ದಾವಣಗೆರೆ ಲೋಕಸಭಾ ಕ್ಷೇತ್ರ ; ಜಿಎಂ ಸಿದ್ದೇಶ್ವರ-ರೇಣುಕಾಚಾರ್ಯ ಮಧ್ಯೆ ಟಿಕೆಟ್ಗಾಗಿ ಫೈಟ್
1198 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬೆಣ್ಣೆ ನಗರಿ ದಾವಣಗೆರೆಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಈ ಬಾರಿ ಕಾಂಗ್ರೆಸ್-ಬಿಜೆಪಿ ಫೈಟ್ ಅನ್ನೋದಕ್ಕಿಂತ, ಬೀಗರ ನಡುವೆ ಕದನ ಶುರುವಾಗಿದೆ. ಅಂದ್ರೆ ಶಾಮನೂರು ಶಿವಶಂಕರಪ್ಪ V\S ಜಿಎಂ ಸಿದ್ದೇಶ್ವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸತತ ನಾಲ್ಕು ಬಾರಿ ಗೆದ್ದಿರುವ ಜಿಎಂ ಸಿದ್ದೇಶ್ವರ ಮತ್ತೆ ಸ್ಪರ್ಧಿಸಲು ಅಣಿಯಾಗಿದ್ರೆ, ಅವರಿಗೆ ಸೋಲುಣಿಸಲು ಶಾಮನೂರು ಶಿವಶಂಕರಪ್ಪ ಚಕ್ರವ್ಯೂಹ ಹೆಣೆಯುತ್ತಿದ್ದಾರೆ. ಇದೆಲ್ಲದರ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದೇ ಸಸ್ಪೆನ್ಸ್..
ಸದ್ಯ ಕಾಂಗ್ರೆಸ್ಸಿನ ಭದ್ರಕೋಟೆಯನ್ನೇ ಕೈವಶ ಮಾಡಿಕೊಂಡಿದ್ದ ಬಿಜೆಪಿಯಲ್ಲಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮನೆಯೊಂದು ಮೂರು ಬಾಗಿಲು ಎಂಬ ಸ್ಥಿತಿ ನಿರ್ಮಾಣವಾಗಿದೆ. ಟಿಕೆಟ್ಗಾಗಿ ಬಿಜೆಪಿಯಲ್ಲಿ ನಾ ಮುಂದು ತಾ ಮುಂದು ಅಂತ ಲೈನ್ ಹಚ್ಚಿದ್ದಾರೆ. ಇತ್ತ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಎಂಪಿ ರೇಣುಕಾಚಾರ್ಯ ಲೋಕಸಭೆಗೆ ನನಗೂ ಟಿಕೆಟ್ ಬೇಕು, ನಾನು ಕೂಡ ಬಲವಾದ ಆಕಾಂಕ್ಷಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇತ್ತ ನಾಲ್ಕು ಬಾರಿ ಗೆದ್ದಿರುವ ಜಿಎಂ ಸಿದ್ದೇಶ್ವರ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದಾರೆ..
ಹೌದು.. ಬಿಜೆಪಿಯಲ್ಲಿ ಸತತವಾಗಿ 4 ಸಲ ಗೆಲುವು ಕಂಡ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತೆ ತಮ್ಮ ಬದ್ಧವೈರಿ ಶಾಮನೂರು ಕುಟುಂಬಕ್ಕೆ ಸೆಡ್ಡು ಹೊಡೆಯಲು ಸಜ್ಜಾಗುತ್ತಿದ್ದಾರೆ. ಈ ಬೀಗರ ಕದನದಲ್ಲಿ ಎದುರಾಳಿ ಯಾರೆಂಬುದೇ ಕುತೂಹಲ ಹುಟ್ಟಿಸಿದೆ. ಬಿಜೆಪಿಗೆ ಇಲ್ಲಿ ಜೆಡಿಎಸ್ ಸಹ ಆಸರೆಯಾಗಲಿದೆ. ಸಾಂಪ್ರದಾಯಿಕ ವೈರಿಗಳಾದ ಬಿಜೆಪಿ, ಕಾಂಗ್ರೆಸ್ ವೈರತ್ವದ ಜೊತೆ ಇಲ್ಲಿ ಶಾಮನೂರು-ಸಿದ್ದೇಶ್ವರ ಕುಟುಂಬದ ರಾಜ ವೈರತ್ವವೂ ಜಿದ್ದಾಜಿದ್ದಿ ಚುನಾವಣೆಗೆ ಕಾರಣವಾಗುತ್ತಿದೆ.
ಕಾಂಗ್ರೆಸ್ನಲ್ಲಿಯೂ ಟಿಕೆಟ್ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಶಾಮನೂರು ಶಿವ ಶಂಕರಪ್ಪನವರ ಕಿರಿಯ ಸೊಸೆ, ಸಚಿವ ಎಸ್ ಎಸ್ ಮಲ್ಲಿಕಾರ್ಜುನರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ ಹೆಸರು ಮುಂಚೂಣಿಯಲ್ಲಿದೆ. ಕಳೆದ ಬಾರಿ ಸ್ಪರ್ಧಿಸಿದ್ದ ಎಚ್ ಬಿ ಮಂಜಪ್ಪ ಪರವೂ ಕೆಲವರು ಬ್ಯಾಟ್ ಬೀಸಿದ್ದಾರೆ. ಕಳೆದ ಕೆಲವು ವಾರಗಳಿಂದ ಕ್ಷೇತ್ರಾದ್ಯಂತ ಪಾದಯಾತ್ರೆ ಕೈಗೊಂಡ ಕಕ್ಕರಗೊಳ್ಳ ಜಿ ಬಿ ವಿನಯಕುಮಾರ ಬಗ್ಗೆಯೂ ಕೂಗು ಕೇಳಿ ಬರ್ತಿದೆ.
ಇನ್ನು, ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಬೇಕೆಂದರೆ ಎಚ್.ಬಿ.ಮಂಜಪ್ಪ, ಜಿ.ಬಿ.ವಿನಯ ಕುಮಾರ ಮಧ್ಯೆ ಪೈಪೋಟಿ ಏರ್ಪಡಲಿದೆ. ಮತ್ತೊಂದು ಕಡೆ ದಿವಂಗತ ಚನ್ನಯ್ಯ ಒಡೆಯರ್ ಪುತ್ರ ಶಿವಕುಮಾರ ಒಡೆಯರ್ ಸಹ ಟಿಕೆಟ್ಗೆ ಪ್ರಯತ್ನಿಸಿದ್ದಾರೆ. ಹಾಗಾಗಿಯೇ ಕಾಂಗ್ರೆಸ್ ಏನೇ ಮಾಡಿದರೂ, ಅಳೆದು ತೂಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಗಿದೆ. ಇನ್ನೂ ಶಾಮನೂರು ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡಬೇಕೆಂದರೆ ಸ್ವತಃ ಎಸ್ಎಸ್ ಮಲ್ಲಿಕಾರ್ಜುನ ಕಣಕ್ಕೆ ಇಳಿಯಬಹುದು ಅಥವಾ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಕಣಕ್ಕಿಳಿಸಬಹುದು ಎನ್ನಲಾಗುತ್ತಿದೆ.
ಸದ್ಯ ಕಾಂಗ್ರೆಸ್ಸಿನ ಭದ್ರಕೋಟೆಯನ್ನೇ ಕೈವಶ ಮಾಡಿಕೊಂಡಿದ್ದ ಬಿಜೆಪಿಯಲ್ಲಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮನೆಯೊಂದು ಮೂರು ಬಾಗಿಲು ಎಂಬ ಸ್ಥಿತಿ ನಿರ್ಮಾಣವಾಗಿದೆ. ಟಿಕೆಟ್ಗಾಗಿ ಬಿಜೆಪಿಯಲ್ಲಿ ನಾ ಮುಂದು ತಾ ಮುಂದು ಅಂತ ಲೈನ್ ಹಚ್ಚಿದ್ದಾರೆ. ಇತ್ತ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಎಂಪಿ ರೇಣುಕಾಚಾರ್ಯ ಲೋಕಸಭೆಗೆ ನನಗೂ ಟಿಕೆಟ್ ಬೇಕು, ನಾನು ಕೂಡ ಬಲವಾದ ಆಕಾಂಕ್ಷಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇತ್ತ ನಾಲ್ಕು ಬಾರಿ ಗೆದ್ದಿರುವ ಜಿಎಂ ಸಿದ್ದೇಶ್ವರ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದಾರೆ..
ಹೌದು.. ಬಿಜೆಪಿಯಲ್ಲಿ ಸತತವಾಗಿ 4 ಸಲ ಗೆಲುವು ಕಂಡ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತೆ ತಮ್ಮ ಬದ್ಧವೈರಿ ಶಾಮನೂರು ಕುಟುಂಬಕ್ಕೆ ಸೆಡ್ಡು ಹೊಡೆಯಲು ಸಜ್ಜಾಗುತ್ತಿದ್ದಾರೆ. ಈ ಬೀಗರ ಕದನದಲ್ಲಿ ಎದುರಾಳಿ ಯಾರೆಂಬುದೇ ಕುತೂಹಲ ಹುಟ್ಟಿಸಿದೆ. ಬಿಜೆಪಿಗೆ ಇಲ್ಲಿ ಜೆಡಿಎಸ್ ಸಹ ಆಸರೆಯಾಗಲಿದೆ. ಸಾಂಪ್ರದಾಯಿಕ ವೈರಿಗಳಾದ ಬಿಜೆಪಿ, ಕಾಂಗ್ರೆಸ್ ವೈರತ್ವದ ಜೊತೆ ಇಲ್ಲಿ ಶಾಮನೂರು-ಸಿದ್ದೇಶ್ವರ ಕುಟುಂಬದ ರಾಜ ವೈರತ್ವವೂ ಜಿದ್ದಾಜಿದ್ದಿ ಚುನಾವಣೆಗೆ ಕಾರಣವಾಗುತ್ತಿದೆ.
ಕಾಂಗ್ರೆಸ್ನಲ್ಲಿಯೂ ಟಿಕೆಟ್ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಶಾಮನೂರು ಶಿವ ಶಂಕರಪ್ಪನವರ ಕಿರಿಯ ಸೊಸೆ, ಸಚಿವ ಎಸ್ ಎಸ್ ಮಲ್ಲಿಕಾರ್ಜುನರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ ಹೆಸರು ಮುಂಚೂಣಿಯಲ್ಲಿದೆ. ಕಳೆದ ಬಾರಿ ಸ್ಪರ್ಧಿಸಿದ್ದ ಎಚ್ ಬಿ ಮಂಜಪ್ಪ ಪರವೂ ಕೆಲವರು ಬ್ಯಾಟ್ ಬೀಸಿದ್ದಾರೆ. ಕಳೆದ ಕೆಲವು ವಾರಗಳಿಂದ ಕ್ಷೇತ್ರಾದ್ಯಂತ ಪಾದಯಾತ್ರೆ ಕೈಗೊಂಡ ಕಕ್ಕರಗೊಳ್ಳ ಜಿ ಬಿ ವಿನಯಕುಮಾರ ಬಗ್ಗೆಯೂ ಕೂಗು ಕೇಳಿ ಬರ್ತಿದೆ.
ಇನ್ನು, ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಬೇಕೆಂದರೆ ಎಚ್.ಬಿ.ಮಂಜಪ್ಪ, ಜಿ.ಬಿ.ವಿನಯ ಕುಮಾರ ಮಧ್ಯೆ ಪೈಪೋಟಿ ಏರ್ಪಡಲಿದೆ. ಮತ್ತೊಂದು ಕಡೆ ದಿವಂಗತ ಚನ್ನಯ್ಯ ಒಡೆಯರ್ ಪುತ್ರ ಶಿವಕುಮಾರ ಒಡೆಯರ್ ಸಹ ಟಿಕೆಟ್ಗೆ ಪ್ರಯತ್ನಿಸಿದ್ದಾರೆ. ಹಾಗಾಗಿಯೇ ಕಾಂಗ್ರೆಸ್ ಏನೇ ಮಾಡಿದರೂ, ಅಳೆದು ತೂಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಗಿದೆ. ಇನ್ನೂ ಶಾಮನೂರು ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡಬೇಕೆಂದರೆ ಸ್ವತಃ ಎಸ್ಎಸ್ ಮಲ್ಲಿಕಾರ್ಜುನ ಕಣಕ್ಕೆ ಇಳಿಯಬಹುದು ಅಥವಾ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಕಣಕ್ಕಿಳಿಸಬಹುದು ಎನ್ನಲಾಗುತ್ತಿದೆ.