ನಾನು ಕೇರಳದಲ್ಲಿ ಅನಧಿಕೃತವಾಗಿ ಕನ್ನಡ ಚಿತ್ರರಂಗದ ರಾಯಭಾರಿ: ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್
1016 views
ಮನರಂಜನೆ ವಿಡಿಯೋಗಳಿಗೆ ಚಂದಾದಾರರಾಗಿಕೆಜಿಎಫ್ 2, 777 ಚಾರ್ಲಿ ಸಿನಿಮಾವನ್ನು ಕೇರಳದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರು ವಿತರಣೆ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಚಿತ್ರಗಳಿಂದ ಹಣ ಬಂದ ಬಗ್ಗೆ, ಕೇರಳದಲ್ಲಿ ಅವರನ್ನು ಕನ್ನಡ ಚಿತ್ರರಂಗದ ರಾಯಭಾರಿ ಎಂದು ಅನಧಿಕೃತವಾಗಿ ಕರೆಯುವ ಬಗ್ಗೆ ಮಾತನಾಡಿದ್ದಾರೆ. ಇನ್ನು ಜನ ಗಣ ಮನ ಸೇರಿದಂತೆ ಅವರ ಹಿಂದಿನ ಸಿನಿಮಾಗಳನ್ನು ಕರ್ನಾಟಕದಲ್ಲಿ, ಅದರಲ್ಲಿಯೂ ಬೆಂಗಳೂರಿನಲ್ಲಿ ಜನರು ನೋಡಿರುವ ಬಗ್ಗೆ ಅವರು ಪ್ರಸ್ತಾಪ ಮಾಡಿದ್ದಾರೆ.
ಕೇರಳದಲ್ಲಿ 'ಕೆಜಿಎಫ್ 2', '777 ಚಾರ್ಲಿ' ಚಿತ್ರದಿಂದ ತುಂಬ ದುಡ್ಡು ಬಂದಿದೆ: ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್
ಪೃಥ್ವಿರಾಜ್ ಸುಕುಮಾರನ್ ಅವರ ಬಹು ನಿರೀಕ್ಷಿತ 'ಕಡುವ' ಸಿನಿಮಾ ಜೂನ್ 30ರಂದು ರಿಲೀಸ್ ಆಗುತ್ತಿದೆ. ಮಲಯಾಳಂ, ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಈ ಚಿತ್ರ ರಿಲೀಸ್ ಆಗುತ್ತಿದೆ. 'ಭೀಮ್ಲಾ ನಾಯಕ್' ಸಿನಿಮಾ ಖ್ಯಾತಿಯ ಸಂಯುಕ್ತಾ ಮೆನನ್ ಈ ಚಿತ್ರದಲ್ಲಿ ಪೃಥ್ವಿರಾಜ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ ನಟ ವಿವೇಕ್ ಓಬೆರಾಯ್ ಕೂಡ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಬೆಂಗಳೂರಿಗೆ ಅವರು 'ಕಡುವ' ಪ್ರಚಾರಕ್ಕೆ ಬಂದಿದ್ದರು. ಆ ವೇಳೆ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.
ಕೇರಳದಲ್ಲಿ 'ಕೆಜಿಎಫ್ 2', '777 ಚಾರ್ಲಿ' ಚಿತ್ರದಿಂದ ತುಂಬ ದುಡ್ಡು ಬಂದಿದೆ: ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್
ಪೃಥ್ವಿರಾಜ್ ಸುಕುಮಾರನ್ ಅವರ ಬಹು ನಿರೀಕ್ಷಿತ 'ಕಡುವ' ಸಿನಿಮಾ ಜೂನ್ 30ರಂದು ರಿಲೀಸ್ ಆಗುತ್ತಿದೆ. ಮಲಯಾಳಂ, ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಈ ಚಿತ್ರ ರಿಲೀಸ್ ಆಗುತ್ತಿದೆ. 'ಭೀಮ್ಲಾ ನಾಯಕ್' ಸಿನಿಮಾ ಖ್ಯಾತಿಯ ಸಂಯುಕ್ತಾ ಮೆನನ್ ಈ ಚಿತ್ರದಲ್ಲಿ ಪೃಥ್ವಿರಾಜ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ ನಟ ವಿವೇಕ್ ಓಬೆರಾಯ್ ಕೂಡ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಬೆಂಗಳೂರಿಗೆ ಅವರು 'ಕಡುವ' ಪ್ರಚಾರಕ್ಕೆ ಬಂದಿದ್ದರು. ಆ ವೇಳೆ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.