ವಿರೋಧ ಪಕ್ಷಗಳ ಸಭೆ ಗೇಮ್ ಚೇಂಜರ್ ಆಗಲಿದೆ: ಕೆಸಿ ವೇಣುಗೋಪಾಲ್
1127 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ( ಸಂಘಟನೆ) ಕೆಸಿ ವೇಣುಗೋಪಾಲ್ ಅವರು ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಕೆ.ಸಿ ವೇಣುಗೋಪಾಲ್ ಮಾತನಾಡಿ, ಜೂನ್ 22 ಕ್ಕೆ ಯಶಸ್ವಿಯಾಗಿ ಪಾಟ್ನಾದಲ್ಲಿ ಸಭೆ ನಡೆದಿದೆ. ಇದು ಅದರ ಮುಂದುವರಿದ ಭಾಗವಾಗಿದೆ. ಮಂಗಳವಾರ 11 ಗಂಟೆಗೆ ಸಭೆ ಆರಂಭವಾಗಲಿದೆ. 26 ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ನಾವೆಲ್ಲ ಸಮಾನ ಉದ್ದೇಶಕ್ಕಾಗಿ ಒಗ್ಗೂಡಿದ್ದೇವೆ. ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ಮಾಡುವ ನಿಟ್ಟಿನಲ್ಲಿ ಒಗ್ಗೂಡಿದ್ದೇವೆ. ಬಿಜೆಪಿ ಎಲ್ಲಾ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಹತ್ತಿಕ್ಕಲು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ( ಸಂವಹನ) ಹಾಗೂ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಭಾಗಿಯಾಗಿದ್ದರು. ಮಣಿಪುರ ಹೊತ್ತಿ 75 ದಿನಗಳಿಂದ ಉರಿಯುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಒಂದೂ ಹೇಳಿಕೆಯನ್ನು ನೀಡಿಲ್ಲ. ಕನಿಷ್ಠ ಸಾಂತ್ವನ ವನ್ನು ನೀಡಿಲ್ಲ. ಮತ್ತೊಂದು ಕಡೆಯಲ್ಲಿ ನಿರುದ್ಯೋಗ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ನಾವು ಅಧಿಕಾರ ಪಡೆಯಲು ಒಗ್ಗೂಡಿಲ್ಲ. ಬದಲಾಗಿ ಪ್ರಜಾಪ್ರಭುತ್ವದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಲು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಾವೆಲ್ಲ ಒಗ್ಗೂಡಿದ್ದೇವೆ ಎಂದರು.
ವಿರೋಧ ಪಕ್ಷಗಳ ಈ ಸಭೆ ಗೇಮ್ ಚೇಂಜರ್ ಆಗಲಿದೆ. ವಿರೋಧ ಪಕ್ಷಗಳ ಸಭೆಯ ಬೆನ್ನಲ್ಲೇ ಬಿಜೆಪಿ ಕೂಡಾ ಮಿತ್ರ ಪಕ್ಷಗಳ ಸಭೆಯನ್ನು ಹಮ್ಮಿಕೊಂಡಿದೆ. ಇದು ನಮ್ಮ ಸಭೆಯ ಯಶಸ್ಸನ್ನು ತೋರಿಸುತ್ತದೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಇದೊಂದು ಹೊಸ ಅಧ್ಯಾಯ. ನಾಳೆ ದೇಶದ ಭವಿಷ್ಯದ ಬಗ್ಗೆ ಚರ್ಚೆ ನಡೆಯಲಿದೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಒಗ್ಗಟ್ಟಾಗಿ ಚರ್ಚೆ ನಡೆಸಲಿದ್ದೇವೆ ಎಂದರು. ನಾವು ಈ ಸಭೆಗೆ ಆತಿಥ್ಯ ನೀಡುತ್ತಿದ್ದೇವೆ. ಕರ್ನಾಟಕಲ್ಲಿ ನಮಗೆ ಗೆಲುವು ಸಿಕ್ಕಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ನಮಗೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ( ಸಂವಹನ) ಹಾಗೂ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಭಾಗಿಯಾಗಿದ್ದರು. ಮಣಿಪುರ ಹೊತ್ತಿ 75 ದಿನಗಳಿಂದ ಉರಿಯುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಒಂದೂ ಹೇಳಿಕೆಯನ್ನು ನೀಡಿಲ್ಲ. ಕನಿಷ್ಠ ಸಾಂತ್ವನ ವನ್ನು ನೀಡಿಲ್ಲ. ಮತ್ತೊಂದು ಕಡೆಯಲ್ಲಿ ನಿರುದ್ಯೋಗ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ನಾವು ಅಧಿಕಾರ ಪಡೆಯಲು ಒಗ್ಗೂಡಿಲ್ಲ. ಬದಲಾಗಿ ಪ್ರಜಾಪ್ರಭುತ್ವದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಲು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಾವೆಲ್ಲ ಒಗ್ಗೂಡಿದ್ದೇವೆ ಎಂದರು.
ವಿರೋಧ ಪಕ್ಷಗಳ ಈ ಸಭೆ ಗೇಮ್ ಚೇಂಜರ್ ಆಗಲಿದೆ. ವಿರೋಧ ಪಕ್ಷಗಳ ಸಭೆಯ ಬೆನ್ನಲ್ಲೇ ಬಿಜೆಪಿ ಕೂಡಾ ಮಿತ್ರ ಪಕ್ಷಗಳ ಸಭೆಯನ್ನು ಹಮ್ಮಿಕೊಂಡಿದೆ. ಇದು ನಮ್ಮ ಸಭೆಯ ಯಶಸ್ಸನ್ನು ತೋರಿಸುತ್ತದೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಇದೊಂದು ಹೊಸ ಅಧ್ಯಾಯ. ನಾಳೆ ದೇಶದ ಭವಿಷ್ಯದ ಬಗ್ಗೆ ಚರ್ಚೆ ನಡೆಯಲಿದೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಒಗ್ಗಟ್ಟಾಗಿ ಚರ್ಚೆ ನಡೆಸಲಿದ್ದೇವೆ ಎಂದರು. ನಾವು ಈ ಸಭೆಗೆ ಆತಿಥ್ಯ ನೀಡುತ್ತಿದ್ದೇವೆ. ಕರ್ನಾಟಕಲ್ಲಿ ನಮಗೆ ಗೆಲುವು ಸಿಕ್ಕಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ನಮಗೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.