ಕೇಂದ್ರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ; ಹೀಗಾಗಿ ದಿಲ್ಲಿಗೆ ಬಂದು ಹೋರಾಡುತ್ತಿದ್ದೇವೆ ; ಡಿಕೆಶಿ
1091 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಹೊಸದಿಲ್ಲಿ : ನಮ್ಮ ಕೂಗು ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ನಾವು ಧ್ವನಿ ಎತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ನಾವು ಇಲ್ಲಿಗೆ ಬಂದು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಹೋರಾಟ ರಾಜಕೀಯ ಸ್ಟಂಟ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ನಾವು ನೋಡುತ್ತಿದ್ದೇವೆ. ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ ಎಂದು ಕೇಳಿದರು.
ಗ್ಯಾರಂಟಿ ಯೋಜನೆಯಿಂದ ಹಣ ಖಾಲಿ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮರ್ಥ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ನಾವು ಇಲ್ಲಿಗೆ ಬಂದು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಹೋರಾಟ ರಾಜಕೀಯ ಸ್ಟಂಟ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ನಾವು ನೋಡುತ್ತಿದ್ದೇವೆ. ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ ಎಂದು ಕೇಳಿದರು.
ಗ್ಯಾರಂಟಿ ಯೋಜನೆಯಿಂದ ಹಣ ಖಾಲಿ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮರ್ಥ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು ಎಂದು ತಿಳಿಸಿದರು.