'ವೀಕೆಂಡ್ ವಿತ್ ರಮೇಶ್' ಶೋಗೆ ಬಂದ ಹಿರಿಯ ನಟ ದತ್ತಣ್ಣ; ಈ ಎಪಿಸೋಡ್ ಬಗ್ಗೆ ನಟ ರಮೇಶ್ ಅರವಿಂದ್ ಹೇಳಿದ್ದೇನು?
3223 views
ಮನರಂಜನೆ ವಿಡಿಯೋಗಳಿಗೆ ಚಂದಾದಾರರಾಗಿನಟ ರಮೇಶ್ ಅರವಿಂದ್ ಅವರು ನಡೆಸಿಕೊಡುವ 'ವೀಕೆಂಡ್ ವಿತ್ ರಮೇಶ್' ಸೀಸನ್ 5ಕ್ಕೆ ಈಗಾಗಲೇ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ಸಂಚಿಕೆಯನ್ನು ನಟಿ ರಮ್ಯಾ ಅವರಿಂದ ಶುರು ಮಾಡಲಾಯಿತು. ನಂತರದ ನಟ/ನೃತ್ಯ ನಿರ್ದೇಶಕ ಪ್ರಭುದೇವ ಅವರ ಎಪಿಸೋಡ್ಗೆ ಭಾರಿ ಜನಮನ್ನಣೆ ದಕ್ಕಿತ್ತು. ಈಗ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಅವರು ಶೋಗೆ ಅತಿಥಿಯಾಗಿ ಆಗಮಿಸಿದ್ದಾರೆ. ಹಾಗೆಯೇ, ಕನ್ನಡದ ಹಿರಿಯ ನಟ ದತ್ತಣ್ಣ ಅವರು ಕೂಡ ಈ ಶೋಗೆ ಬಂದಿದ್ದಾರೆ. 'ವೀಕೆಂಡ್ ವಿತ್ ರಮೇಶ್' ಸೀಸನ್ 5ಕ್ಕೆ ಸಿಕ್ಕಿರುವ ರೆಸ್ಪಾನ್ಸ್ ಬಗ್ಗೆ ನಟ ರಮೇಶ್ ಅರವಿಂದ್ ಅವರು ವಿಜಯ ಕರ್ನಾಟಕ ವೆಬ್ ಜೊತೆಗೆ ಮಾತನಾಡಿದ್ದಾರೆ. ಹಾಗೆಯೇ ದತ್ತಣ್ಣ ಅವರ ಎಪಿಸೋಡ್ನಲ್ಲಿನ ಕೆಲವೊಂದು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಮತ್ತು ದತ್ತಣ್ಣ ಅವರ ಮಾತು ಕೇಳಿ ಭಾವುಕರಾದ ವಿಚಾರವನ್ನು ಸಹ ರಮೇಶ್ ಈ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.