ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನಕ್ಕೆ ಆಕ್ರೋಶ, ರಸ್ತೆಯುದ್ದಕ್ಕೂ ಟಿಡಿಪಿ ಕಾರ್ಯಕರ್ತರ ಪ್ರತಿಭಟನೆ
2722 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಆಂಧ್ರ ಪ್ರದೇಶದ ನಂದ್ಯಾಲ ಪಟ್ಟಣದ ಆರ್ಕೆ ಫಂಕ್ಷನ್ ಹಾಲ್ನಲ್ಲಿ ಇದ್ದ ಚಂದ್ರಬಾಬು ನಾಯ್ಡು ಅವರನ್ನು ಮುಂಜಾನೆ 6 ಗಂಟೆಗೆ ಬಂಧಿಸಲಾಗಿದೆ. ಇದಕ್ಕೂ ಮುನ್ನ ನಾಯ್ಡು ಅವರಿಗೆ ನೋಟಿಸ್ ನೀಡಲಾಗಿತ್ತು. ನಂದ್ಯಾಲದಿಂದ ವಿಜಯವಾಡಕ್ಕೆ ಚಂದ್ರಬಾಬು ನಾಯ್ಡು ಅವರನ್ನು ಭದ್ರತೆಯೊಂದಿಗೆ ಕರೆತರುವಾಗ ಅವರ ಅಭಿಮಾನಿಗಳು ಹಾಗೂ ತೆಲುಗು ದೇಶಂ ಪಾರ್ಟಿಯ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಹೆದ್ದಾರಿಯಲ್ಲಿ ದಿಢೀರ್ ಸಂಚಾರ ದಟ್ಟಣೆ ಉಂಟಾಯಿತು.
ಪ್ರತಿಭಟನಾಕಾರರು ಅಲ್ಲಲ್ಲಿ ಬೆಂಕಿ ಹಚ್ಚಿದರು, ಸ್ಕೋಟರ್ ಟೈರ್ ಸುಟ್ಟರು. ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಚಂದ್ರಬಾಬು ನಾಯ್ಡು ಅವರ ವಾಹನ ಮತ್ತು ಭದ್ರತಾ ಸಿಬ್ಬಂದಿ ವಾಹನಗಳನ್ನು ಮುಂದೆ ಸಾಗದಂತೆ ತಡೆದರು. ವಿಜಯವಾಡದ ಮಾರ್ಗದುದ್ದಕ್ಕೂ ಹಲವು ಕಡೆ ಇದೇ ಪರಿಸ್ಥಿತಿ ಎದುರಾಯಿತು. ಚಂದ್ರಬಾಬು ನಾಯ್ಡು ಕಾರ್ಯಕರ್ತರಿಗೆ ಸಮಾಧಾನಪಡಿಸಿ ಮುಂದೆ ಸಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ಮುಂಜಾನೆ ನಾಟಕೀಯ ರೀತಿಯಲ್ಲಿ ಬಂಧಿಸಿದೆ. ಚಂದ್ರಬಾಬು ನಾಯ್ಡು ವಿರುದ್ಧ 371 ಕೋಟಿ ರೂ ಮೊತ್ತದ ಆಂಧ್ರಪ್ರದೇಶ ಕೌಶಲ ಅಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪವಿದೆ. ಇದು ಜಾಮೀನು ರಹಿತ ಅಪರಾಧವಾಗಿದೆ ಎಂದು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ (ಇಓಡಬ್ಲ್ಯೂ) ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ ಧನಂಜಯುಡು ತಿಳಿಸಿದ್ದಾರೆ.
ಪ್ರತಿಭಟನಾಕಾರರು ಅಲ್ಲಲ್ಲಿ ಬೆಂಕಿ ಹಚ್ಚಿದರು, ಸ್ಕೋಟರ್ ಟೈರ್ ಸುಟ್ಟರು. ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಚಂದ್ರಬಾಬು ನಾಯ್ಡು ಅವರ ವಾಹನ ಮತ್ತು ಭದ್ರತಾ ಸಿಬ್ಬಂದಿ ವಾಹನಗಳನ್ನು ಮುಂದೆ ಸಾಗದಂತೆ ತಡೆದರು. ವಿಜಯವಾಡದ ಮಾರ್ಗದುದ್ದಕ್ಕೂ ಹಲವು ಕಡೆ ಇದೇ ಪರಿಸ್ಥಿತಿ ಎದುರಾಯಿತು. ಚಂದ್ರಬಾಬು ನಾಯ್ಡು ಕಾರ್ಯಕರ್ತರಿಗೆ ಸಮಾಧಾನಪಡಿಸಿ ಮುಂದೆ ಸಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ಮುಂಜಾನೆ ನಾಟಕೀಯ ರೀತಿಯಲ್ಲಿ ಬಂಧಿಸಿದೆ. ಚಂದ್ರಬಾಬು ನಾಯ್ಡು ವಿರುದ್ಧ 371 ಕೋಟಿ ರೂ ಮೊತ್ತದ ಆಂಧ್ರಪ್ರದೇಶ ಕೌಶಲ ಅಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪವಿದೆ. ಇದು ಜಾಮೀನು ರಹಿತ ಅಪರಾಧವಾಗಿದೆ ಎಂದು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ (ಇಓಡಬ್ಲ್ಯೂ) ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ ಧನಂಜಯುಡು ತಿಳಿಸಿದ್ದಾರೆ.