ಕಾಂಗ್ರೆಸ್ಗೆ ಮಿಲಿಂದ್ ದಿಯೋರಾ ಗುಡ್ಬೈ, ಏಕನಾಥ್ ಶಿಂಧೆ ಸಾರಥ್ಯದ ಶಿವಸೇನೆಗೆ ಸೇರ್ಪಡೆ
1142 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ, ವಂಶಪಾರಂಪರ್ಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರ್ತಿಸಿಕೊಂಡವರು. ಮಿಲಿಂದ್ ಅವರ ತಂದೆ ಮುರಳಿ ದಿಯೋರಾ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು. ಇದೀಗ ಮಿಲಿಂದ್ ದಿಯೋರಾ ತಮ್ಮ ಕುಟುಂಬದ ಸಂಪರ್ಕವನ್ನು ಕಾಂಗ್ರೆಸ್ ಪಕ್ಷದಿಂದ ಕಡಿತ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಾರಥ್ಯದ ಶಿವಸೇನೆಗೆ ಮಿಲಿಂದ್ ದಿಯೋರಾ ಸೇರ್ಪಡೆ ಆಗಿದ್ದಾರೆ.
ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನೆಯ ದಿನವೇ ಕಾಂಗ್ರೆಸ್ ಪಕ್ಷಕ್ಕೆ ಅತಿ ದೊಡ್ಡ ಶಾಕ್ ಸಿಕ್ಕಿದೆ. ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ಟೀಂನಲ್ಲಿ ಗುರ್ತಿಸಿಕೊಂಡಿದ್ದ ನೇತಾರ ಮಿಲಿಂದ್ ದಿಯೋರಾ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಕುಟುಂಬದ 55 ವರ್ಷಗಳ ಕಾಂಗ್ರೆಸ್ ಒಡನಾಟವನ್ನೂ ಮಿಲಿಂದ್ ದಿಯೋರಾ ಕಡಿತ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಿಲಿಂದ್ ಎಕ್ಸ್ ಖಾತೆಯಲ್ಲಿ ವಿಷಯ ಹಂಚಿಕೊಂಡಿದ್ದು, ''ನನ್ನ ರಾಜಕೀಯ ಬದುಕಿನ ಪ್ರಮುಖ ಅಧ್ಯಾಯವೊಂದು ಕೊನೆಯಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದ ಜೊತೆಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧವು ಕೊನೆಯಾಗಿದೆ. ಎಲ್ಲ ನಾಯಕರು, ಕಾರ್ಯಕರ್ತರು ಹಾಗೂ ಸಹೋದ್ಯೋಗಿಗಳ ಈವರೆಗಿನ ಬೆಂಬಲಕ್ಕೆ ಧನ್ಯವಾದಗಳು..'' ಎಂದು ಪ್ರಕಟಿಸಿದ್ದಾರೆ.
47 ವರ್ಷಗಳ ಮಿಲಿಂದ್ ದಿಯೋರಾ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದವರು. 2011ರಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದರು. ಆದರೆ, 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಅರವಿಂದ್ ಸಾವಂತ್ ಎದುರು ಸೋಲು ಕಂಡಿದ್ದಾರೆ. ಕಾಂಗ್ರೆಸ್ ಸೋಲಿನ ಬಳಿಕ ಮುಂಬೈ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನವನ್ನು ತೊರೆದಿದ್ದರು. ಈಗ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಬಿಜೆಪಿಯ ಮೈತ್ರಿ ಪಕ್ಷವಾದ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರಿದ್ದಾರೆ. ಈ ಮೂಲಕ ಮುಂಬೈ ದಕ್ಷಿಣ ಕ್ಷೇತ್ರದ ಕಡೆಗೆ ಮತ್ತೆ ಮುಖಮಾಡಿದ್ದಾರೆ.
ಇತ್ತೀಚೆಗಷ್ಟೇ ಮಿಲಿಂದ್ ದಿಯೋರಾ ಅವರು ಉದ್ಧವ್ ಠಾಕ್ರೆ ಸಾರಥ್ಯದ ಶಿವಸೇನೆ ಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಇಂಡಿಯಾ ಮೈತ್ರಿ ಕೂಟದಲ್ಲಿ ಗುರುತಿಸಿಕೊಂಡಿದೆ. ಆದರೆ, ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಶಿವಸೇನೆ ನಡುವೆ ಗುದ್ದಾಟ ಏರ್ಪಡುವ ಸಾಧ್ಯತೆ ಇತ್ತು. ಮಿಲಿಂದ್ ದಿಯೋರಾ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು.
2019ರಿಂದ ಈವರೆಗೆ 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಮಿಲಿಂದ್ ದಿಯೋರಾ ಈ ಪಟ್ಟಿಗೆ ಹೊಸ ಸೇರ್ಪಡೆ. ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್, ಜ್ಯೋತಿರಾಧಿತ್ಯ ಸಿಂಧಿಯಾ.. ಹೀಗೆ ದಿಗ್ಗಜ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಕೆಲವು ನಾಯಕರು ಹಲವು ದಶಕಗಳ ಕಾಲ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡವರು. ಇನ್ನೂ ಕೆಲವರು ವಂಶಪಾರಂಪರ್ಯವಾಗಿ ಕಾಂಗ್ರೆಸ್ ಜೊತೆ ಬೆಳೆದು ಬಂದವರು.
ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನೆಯ ದಿನವೇ ಕಾಂಗ್ರೆಸ್ ಪಕ್ಷಕ್ಕೆ ಅತಿ ದೊಡ್ಡ ಶಾಕ್ ಸಿಕ್ಕಿದೆ. ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ಟೀಂನಲ್ಲಿ ಗುರ್ತಿಸಿಕೊಂಡಿದ್ದ ನೇತಾರ ಮಿಲಿಂದ್ ದಿಯೋರಾ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಕುಟುಂಬದ 55 ವರ್ಷಗಳ ಕಾಂಗ್ರೆಸ್ ಒಡನಾಟವನ್ನೂ ಮಿಲಿಂದ್ ದಿಯೋರಾ ಕಡಿತ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಿಲಿಂದ್ ಎಕ್ಸ್ ಖಾತೆಯಲ್ಲಿ ವಿಷಯ ಹಂಚಿಕೊಂಡಿದ್ದು, ''ನನ್ನ ರಾಜಕೀಯ ಬದುಕಿನ ಪ್ರಮುಖ ಅಧ್ಯಾಯವೊಂದು ಕೊನೆಯಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದ ಜೊತೆಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧವು ಕೊನೆಯಾಗಿದೆ. ಎಲ್ಲ ನಾಯಕರು, ಕಾರ್ಯಕರ್ತರು ಹಾಗೂ ಸಹೋದ್ಯೋಗಿಗಳ ಈವರೆಗಿನ ಬೆಂಬಲಕ್ಕೆ ಧನ್ಯವಾದಗಳು..'' ಎಂದು ಪ್ರಕಟಿಸಿದ್ದಾರೆ.
47 ವರ್ಷಗಳ ಮಿಲಿಂದ್ ದಿಯೋರಾ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದವರು. 2011ರಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದರು. ಆದರೆ, 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಅರವಿಂದ್ ಸಾವಂತ್ ಎದುರು ಸೋಲು ಕಂಡಿದ್ದಾರೆ. ಕಾಂಗ್ರೆಸ್ ಸೋಲಿನ ಬಳಿಕ ಮುಂಬೈ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನವನ್ನು ತೊರೆದಿದ್ದರು. ಈಗ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಬಿಜೆಪಿಯ ಮೈತ್ರಿ ಪಕ್ಷವಾದ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರಿದ್ದಾರೆ. ಈ ಮೂಲಕ ಮುಂಬೈ ದಕ್ಷಿಣ ಕ್ಷೇತ್ರದ ಕಡೆಗೆ ಮತ್ತೆ ಮುಖಮಾಡಿದ್ದಾರೆ.
ಇತ್ತೀಚೆಗಷ್ಟೇ ಮಿಲಿಂದ್ ದಿಯೋರಾ ಅವರು ಉದ್ಧವ್ ಠಾಕ್ರೆ ಸಾರಥ್ಯದ ಶಿವಸೇನೆ ಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಇಂಡಿಯಾ ಮೈತ್ರಿ ಕೂಟದಲ್ಲಿ ಗುರುತಿಸಿಕೊಂಡಿದೆ. ಆದರೆ, ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಶಿವಸೇನೆ ನಡುವೆ ಗುದ್ದಾಟ ಏರ್ಪಡುವ ಸಾಧ್ಯತೆ ಇತ್ತು. ಮಿಲಿಂದ್ ದಿಯೋರಾ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು.
2019ರಿಂದ ಈವರೆಗೆ 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಮಿಲಿಂದ್ ದಿಯೋರಾ ಈ ಪಟ್ಟಿಗೆ ಹೊಸ ಸೇರ್ಪಡೆ. ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್, ಜ್ಯೋತಿರಾಧಿತ್ಯ ಸಿಂಧಿಯಾ.. ಹೀಗೆ ದಿಗ್ಗಜ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಕೆಲವು ನಾಯಕರು ಹಲವು ದಶಕಗಳ ಕಾಲ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡವರು. ಇನ್ನೂ ಕೆಲವರು ವಂಶಪಾರಂಪರ್ಯವಾಗಿ ಕಾಂಗ್ರೆಸ್ ಜೊತೆ ಬೆಳೆದು ಬಂದವರು.