ಪಂಚ ರಾಜ್ಯ ಚುನಾವಣಾ ಕದನ ; 4 ರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್ಡೌನ್
1342 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ2024ರ ಲೋಕಸಭೆ ಮಹಾ ಮತಕದನಕ್ಕೆ ಮುನ್ನ 'ಸೆಮಿ ಫೈನಲ್ಸ್' ಎಂದೇ ಬಣ್ಣಿಸಲಾಗಿರುವ ಪಂಚರಾಜ್ಯ ಚುನಾವಣೆಯ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ವಿಧಾನಸಭೆ ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢದ ಫಲಿತಾಂಶ ಇಂದು ಹೊರಬೀಳಲಿದೆ. ಮಿಜೋರಾಂನಲ್ಲಿ ಮಾತ್ರ ಮತ ಎಣಿಕೆ ಸೋಮವಾರ ನಡೆಯಲಿದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ ಮತ್ತು ಛತ್ತೀಸ್ ಗಢ ಹಾಗೂ ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶ ಈ ಮೂರು ರಾಜ್ಯಗಳಲ್ಲಿ ಕೈ-ಕಮಲದ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ. ಕೆ.ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ತೆಲಂಗಾಣದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಭದ್ರತೆ ಗಿಟ್ಟಿಸಿಕೊಳ್ಳುವ ವಿಶ್ವಾಸದಲ್ಲಿದೆ. ಮತಗಟ್ಟೆ ಸಮೀಕ್ಷೆಗಳು ಫಲಿತಾಂಶದ ಬಗ್ಗೆ ಮಿಶ್ರ ಭವಿಷ್ಯ ಕಾಂಗ್ರೆಸ್ ನುಡಿದಿವೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ತೆಲಂಗಾಣ, ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ ಎಂದು ಕೆಲವು ಸಮೀಕ್ಷೆಗಳು ಹೇಳಿವೆ.
ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡಿರುವ ಕಾಂಗ್ರೆಸ್ ಮಧ್ಯ ಪ್ರದೇಶ ಮತ್ತು ತೆಲಂಗಾಣದಲ್ಲೂ ಇದೇ ಮ್ಯಾಜಿಕ್ ಮಾಡುವ ತವಕದಲ್ಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆದಲ್ಲಿ, ಪಕ್ಷದ ವರ್ಚಸ್ಸು ಹೆಚ್ಚಲಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟ 'ಐಎನ್ಡಿಐಎ'ನಲ್ಲಿ 'ಕೈ'ಬಲ ಹೆಚ್ಚಲಿದೆ. ಇತ್ತ ಬಿಜೆಪಿಯು ಮಧ್ಯಪ್ರದೇಶದಲ್ಲಿ ಗುಜರಾತ್ನ ಮಾದರಿಯಲ್ಲೇ ಗೆಲುವಿನ ಓಟವನ್ನು ಪುನರಾವರ್ತಿಸಲು ಬಯಸಿದೆ. ಲೋಕಸಭೆ ಚುನಾವಣೆಗೆ ಹಿಂದಿ ಪ್ರಾಬಲ್ಯದ ರಾಜ್ಯಗಳಲ್ಲಿ ವರ್ಚಸ್ಸು ಹೆಚ್ಚಳಕ್ಕಾಗಿ ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲೂ ಅಧಿಕಾರ ಹಿಡಿಯಲು ಕಮಲ ಪಾಳಯ ಪ್ರಯತ್ನಿಸುತ್ತಿದೆ.
ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ, ಎಐಸಿಸಿ ವರಿಷ್ಠರ ಅಂಗಳದಲ್ಲಿ 'ಟ್ರಬಲ್ ಶೂಟರ್' ಎಂದೇ ಗುರುತಿಸಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೈದರಾಬಾದ್ನಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾಂಗ್ರೆಸ್ ನಿಚ್ಚಳ ಬಹುಮತ ಗಳಿಸಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸರಳ ಬಹುಮತದ ಮ್ಯಾಜಿಕ್ ಸಂಖ್ಯೆ ಅಥವಾ ಅದರ ಆಸುಪಾಸಿನ ಸಂಖ್ಯೆಯ ಸ್ಥಾನ ಪಡೆದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಜತೆಗೆ ಸರಕಾರ ರಚನೆಗೆ ಸಾಧ್ಯವಿರುವ ಪ್ರಯತ್ನಗಳನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳುವ ಸಲುವಾಗಿ ರಾಜ್ಯದ ಪ್ರಭಾವಿ ನಾಯಕರು ತೆಲಂಗಾಣದತ್ತ ಹೊರಟಿರುವುದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ ಮತ್ತು ಛತ್ತೀಸ್ ಗಢ ಹಾಗೂ ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶ ಈ ಮೂರು ರಾಜ್ಯಗಳಲ್ಲಿ ಕೈ-ಕಮಲದ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ. ಕೆ.ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ತೆಲಂಗಾಣದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಭದ್ರತೆ ಗಿಟ್ಟಿಸಿಕೊಳ್ಳುವ ವಿಶ್ವಾಸದಲ್ಲಿದೆ. ಮತಗಟ್ಟೆ ಸಮೀಕ್ಷೆಗಳು ಫಲಿತಾಂಶದ ಬಗ್ಗೆ ಮಿಶ್ರ ಭವಿಷ್ಯ ಕಾಂಗ್ರೆಸ್ ನುಡಿದಿವೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ತೆಲಂಗಾಣ, ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ ಎಂದು ಕೆಲವು ಸಮೀಕ್ಷೆಗಳು ಹೇಳಿವೆ.
ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡಿರುವ ಕಾಂಗ್ರೆಸ್ ಮಧ್ಯ ಪ್ರದೇಶ ಮತ್ತು ತೆಲಂಗಾಣದಲ್ಲೂ ಇದೇ ಮ್ಯಾಜಿಕ್ ಮಾಡುವ ತವಕದಲ್ಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆದಲ್ಲಿ, ಪಕ್ಷದ ವರ್ಚಸ್ಸು ಹೆಚ್ಚಲಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟ 'ಐಎನ್ಡಿಐಎ'ನಲ್ಲಿ 'ಕೈ'ಬಲ ಹೆಚ್ಚಲಿದೆ. ಇತ್ತ ಬಿಜೆಪಿಯು ಮಧ್ಯಪ್ರದೇಶದಲ್ಲಿ ಗುಜರಾತ್ನ ಮಾದರಿಯಲ್ಲೇ ಗೆಲುವಿನ ಓಟವನ್ನು ಪುನರಾವರ್ತಿಸಲು ಬಯಸಿದೆ. ಲೋಕಸಭೆ ಚುನಾವಣೆಗೆ ಹಿಂದಿ ಪ್ರಾಬಲ್ಯದ ರಾಜ್ಯಗಳಲ್ಲಿ ವರ್ಚಸ್ಸು ಹೆಚ್ಚಳಕ್ಕಾಗಿ ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲೂ ಅಧಿಕಾರ ಹಿಡಿಯಲು ಕಮಲ ಪಾಳಯ ಪ್ರಯತ್ನಿಸುತ್ತಿದೆ.
ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ, ಎಐಸಿಸಿ ವರಿಷ್ಠರ ಅಂಗಳದಲ್ಲಿ 'ಟ್ರಬಲ್ ಶೂಟರ್' ಎಂದೇ ಗುರುತಿಸಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೈದರಾಬಾದ್ನಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾಂಗ್ರೆಸ್ ನಿಚ್ಚಳ ಬಹುಮತ ಗಳಿಸಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸರಳ ಬಹುಮತದ ಮ್ಯಾಜಿಕ್ ಸಂಖ್ಯೆ ಅಥವಾ ಅದರ ಆಸುಪಾಸಿನ ಸಂಖ್ಯೆಯ ಸ್ಥಾನ ಪಡೆದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಜತೆಗೆ ಸರಕಾರ ರಚನೆಗೆ ಸಾಧ್ಯವಿರುವ ಪ್ರಯತ್ನಗಳನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳುವ ಸಲುವಾಗಿ ರಾಜ್ಯದ ಪ್ರಭಾವಿ ನಾಯಕರು ತೆಲಂಗಾಣದತ್ತ ಹೊರಟಿರುವುದು ಕುತೂಹಲ ಮೂಡಿಸಿದೆ.