'ರಾಜ್ಯದಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ' ಪ್ರಧಾನಿ ಮೋದಿ ಮಾತು ಸತ್ಯ - ಸಿಎನ್ ಅಶ್ವತ್ಥ ನಾರಾಯಣ
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ 'ರಾಜ್ಯದಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ' ಎಂದು ಆರೋಪ ಮಾಡಿರುವುದು ಸತ್ಯ. ಕಾಂಗ್ರೆಸ್ ಲೂಟಿ ಸರ್ಕಾರ ಎನ್ನುವುದಕ್ಕೆ ಸಾಕ್ಷಿಯ ಅಗತ್ಯ ಇದೆಯಾ? ಎಂದು ಮಾಜಿ ಡಿಸಿಎಂ ಡಾ. ಸಿಎನ್ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ವಿಜಯ ಕರ್ನಾಟಕ ವೆಬ್ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಪರೇಷನ್ ಕಮಲ, ಭ್ರಷ್ಟಾಚಾರ ಆರೋಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಪೂರ್ಣ ವಿವರಗಳಿಗೆ ಈ ವಿಡಿಯೋ ನೋಡಿ.