಿ ಈಗಾ ಅನಿವಾರ್ಯವಾಗಿ ಯಡಿಯೂರಪ್ಪನವರನ್ನ ಬಳಸಿಕೊಳ್ಳಬೇಕು ಎಂದು ವಿಜಯೇಂದ್ರಗೆ ಪಟ್ಟ ಕಟ್ಟಿದ್ದಾರೆ ಎಂದು ಹೇಳಿದರು.
ಈಗ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಬಂದಿದೆ, ಹಿಂದೆ ಮಹಾರಾಷ್ಟ್ರ ಮೂಲದವನು ನಂದೇ ಒಂದು ಮಿಮಿಕ್ರಿ ಮಾಡಿದ್ದ, ಅವನನ್ನು ಅರೆಸ್ಟ್ ಮಾಡಿಸಿ ಜೈಲಿಗೆ ಹಾಕಿದ್ವಿ, ನಾಟಕ ಮಾಡುವವನು ಅವಾ, ಮಿಮಿಕ್ರಿ ಮಾಡ್ತಿದ್ದ, ಆರ್ಟಿಫಿಷೀಯಲ್ ಇಂಟಲಿಜೆನ್ಸ್ ಬಂದಿದೆ, ಏನುಬೇಕಾದ್ರೂ ಬದಲಾವಣೆ ಮಾಡಬಹುದು, ಹಸಿರು ಇರೋ ನಿಮ್ಮ ಶರ್ಟ್ ಕೆಂಪು ಮಾಡಬಹುದು ಎಂದು ಕಿಚಾಯಿಸಿದರು.
ವಿಜಯಪುರ ಲೋಕಸಭಾ ಆಕಾಂಕ್ಷಿಗಳ ವಿಚಾರಕ್ಕೆ ಮಾತನಾಡಿದ ಅವರು, ಬಹಳಷ್ಟು ಆಕಾಂಕ್ಷಿಗಳು ಇದ್ದಾರೆ, ಸತೀಶ್ ಜಾರಕಿಹೊಳಿ ಅವರು ಬಂದು ಮೀಟಿಂಗ್ ಮಾಡಿಕೊಂಡು ಹೋಗಿದ್ದಾರೆ, ಅದನ್ನ ಪಕ್ಷದಲ್ಲಿ ಚರ್ಚೆ ಮಾಡಲಾಗುವುದು. ಕೆಪಿಸಿಸಿ ಅಧ್ಯಕ್ಷರು, ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಎಲ್ಲವೂ ನಿರ್ಣಯ ಆಗ್ತದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ ಅವರ ಪಕ್ಷದ ವಿಚಾರ, ನಾನು ಆ ಬಗ್ಗೆ ಹೇಳಿಕೆ ನೀಡಲು ಬಯಸುವುದಿಲ್ಲ, ವಿಜಯೇಂದ್ರ ಅವರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರ ಹಿಂದೆ ಏನಿದೆ ಅಂದರೆ, ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನ ಉಪಯೋಗಿಸಿಕೊಳ್ಳಬೇಕೆಂದು ವಿಜಯೇಂದ್ರರನ್ನಾ ನೇಮಕ ಮಾಡಿದ್ದಾರೆ, ಯಾಕಂದರೆ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೊತ್ತಾಯಿತು ಲಿಂಗಾಯತ ಮತಗಳು ಬಿಜೆಪಿ ಕೈಬಿಟ್ಟು, ಕೇವಲ ಹದಿನೇಳು ಸೀಟು ಪಡೆದುಕೊಳ್ಳುವಂತಾಯಿತು, ಹೀಗಾಗಿ ಈಗಾ ಅನಿವಾರ್ಯವಾಗಿ ಯಡಿಯೂರಪ್ಪನವರನ್ನ ಬಳಸಿಕೊಳ್ಳಬೇಕು ಎಂದು ವಿಜಯೇಂದ್ರಗೆ ಪಟ್ಟ ಕಟ್ಟಿದ್ದಾರೆ ಎಂದು ಹೇಳಿದರು.