ಕಾಂಗ್ರೆಸ್ನ್ನು ಆರ್ಥಿಕವಾಗಿ ಕಂಗೆಡಸಲು ಪ್ರಧಾನಿ ಮೋದಿಯಿಂದ ವ್ಯವಸ್ಥಿತ ಯತ್ನ: ಸೋನಿಯಾ ಗಾಂಧಿ
1106 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಚುನಾವಣೆ ಸಂದರ್ಭದಲ್ಲಿ ಬಳಸಲು ಕಾಂಗ್ರೆಸ್ ಬಳಿ ಹಣವಿಲ್ಲ. ಪಕ್ಷವನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿ ಮೋದಿ ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ. ಪಕ್ಷದ ಬ್ಯಾಂಕ್ ಖಾತೆಗಳನ್ನು ತಡೆ ಹಿಡಿದಿದ್ದಾರೆ ಎಂದು ಪಕ್ಷದ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಅಪರೂಪದ ಜಂಟಿ ಸುದ್ದಿಗೋಷ್ಠಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಪಕ್ಷವು ಆರ್ಥಿಕವಾಗಿ ಸೊರಗುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ''ನಾವು ಇಂದು ಪ್ರಸ್ತಾಪಿಸುತ್ತಿರುವ ವಿಷಯ ಬಹಳ ಗಂಭೀರವಾಗಿದೆ. ಈ ಸಮಸ್ಯೆ ಕಾಂಗ್ರೆಸ್ ಅನ್ನು ಮಾತ್ರವಲ್ಲದೆ, ನಮ್ಮ ಪ್ರಜಾಪ್ರಭುತ್ವಕ್ಕೇ ಅಪಾಯಕಾರಿಯಾಗಿದೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ. ಜನರಿಂದ ಸಂಗ್ರಹಿಸಿದ ದೇಣಿಗೆಗಳನ್ನು ತಡೆ ಹಿಡಿಯಲಾಗುತ್ತಿದೆ ಮತ್ತು ನಮ್ಮ ಖಾತೆಗಳಿಂದ ಬಲವಂತವಾಗಿ ಹಣ ಕಿತ್ತುಕೊಳ್ಳಲಾಗುತ್ತಿದೆ" ಎಂದು ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.
"ಇಂತಹ ಅತ್ಯಂತ ಸವಾಲಿನ ಸಂದರ್ಭದಲ್ಲಿಯೂ, ನಮ್ಮ ಚುನಾವಣಾ ಪ್ರಚಾರದ ಪರಿಣಾಮಕಾರಿತ್ವವನ್ನು ಕಾಪಾಡಲು ನಮ್ಮ ಶಕ್ತಿಮೀರಿ ಪ್ರಯತ್ನ ನಡೆಸುತ್ತಿದ್ದೇವೆ. ಒಂದು ಕಡೆ ಎಲೆಕ್ಟೊರಲ್ ಬಾಂಡ್ ಸಮಸ್ಯೆ ಇದೆ. ಅದನ್ನು ಸುಪ್ರೀಂ ಕೋರ್ಟ್ ಅಸಾಂವಿಧಾನಿಕ ಎಂದು ತೀರ್ಪು ನೀಡಿದೆ. ಎಲೆಕ್ಟೊಲರ್ ಬಾಂಡ್ಗಳು ಎಲ್ಲರಿಗೂ ತಿಳಿದಿರುವಂತೆ ಬಿಜೆಪಿಗೆ ಭಾರಿ ಪ್ರಮಾಣದಲ್ಲಿ ಲಾಭ ನೀಡಿದೆ" ಎಂದು ಆರೋಪಿಸಿದರು.
ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ತಡೆ ಹಿಡಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ''ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ದುರ್ಬಲಗೊಳಿಸುವ ಸಂಚು ಎಂದು ಆರೋಪಿಸಿದರು. ನಮ್ಮ ನಾಯಕರು ದೇಶದ ಒಂದು ಭಾಗದಿಂದ ಇನ್ನೊಂದು ಕಡೆಗೆ ವಿಮಾನದಲ್ಲಿ ಪ್ರಯಾಣಿಸುವಂತಿಲ್ಲ. ವಿಮಾನ ಹಾರಾಟ ಇರಲಿ, ರೈಲಿನಲ್ಲಿ ಹೋಗಲೂ ಹಣವಿಲ್ಲ" ಎಂದು ಹೇಳಿದರು.
ಪಕ್ಷವು ಆರ್ಥಿಕವಾಗಿ ಸೊರಗುವಂತೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ''ನಾವು ಇಂದು ಪ್ರಸ್ತಾಪಿಸುತ್ತಿರುವ ವಿಷಯ ಬಹಳ ಗಂಭೀರವಾಗಿದೆ. ಈ ಸಮಸ್ಯೆ ಕಾಂಗ್ರೆಸ್ ಅನ್ನು ಮಾತ್ರವಲ್ಲದೆ, ನಮ್ಮ ಪ್ರಜಾಪ್ರಭುತ್ವಕ್ಕೇ ಅಪಾಯಕಾರಿಯಾಗಿದೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ. ಜನರಿಂದ ಸಂಗ್ರಹಿಸಿದ ದೇಣಿಗೆಗಳನ್ನು ತಡೆ ಹಿಡಿಯಲಾಗುತ್ತಿದೆ ಮತ್ತು ನಮ್ಮ ಖಾತೆಗಳಿಂದ ಬಲವಂತವಾಗಿ ಹಣ ಕಿತ್ತುಕೊಳ್ಳಲಾಗುತ್ತಿದೆ" ಎಂದು ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.
"ಇಂತಹ ಅತ್ಯಂತ ಸವಾಲಿನ ಸಂದರ್ಭದಲ್ಲಿಯೂ, ನಮ್ಮ ಚುನಾವಣಾ ಪ್ರಚಾರದ ಪರಿಣಾಮಕಾರಿತ್ವವನ್ನು ಕಾಪಾಡಲು ನಮ್ಮ ಶಕ್ತಿಮೀರಿ ಪ್ರಯತ್ನ ನಡೆಸುತ್ತಿದ್ದೇವೆ. ಒಂದು ಕಡೆ ಎಲೆಕ್ಟೊರಲ್ ಬಾಂಡ್ ಸಮಸ್ಯೆ ಇದೆ. ಅದನ್ನು ಸುಪ್ರೀಂ ಕೋರ್ಟ್ ಅಸಾಂವಿಧಾನಿಕ ಎಂದು ತೀರ್ಪು ನೀಡಿದೆ. ಎಲೆಕ್ಟೊಲರ್ ಬಾಂಡ್ಗಳು ಎಲ್ಲರಿಗೂ ತಿಳಿದಿರುವಂತೆ ಬಿಜೆಪಿಗೆ ಭಾರಿ ಪ್ರಮಾಣದಲ್ಲಿ ಲಾಭ ನೀಡಿದೆ" ಎಂದು ಆರೋಪಿಸಿದರು.
ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ತಡೆ ಹಿಡಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ''ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ದುರ್ಬಲಗೊಳಿಸುವ ಸಂಚು ಎಂದು ಆರೋಪಿಸಿದರು. ನಮ್ಮ ನಾಯಕರು ದೇಶದ ಒಂದು ಭಾಗದಿಂದ ಇನ್ನೊಂದು ಕಡೆಗೆ ವಿಮಾನದಲ್ಲಿ ಪ್ರಯಾಣಿಸುವಂತಿಲ್ಲ. ವಿಮಾನ ಹಾರಾಟ ಇರಲಿ, ರೈಲಿನಲ್ಲಿ ಹೋಗಲೂ ಹಣವಿಲ್ಲ" ಎಂದು ಹೇಳಿದರು.