ದೇಶಕ್ಕೆ ಕರ್ನಾಟಕದ ಯೋಜನೆ ದಿಕ್ಸೂಚಿ: ರಾಹುಲ್ ಗಾಂಧಿ ಬಣ್ಣನೆ
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಮೈಸೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆ ಅನುಷ್ಠಾನದ ಭರವಸೆ ನೀಡಿತ್ತು. ಕಾಂಗ್ರೆಸ್ ಪಕ್ಷ ಎಂದು ಕೂಡ ನುಡಿದಂತೆ ನಡೆದಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಈಗಲೂ ಗ್ಯಾರಂಟಿ ಯೋಜನೆ ಅನುಷ್ಠಾನದ ಮೂಲಕ ನುಡಿದಂತೆ ನಡೆದಿದ್ದೇವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆ ಪ್ರಮಾಣ ಹೆಚ್ಚಳ ಮಾಡಿದ್ದೇವೆ. 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದ್ದೇವೆ. ಮನೆಯ ಯಜಮಾನಿಗೆ 2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಐದು ಗ್ಯಾರಂಟಿ ಯೋಜನೆ ಪೈಕಿ 4 ಯೋಜನೆ ಅನುಷ್ಟಾನಕ್ಕೆ ಬಂದಿವೆ. ನಿರುದ್ಯೋಗಿ ಪದವೀಧರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆ ಮಾತ್ರ ಅನುಷ್ಠಾನಕ್ಕೆ ಬರಬೇಕಿದೆ. ಮುಂದಿನ ದಿನಗಳಲ್ಲಿ ಯುವನಿಧಿ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಹೊರೆ ಸಹಜವಾಗಿಯೇ ಮಹಿಳೆಯರಿಗೆ ತಟ್ಟಿದೆ. ಹಾಗಾಗಿ ಮಹಿಳೆಯರ ಹೊರೆ ಇಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಕರ್ನಾಟಕದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆಯಿದೆ ಎಂದು ಹೇಳಿದರು.
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ದಿಕ್ಸೂಚಿಯಾಗಿವೆ. ಗೃಹಲಕ್ಷ್ಮಿ ಯೋಜನೆ ಇಡೀ ದೇಶದಲ್ಲೇ ಬಹುದೊಡ್ಡ ಯೋಜನೆಯಾಗಿದೆ. ಪ್ರತಿ ಮನೆಯ ಯಜಮಾನಿಯ ಖಾತೆಗೆ ತಲಾ 2 ಸಾವಿರ ಹಣ ಹಾಕುವುದು ಸುಲಭದ ಕೆಲಸವಲ್ಲ. ಆ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿ ತೋರಿಸಿದೆ.ಈ ಮೂಲಕ ಇಡೀ ದೇಶ ಮಾತ್ರವಲ್ಲದೇ ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಈಗಲೂ ಗ್ಯಾರಂಟಿ ಯೋಜನೆ ಅನುಷ್ಠಾನದ ಮೂಲಕ ನುಡಿದಂತೆ ನಡೆದಿದ್ದೇವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆ ಪ್ರಮಾಣ ಹೆಚ್ಚಳ ಮಾಡಿದ್ದೇವೆ. 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದ್ದೇವೆ. ಮನೆಯ ಯಜಮಾನಿಗೆ 2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಐದು ಗ್ಯಾರಂಟಿ ಯೋಜನೆ ಪೈಕಿ 4 ಯೋಜನೆ ಅನುಷ್ಟಾನಕ್ಕೆ ಬಂದಿವೆ. ನಿರುದ್ಯೋಗಿ ಪದವೀಧರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆ ಮಾತ್ರ ಅನುಷ್ಠಾನಕ್ಕೆ ಬರಬೇಕಿದೆ. ಮುಂದಿನ ದಿನಗಳಲ್ಲಿ ಯುವನಿಧಿ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಹೊರೆ ಸಹಜವಾಗಿಯೇ ಮಹಿಳೆಯರಿಗೆ ತಟ್ಟಿದೆ. ಹಾಗಾಗಿ ಮಹಿಳೆಯರ ಹೊರೆ ಇಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಕರ್ನಾಟಕದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆಯಿದೆ ಎಂದು ಹೇಳಿದರು.
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ದಿಕ್ಸೂಚಿಯಾಗಿವೆ. ಗೃಹಲಕ್ಷ್ಮಿ ಯೋಜನೆ ಇಡೀ ದೇಶದಲ್ಲೇ ಬಹುದೊಡ್ಡ ಯೋಜನೆಯಾಗಿದೆ. ಪ್ರತಿ ಮನೆಯ ಯಜಮಾನಿಯ ಖಾತೆಗೆ ತಲಾ 2 ಸಾವಿರ ಹಣ ಹಾಕುವುದು ಸುಲಭದ ಕೆಲಸವಲ್ಲ. ಆ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿ ತೋರಿಸಿದೆ.ಈ ಮೂಲಕ ಇಡೀ ದೇಶ ಮಾತ್ರವಲ್ಲದೇ ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.