Lok Sabha Elections : ಶಿವಮೊಗ್ಗ ಲೋಕಸಭಾ ಕೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ
1198 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ನಾನು ನಾಮಪತ್ರ ಸಲ್ಲಿಸೋದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಗುಟುರು ಹಾಕಿದ್ದ ಕೆಎಸ್ ಈಶ್ವರಪ್ಪ ಎಲ್ಲರಿಗೂ ಸೆಡ್ಡು ಹೊಡೆದು ಶುಕ್ರವಾರ ಅದ್ದೂರಿ ಮೆರವಣಿಗೆ ಮೂಲಕ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕೇತ್ರದಲ್ಲಿ ಇದೀಗ ತ್ರೀಕೋನ ಸ್ಪರ್ಧೆ ಏರ್ಪಟ್ಟಿದೆ. ಮಗನಿಗೆ ಟಿಕೆಟ್ ಸಿಗದ ಹಿನ್ನಲೆ ಅಸಮಾಧಾನಗೊಂಡಿದ್ದ ಕೆಎಸ್ ಈಶ್ವರಪ್ಪ ಬಿಎಸ್ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದರು. ಟೆಕಟ್ ಮಿಸ್ ಆದ ದಿನದಿಂದಲೂ ಪ್ರತಿದಿನವೂ ಕೂಡ ಬಿಎಸ್ ಯಡಿಯೂರಪ್ಪ ಕುಟುಂಬದ ಮೇಲೆ ಆರೋಪಗಳನ್ನು ಮಾಡುತ್ತಲೇ ಬಂದಿದ್ದ ಕೆಎಸ್ ಈಶ್ವರಪ್ಪ ರಾಜ್ಯ ಬಿಜೆಪಿ ಇಂದು ಕುಟುಂಬದ ಕಪಿಮುಷ್ಠಿಯಲ್ಲಿದೆ ಅದು ತೊಲಗಬೇಕು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದಕ್ಕೆ ಮನ್ನಣೆ ನೀಡಲ್ಲ ಎಂದಿದ್ದರು. ಇನ್ನೂ ಹಲವು ಬಾರಿ ಬಿಜೆಪಿ ನಾಯಕರು ಮನವೊಲಿಸಲು ಪ್ರಯತ್ನಿಸಿದರೂ ಯಾವುದಕ್ಕೂ ಬಗ್ಗದ ಕೆಸ್ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ಬಿವೈ ರಾಘವೇಂದ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ಕುಮಾರ್ ಕಣದಲಿದ್ದಾರೆ. ಶಿವಮೊಗ್ಗದಲ್ಲಿ ಸದ್ಯ ಇದೀಗ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.