ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರೇ?: ಕಾಂಗ್ರೆಸ್ ವ್ಯಂಗ್ಯ
1162 views
news ವಿಡಿಯೋಗಳಿಗೆ ಚಂದಾದಾರರಾಗಿಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಇದೀಗ ಕಾಂಗ್ರೆಸ್ ನಾಯಕರು ಬಿಜೆಪಿಗೆ ಕಾಲೆಳೆದಿದೆ. ಬಿವೈ ವಿಜಯೇಂದ್ರ ಅವರು ಕೇವಲ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಣಕ್ಕೆ ಮಾತ್ರ ಅಧ್ಯಕ್ಷರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಿಜೆಪಿಯ ಜಾಲತಾಣಕ್ಕೂ ಅವರನ್ನು ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರೂ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯ ಪ್ರೊಪೈಲ್ನಲ್ಲಿ ಅವರ ಫೋಟೋ ಇಲ್ಲದನ್ನು ಗಮನಿಸಿದ ಕಾಂಗ್ರೆಸ್ ಈ ಬಗ್ಗೆ ಕಾಲೆಳೆದಿದೆ.
ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ಕರ್ನಾಟಕ ಬಿಜೆಪಿಯ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮೂದಲಿಸಿದೆ. ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ. ಪದಗ್ರಹಣವೂ ಆಗಿದೆ. ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ. ಬಿಜೆಪಿ ಪಕ್ಷ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ, ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರೇ ಎಂದು ಪ್ರಶ್ನಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ವಿಜಯೇಂದ್ರ ಅವರ ಫೋಟೋ ಪಕ್ಷದ ಅಧಿಕೃತ ಎಕ್ಸ್ ಖಾತೆಯಲ್ಲಿ ಕಾಣಿಸಿಕೊಂಡಿದೆ.
ಇನ್ನು ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮದ ಕುರಿತಾಗಿಯೂ ಕುಟುಕಿದ ಕಾಂಗ್ರೆಸ್, ಈ ಸಮಾರಂಭವು ಸಂಭ್ರಮದ ಕಾರ್ಯಕ್ರಮವಾಗುವ ಬದಲು ಶೋಕದ ಕಾರ್ಯಕ್ರಮದಂತಾಗಿತ್ತು ಎಂದು ಟೀಕಿಸಿದೆ. ಜಗನ್ನಾಥ ಭವನದಲ್ಲಿ ಅಸೂಯೆ, ಅತೃಪ್ತಿ, ಅಸಹನೆ, ದ್ವೇಷ, ಸಿಟ್ಟು ಎಲ್ಲವೂ ಹೋಮದ ಹೊಗೆಯಂತೆ ಆವರಿಸಿತ್ತು ಇಂದು ಪದಗ್ರಹಣ ಕಾರ್ಯಕ್ರಮದಿಂದ ದೂರ ಉಳಿದಿದ್ದ ಹಿರಿಯ ನಾಯಕರೆಲ್ಲ ಸೇರಿ ವಿಜಯೇಂದ್ರರ ಪದಚ್ಯುತಿಗೆ ಸ್ಕೆಚ್ ಹಾಕುತ್ತಿದ್ದಾರೋ ಅಥವಾ ಪಕ್ಷ ತ್ಯಜಿಸುವ ವೈರಾಗ್ಯಕ್ಕೆ ತಲುಪಿದ್ದಾರೋ ಎಂದು ಪ್ರಶ್ನೆಗಳ ಸುರಿಮಳೆಗೈದಿದೆ.
ಇನ್ನು ಬಿಜೆಪಿಯಲ್ಲಿ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗದ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಅವರು ಹೇಳಿಕೆಯ ವರದಿಯನ್ನು ಲಗತ್ತಿಸಿರುವ ಕಾಂಗ್ರೆಸ್, ಬಳಸಿ ಬಿಸಾಡುವುದು ಬಿಜೆಪಿ ಪದ್ಧತಿ ಎಂದು ಆರೋಪಿಸಿದೆ. ಬಿಜೆಪಿಯವರು ಇದುವರೆಗೆ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಅವಕಾಶ ಕೊಟ್ಟಿಲ್ಲ. ದಲಿತರಿಗೆ ಜಗನ್ನಾಥ ಭವನದ ಗರ್ಭಗುಡಿಗೆ ಪ್ರವೇಶ ನಿಷೇಧಿಸಲಾಗಿದೆಯೇ ಕರ್ನಾಟಕ ಬಿಜೆಪಿಯಲ್ಲಿ ದಲಿತ, ಹಿಂದುಳಿದ ವರ್ಗದ ರಾಜಕಾರಿಣಿಗಳನ್ನು ಬಳಸಿ ಬೀಸಾಡುವುದು ಪಾರಂಪರಿಕವಾಗಿ ನಡೆದುಬಂದ ಪದ್ಧತಿ ಎಂಬುದನ್ನು ಸ್ವತಃ ಬಿಜೆಪಿಯ ಸಂಸದರೇ ಹೇಳಿದ್ದಾರೆ. ಬಿಜೆಪಿ ದಲಿತ ವಿರೋಧಿ ಎಂಬುದಕ್ಕೆ ಸ್ಪಷ್ಟ ನಿದರ್ಶನವಿದು ಎಂದು ಮೂದಲಿಸಿದೆ.
ಬಿವೈ ವಿಜಯೇಂದ್ರ ಅವರು ಬುಧವಾರ ಬೆಳಗ್ಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಂದ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪನವರು, ಗೋವಿಂದ ಕಾರಜೋಳ, ಆರ್.ಅಶೋಕ್, ಡಾ ಅಶ್ವಥ್ ನಾರಾಯಣ್, ಮಾಜಿ ಸಚಿವರು, ಸಂಸದರು, ಶಾಸಕರು, ಪಕ್ಷದ ಹಿರಿಯರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಹಾರೈಸಿದರು.
ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ಕರ್ನಾಟಕ ಬಿಜೆಪಿಯ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮೂದಲಿಸಿದೆ. ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ. ಪದಗ್ರಹಣವೂ ಆಗಿದೆ. ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ. ಬಿಜೆಪಿ ಪಕ್ಷ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ, ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರೇ ಎಂದು ಪ್ರಶ್ನಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ವಿಜಯೇಂದ್ರ ಅವರ ಫೋಟೋ ಪಕ್ಷದ ಅಧಿಕೃತ ಎಕ್ಸ್ ಖಾತೆಯಲ್ಲಿ ಕಾಣಿಸಿಕೊಂಡಿದೆ.
ಇನ್ನು ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮದ ಕುರಿತಾಗಿಯೂ ಕುಟುಕಿದ ಕಾಂಗ್ರೆಸ್, ಈ ಸಮಾರಂಭವು ಸಂಭ್ರಮದ ಕಾರ್ಯಕ್ರಮವಾಗುವ ಬದಲು ಶೋಕದ ಕಾರ್ಯಕ್ರಮದಂತಾಗಿತ್ತು ಎಂದು ಟೀಕಿಸಿದೆ. ಜಗನ್ನಾಥ ಭವನದಲ್ಲಿ ಅಸೂಯೆ, ಅತೃಪ್ತಿ, ಅಸಹನೆ, ದ್ವೇಷ, ಸಿಟ್ಟು ಎಲ್ಲವೂ ಹೋಮದ ಹೊಗೆಯಂತೆ ಆವರಿಸಿತ್ತು ಇಂದು ಪದಗ್ರಹಣ ಕಾರ್ಯಕ್ರಮದಿಂದ ದೂರ ಉಳಿದಿದ್ದ ಹಿರಿಯ ನಾಯಕರೆಲ್ಲ ಸೇರಿ ವಿಜಯೇಂದ್ರರ ಪದಚ್ಯುತಿಗೆ ಸ್ಕೆಚ್ ಹಾಕುತ್ತಿದ್ದಾರೋ ಅಥವಾ ಪಕ್ಷ ತ್ಯಜಿಸುವ ವೈರಾಗ್ಯಕ್ಕೆ ತಲುಪಿದ್ದಾರೋ ಎಂದು ಪ್ರಶ್ನೆಗಳ ಸುರಿಮಳೆಗೈದಿದೆ.
ಇನ್ನು ಬಿಜೆಪಿಯಲ್ಲಿ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗದ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಅವರು ಹೇಳಿಕೆಯ ವರದಿಯನ್ನು ಲಗತ್ತಿಸಿರುವ ಕಾಂಗ್ರೆಸ್, ಬಳಸಿ ಬಿಸಾಡುವುದು ಬಿಜೆಪಿ ಪದ್ಧತಿ ಎಂದು ಆರೋಪಿಸಿದೆ. ಬಿಜೆಪಿಯವರು ಇದುವರೆಗೆ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಅವಕಾಶ ಕೊಟ್ಟಿಲ್ಲ. ದಲಿತರಿಗೆ ಜಗನ್ನಾಥ ಭವನದ ಗರ್ಭಗುಡಿಗೆ ಪ್ರವೇಶ ನಿಷೇಧಿಸಲಾಗಿದೆಯೇ ಕರ್ನಾಟಕ ಬಿಜೆಪಿಯಲ್ಲಿ ದಲಿತ, ಹಿಂದುಳಿದ ವರ್ಗದ ರಾಜಕಾರಿಣಿಗಳನ್ನು ಬಳಸಿ ಬೀಸಾಡುವುದು ಪಾರಂಪರಿಕವಾಗಿ ನಡೆದುಬಂದ ಪದ್ಧತಿ ಎಂಬುದನ್ನು ಸ್ವತಃ ಬಿಜೆಪಿಯ ಸಂಸದರೇ ಹೇಳಿದ್ದಾರೆ. ಬಿಜೆಪಿ ದಲಿತ ವಿರೋಧಿ ಎಂಬುದಕ್ಕೆ ಸ್ಪಷ್ಟ ನಿದರ್ಶನವಿದು ಎಂದು ಮೂದಲಿಸಿದೆ.
ಬಿವೈ ವಿಜಯೇಂದ್ರ ಅವರು ಬುಧವಾರ ಬೆಳಗ್ಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಂದ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪನವರು, ಗೋವಿಂದ ಕಾರಜೋಳ, ಆರ್.ಅಶೋಕ್, ಡಾ ಅಶ್ವಥ್ ನಾರಾಯಣ್, ಮಾಜಿ ಸಚಿವರು, ಸಂಸದರು, ಶಾಸಕರು, ಪಕ್ಷದ ಹಿರಿಯರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಹಾರೈಸಿದರು.