ಮುಂಬೈನ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ರಾಮ್ ಚರಣ್; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್
1190 views
ಮನರಂಜನೆ ವಿಡಿಯೋಗಳಿಗೆ ಚಂದಾದಾರರಾಗಿನಟ ರಾಮ್ ಚರಣ್ ಅವರು ಮುಂಬೈನ ಪ್ರಸಿದ್ಧ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ. ರಾಮ್ ಚರಣ್ ದೇವರ ದದರ್ಶನ ಪಡೆಯುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ವಿಶೇಷವೆಂದರೆ, ದೇವಸ್ಥಾನದ ರಸ್ತೆಯಲ್ಲಿ ಬರಿಗಾಲಿನಲ್ಲೇ ನಡೆದುಕೊಂಡು ಬಂದರು. ರಾಮ್ ಚರಣ್ ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿದ್ದರು. ಅದೇ ಕಾರಣಕ್ಕೆ ಕಪ್ಪು ಬಣ್ಣದ ಸರಳ ಉಡುಗೆ ಧರಿಸಿ, ಚಪ್ಪಲಿ ತ್ಯಜಿಸಿ ಬರಿಗಾಲಲ್ಲಿ ನಡೆದುಕೊಂಡು ಬಂದರು. ರಸ್ತೆಯಲ್ಲಿ ರಾಮ್ ಚರಣ್ ಬರುತ್ತಿದ್ದಂತೆಯೇ, ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಈ ವೇಳೆ ತಳ್ಳಾಟ, ನೂಕಾಟ ಉಂಟಾಯಿತು. ನಟ ರಾಮ್ ಚರಣ್ ಆಗ ಅಭಿಮಾನಿಗಳ ಬಗ್ಗೆ ಕಾಳಜಿವಹಿಸಿದರು. ರಾಮ್ ಚರಣ್ ಅವರ ಸರಳತೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಅಂದಹಾಗೆ, ಮಗಳು ಕ್ಲಿನ್ ಕ್ಲಾರ್ ಜನಿಸಿದ ಬಳಿಕ ಅಯ್ಯಪ್ಪ ಮಾಲೆ ಧರಿಸಿದ್ದ ರಾಮ್ ಚರಣ್, ಈಗ ದೀಕ್ಷೆಯನ್ನು ಮುಕ್ತಾಯಗೊಳಿಸಿದ್ದಾರೆ.ಇನ್ನು, ಸಿನಿಮಾ ವಿಚಾರಕ್ಕೆ ಬಂದರೆ, ಕಳೆದ ವರ್ಷ ಅವರ 'ಆರ್ಆರ್ಆರ್' ಸಿನಿಮಾವು ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಂಡಿತ್ತು. ಈ ವರ್ಷ ಅವರ ಯಾವ ಸಿನಿಮಾವೂ ತೆರೆಕಂಡಿಲ್ಲ. ಸದ್ಯ 'ಗೇಮ್ ಚೇಂಜರ್' ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದು, ಇದರ ಜೊತೆಗೆ ಮತ್ತೊಂದು ಸಿನಿಮಾವನ್ನು ಕೂಡ ಅವರು ಒಪ್ಪಿಕೊಂಡಿದ್ದಾರೆ.