ಬಹುಭಾಷಾ ನಟಿ ಲೀಲಾವತಿ ನಿಧನ, ಕನ್ನಡದಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯ
ಮನರಂಜನೆ ವಿಡಿಯೋಗಳಿಗೆ ಚಂದಾದಾರರಾಗಿ
ಸಿನಿಮಾ ಕಲಾವಿದೆ ನಟಿ ಲೀಲಾವತಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಶುಕ್ರವಾರ ನಮ್ಮನ್ನು ಅಗಲಿದ್ದಾರೆ. ನಾಯಕಿಯಾಗಿ ಹಾಗೂ ಪ್ರಮುಖ ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ಚಿತ್ರರಸಿಕರಿಂದ ಮೆಚ್ಚುಗೆ ಗಳಿಸಿದ್ದ ಲೀಲಾವತಿ ಅವರು ತಮ್ಮ 86ನೇ ವಯಸ್ಸಿನಲ್ಲಿ ಇಹಲೋಕವನ್ನು ಅಗಲಿದ್ದಾರೆ.
ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅವರು ನೆಲೆಸಿದ್ದರು. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು. ಕೆಲವು ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಟ ಶಿವರಾಜ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು.
ದಕ್ಷಿಣ ಭಾರತದ ಜನಪ್ರಿಯ ನಟಿ ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೇ ತಮಿಳು, ತೆಲುಗು, ಮಲಯಾಳಂನಲ್ಲಿ ಆರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. 1937ರಲ್ಲಿ ಬೆಳ್ತಂಗಡಿಯಲ್ಲಿ ಹುಟ್ಟಿದ ಅವರು ಮೈಸೂರು, ಬೆಂಗಳೂರು ಹಾಗೂ ಚೆನ್ನೈನಲ್ಲಿ ಹೆಚ್ಚಿನ ಸಮಯ ಕಳೆದರು. ಗೆಜ್ಜೆಪೂಜೆ, ಸಿಪಾಯಿ ರಾಮು, ಡಾಕ್ಟರ್ ಕೃಷ್ಣ, ಸಂತ ತುಕಾರಾಂ, ಕಣ್ತೆರದು ನೋಡು, ಕುಲವಧು, ವೀರ ಕೇಸರಿ, ಭಕ್ತ ಕುಂಬಾರ ಸೇರಿದಂತೆ ಹಲವು ಅತ್ಯುತ್ತಮ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಭಕ್ತ ಪ್ರಹ್ಲಾದ ಲೀಲಾವತಿ ಅವರ ಮೊದಲ ಸಿನಿಮಾ ಹಾಗೂ 'ಯಾರದು' ಕೊನೆಯ ಸಿನಿಮಾ. ರಣಧೀರ ಕಂಠೀರವ ಸಿನಿಮಾದಲ್ಲಿ ಡಾ.ರಾಜ್ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ಕಾಣಿಸಿಕೊಂಡರು. ಹಲವು ದಿಗ್ಗಜ ನಟರೊಂದಿಗೆ ಅವರು ಅಭಿನಯಿಸಿದ್ದರು. ನಟನೆ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಅವರು ತೊಡಗಿಸಿಕೊಂಡಿದ್ದರು. ಕೊನೆಯ ದಿನಗಳಲ್ಲಿ ಮಗ ವಿನೋದ್ ರಾಜ್ ಅವರೊಂದಿಗೆ ತೋಟ, ಕೃಷಿಯ ಕೆಲಸಗಳಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದರು.
ಸೋಲದೇವನಹಳ್ಳಿಯಲ್ಲಿ ಲೀಲಾವತಿ ಹೆಸರಿನಲ್ಲಿ ಇತ್ತೀಚೆಗೆ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ.
ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ''ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ'' ಎಂದಿದ್ದಾರೆ.
ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅವರು ನೆಲೆಸಿದ್ದರು. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು. ಕೆಲವು ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಟ ಶಿವರಾಜ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು.
ದಕ್ಷಿಣ ಭಾರತದ ಜನಪ್ರಿಯ ನಟಿ ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೇ ತಮಿಳು, ತೆಲುಗು, ಮಲಯಾಳಂನಲ್ಲಿ ಆರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. 1937ರಲ್ಲಿ ಬೆಳ್ತಂಗಡಿಯಲ್ಲಿ ಹುಟ್ಟಿದ ಅವರು ಮೈಸೂರು, ಬೆಂಗಳೂರು ಹಾಗೂ ಚೆನ್ನೈನಲ್ಲಿ ಹೆಚ್ಚಿನ ಸಮಯ ಕಳೆದರು. ಗೆಜ್ಜೆಪೂಜೆ, ಸಿಪಾಯಿ ರಾಮು, ಡಾಕ್ಟರ್ ಕೃಷ್ಣ, ಸಂತ ತುಕಾರಾಂ, ಕಣ್ತೆರದು ನೋಡು, ಕುಲವಧು, ವೀರ ಕೇಸರಿ, ಭಕ್ತ ಕುಂಬಾರ ಸೇರಿದಂತೆ ಹಲವು ಅತ್ಯುತ್ತಮ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಭಕ್ತ ಪ್ರಹ್ಲಾದ ಲೀಲಾವತಿ ಅವರ ಮೊದಲ ಸಿನಿಮಾ ಹಾಗೂ 'ಯಾರದು' ಕೊನೆಯ ಸಿನಿಮಾ. ರಣಧೀರ ಕಂಠೀರವ ಸಿನಿಮಾದಲ್ಲಿ ಡಾ.ರಾಜ್ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ಕಾಣಿಸಿಕೊಂಡರು. ಹಲವು ದಿಗ್ಗಜ ನಟರೊಂದಿಗೆ ಅವರು ಅಭಿನಯಿಸಿದ್ದರು. ನಟನೆ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಅವರು ತೊಡಗಿಸಿಕೊಂಡಿದ್ದರು. ಕೊನೆಯ ದಿನಗಳಲ್ಲಿ ಮಗ ವಿನೋದ್ ರಾಜ್ ಅವರೊಂದಿಗೆ ತೋಟ, ಕೃಷಿಯ ಕೆಲಸಗಳಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದರು.
ಸೋಲದೇವನಹಳ್ಳಿಯಲ್ಲಿ ಲೀಲಾವತಿ ಹೆಸರಿನಲ್ಲಿ ಇತ್ತೀಚೆಗೆ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ.
ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ''ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ'' ಎಂದಿದ್ದಾರೆ.