Delhi Liquor Policy Case : ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣ ಕೆ. ಕವಿತಾಗೆ ಮತ್ತೆ ಜೈಲು..!
1088 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮಾಜಿ ಸಿಎಂ ಪುತ್ರಿ ಕೆ. ಕವಿತಾರನ್ನು ಮಾರ್ಚ್ 15 ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಬಳಿಕ ನ್ಯಾಯಲಯದ ಮುಂದೆ ಹಾಜರು ಪಡಿಸಿ ಇ.ಡಿ. ಕಸ್ಟಡಿಗೆ ಪಡೆದಿತ್ತು. ಇ.ಡಿ. ಕಸ್ಟಡಿ ಅಂತ್ಯದ ಬಳಿಕ ಏಪ್ರಿಲ್ 9 ರವೆರೆಗೆ ನ್ಯಾಯಾಂಗ ಬಂಧನ ವಿಧಿಸಿ ಹೆಹಲಿ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿತ್ತು. ಇಂದು ನಡೆದ ವಿಚಾರಣೆಯಲ್ಲಿ ಮತ್ತೆ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವೆರೆಗೆ ವಿಸ್ತರಣೆ ಮಾಡಿದೆ. ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ. ಹಲವರನ್ನು ಬಂಧಿಸಿತ್ತು. ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಎಎಪಿ ಮುಖಂಡರಾದ ಸಂಜಯ್ ಸಿಂಗ್, ಸತ್ಯಂದ್ರಸಿಂಗ್ ಜೈನ್, ಮನೀಷ್ ಸಿಸೋಡೀಯಾರನ್ನು ಬಂಧಿಸಿತ್ತು. ಎಎಪಿ ಮುಖಂಡ ಸಂಜಯ್ ಸಿಂಗ್ರವರಿಗೆ ಕಳೆದವಾರ ಜಾಮೀನು ನೀಡಿತ್ತು, ಆ ಬಳಿಕ ಸಂಜಯ್ ಸಿಂಗ್ ಜೈಲಿನಿಂದ ಹೊರಬಂದಿದ್ರು. ಇನ್ನೂ ಕೆ. ಕವಿತಾ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಕವಿತಾರವರ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿತ್ತು.