ಏನಿಲ್ಲ ಏನಿಲ್ಲ, ಬೆಂಗಳೂರಿನಲ್ಲಿ ನೀರಿಲ್ಲ: ಸರ್ಕಾರಕ್ಕೆ ಆರ್ ಅಶೋಕ್ ಚಾಟಿ
1150 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಲಹೆ ನೀಡಿದರು.
ನಮ್ಮ ಹಣ ನಮ್ಮ ಹಕ್ಕು ಎಂದು ಘೋಷಣೆಯೊಂದಿಗೆ ದೆಹಲಿಯಲ್ಲಿ 136 ಕಾಂಗ್ರೆಸ್ ಶಾಸಕರು ಹೋರಾಟ ಮಾಡಿದ್ದರು. ಅದೇ ಮಾದರಿಯಲ್ಲಿ ಚೆನ್ನೈನಲ್ಲಿ ಹೋರಾಟ ಮಾಡುವಂತೆ ಸಲಹೆ ಕೊಟ್ಟರು. ರಾಜ್ಯದ ಹಿತ ಮುಖ್ಯವೇ ಅಥವಾ ಇಂಡಿ ಮೈತ್ರಿ ಮುಖ್ಯವೇ ಎಂಬ ಪರ್ವಕಾಲದಲ್ಲಿ ಕಾಂಗ್ರೆಸ್ಸಿಗರು ಇದ್ದಾರೆ ಎಂದು ತಿಳಿಸಿದರು. ರಾಜ್ಯದ ಜನತೆ ನಿಮ್ಮನ್ನು ನಂಬಬೇಕಿದ್ದರೆ, ನುಡಿದಂತೆ ನಡೆಯುವವರು ಎಂದು ತೋರಿಸುವುದಾದರೆ ಮೈತ್ರಿ ಮುಖ್ಯವೇ ರಾಜ್ಯದ ಹಿತ ಮುಖ್ಯವೇ ಎಂದು ತೀರ್ಮಾನ ಮಾಡಿ ಎಂದು ಆಗ್ರಹಿಸಿದರು.
ಹಿಂದೆ ಮಹದಾಯಿ ಸಂಬಂಧ ಗೋವಾದಲ್ಲಿ ಸೋನಿಯಾ ಗಾಂಧಿಯವರು ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಕೊಡುವುದಿಲ್ಲ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಡಿಎಂಕೆ ಮುಖಾಂತರ ಈ ಮಾತನ್ನಾಡಿಸಿದ್ದಾರೆ ಎಂದು ಆಕ್ಷೇಪ ಸೂಚಿಸಿದರು. ವಿಪಕ್ಷದ ನಾಯಕರು ರಾಜ್ಯದ ಹಿತದೃಷ್ಟಿಯಿಂದ ಸಲಹೆ ನೀಡಿದರೆ, ನಾನು ಅದನ್ನು ತೆಗೆದುಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ. ನಾನು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರಿಗೆ ಒಳ್ಳೆಯ ಸಲಹೆ ನೀಡುತ್ತೇನೆ ಎಂದು ತಿಳಿಸಿದರು.
ಇವರಲ್ಲಿ ಯಾರು ಫಸ್ಟ್ ಯಾರು ಸೆಕೆಂಡ್ ಎಂಬ ಗೊಂದಲದಲ್ಲಿ ನಾನಿದ್ದೇನೆ. ಯಾವಾಗ ಯಾರು ಸಿಎಂ ಎಂದೇ ಗೊತ್ತಾಗುವುದಿಲ್ಲ. ಸಿಎಂ, ಸೂಪರ್ ಸಿಎಂ, ಭಾವಿ ಸಿಎಂ, ಶ್ಯಾಡೋ ಸಿಎಂ ಇರುವುದಾಗಿ ಪ್ರಧಾನಿಯವರೇ ಹೇಳಿದ್ದಾರೆ ಎಂದು ಗಮನ ಸೆಳೆದರು. ಕರ್ನಾಟಕದಲ್ಲಿ ವೀಕ್ ಸಿಎಂ ಇದ್ದಾರೆ; ವೀಕ್ ಗವರ್ನಮೆಂಟ್ ಇದೆ ಎಂದ ಅವರು, ಈ ದೌರ್ಬಲ್ಯವನ್ನು ಉಪಯೋಗಿಸಿ ಇಂಡಿ ಒಕ್ಕೂಟದ ಮುಖ್ಯ ಪಾಲುದಾರ ಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದಿದೆ ಎಂದು ಆಕ್ಷೇಪಿಸಿದರು.
ನಮ್ಮ ಹಣ ನಮ್ಮ ಹಕ್ಕು ಎಂದು ಘೋಷಣೆಯೊಂದಿಗೆ ದೆಹಲಿಯಲ್ಲಿ 136 ಕಾಂಗ್ರೆಸ್ ಶಾಸಕರು ಹೋರಾಟ ಮಾಡಿದ್ದರು. ಅದೇ ಮಾದರಿಯಲ್ಲಿ ಚೆನ್ನೈನಲ್ಲಿ ಹೋರಾಟ ಮಾಡುವಂತೆ ಸಲಹೆ ಕೊಟ್ಟರು. ರಾಜ್ಯದ ಹಿತ ಮುಖ್ಯವೇ ಅಥವಾ ಇಂಡಿ ಮೈತ್ರಿ ಮುಖ್ಯವೇ ಎಂಬ ಪರ್ವಕಾಲದಲ್ಲಿ ಕಾಂಗ್ರೆಸ್ಸಿಗರು ಇದ್ದಾರೆ ಎಂದು ತಿಳಿಸಿದರು. ರಾಜ್ಯದ ಜನತೆ ನಿಮ್ಮನ್ನು ನಂಬಬೇಕಿದ್ದರೆ, ನುಡಿದಂತೆ ನಡೆಯುವವರು ಎಂದು ತೋರಿಸುವುದಾದರೆ ಮೈತ್ರಿ ಮುಖ್ಯವೇ ರಾಜ್ಯದ ಹಿತ ಮುಖ್ಯವೇ ಎಂದು ತೀರ್ಮಾನ ಮಾಡಿ ಎಂದು ಆಗ್ರಹಿಸಿದರು.
ಹಿಂದೆ ಮಹದಾಯಿ ಸಂಬಂಧ ಗೋವಾದಲ್ಲಿ ಸೋನಿಯಾ ಗಾಂಧಿಯವರು ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಕೊಡುವುದಿಲ್ಲ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಡಿಎಂಕೆ ಮುಖಾಂತರ ಈ ಮಾತನ್ನಾಡಿಸಿದ್ದಾರೆ ಎಂದು ಆಕ್ಷೇಪ ಸೂಚಿಸಿದರು. ವಿಪಕ್ಷದ ನಾಯಕರು ರಾಜ್ಯದ ಹಿತದೃಷ್ಟಿಯಿಂದ ಸಲಹೆ ನೀಡಿದರೆ, ನಾನು ಅದನ್ನು ತೆಗೆದುಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ. ನಾನು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರಿಗೆ ಒಳ್ಳೆಯ ಸಲಹೆ ನೀಡುತ್ತೇನೆ ಎಂದು ತಿಳಿಸಿದರು.
ಇವರಲ್ಲಿ ಯಾರು ಫಸ್ಟ್ ಯಾರು ಸೆಕೆಂಡ್ ಎಂಬ ಗೊಂದಲದಲ್ಲಿ ನಾನಿದ್ದೇನೆ. ಯಾವಾಗ ಯಾರು ಸಿಎಂ ಎಂದೇ ಗೊತ್ತಾಗುವುದಿಲ್ಲ. ಸಿಎಂ, ಸೂಪರ್ ಸಿಎಂ, ಭಾವಿ ಸಿಎಂ, ಶ್ಯಾಡೋ ಸಿಎಂ ಇರುವುದಾಗಿ ಪ್ರಧಾನಿಯವರೇ ಹೇಳಿದ್ದಾರೆ ಎಂದು ಗಮನ ಸೆಳೆದರು. ಕರ್ನಾಟಕದಲ್ಲಿ ವೀಕ್ ಸಿಎಂ ಇದ್ದಾರೆ; ವೀಕ್ ಗವರ್ನಮೆಂಟ್ ಇದೆ ಎಂದ ಅವರು, ಈ ದೌರ್ಬಲ್ಯವನ್ನು ಉಪಯೋಗಿಸಿ ಇಂಡಿ ಒಕ್ಕೂಟದ ಮುಖ್ಯ ಪಾಲುದಾರ ಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದಿದೆ ಎಂದು ಆಕ್ಷೇಪಿಸಿದರು.