ಪಂಚ ಕದನ ; ದಿಲ್ಲಿಯಲ್ಲಿ ʻಕೈʼ ಕಾರ್ಯಕರ್ತರ ಸಂಭ್ರಮ..!
1136 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಹೊಸದಿಲ್ಲಿ; ಚುನಾವಣೆಯ ಮತ ಎಣಿಕೆಗೆ ಮುನ್ನ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು, ಸಂಗೀತ, ನೃತ್ಯದ ಮೂಲಕ ಸಂಭ್ರಮಕ್ಕೆ ಸಜ್ಜಾಗಿದ್ದಾರೆ. ಸಂಭ್ರಮಾಚರಣೆಗಾಗಿ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ಲಡ್ಡುಗಳನು ಸಹ ತರಲಾಗಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಜನರು ಕಾತರದಿಂದ ಕಾಯುತ್ತಿದ್ದಾರೆ. ತೆಲಂಗಾಣದಲ್ಲಿ ಬಹುತೇಕ ಕಾಂಗ್ರೆಸ್ ಅಧಿಕಾರಕ್ಕೇರುವ ಸಾಧ್ಯತೆ ಇದೆ, ಬಿಜೆಪಿ, ಬಿಆರ್ಸ್ಗೆ ಹಿನ್ನಡೆಯಾಗಿದೆ, ಇನ್ನೂ ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ ಇದೆ, ಛತ್ತೀಸ್ ಗಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರಾನೇರ ಹಣಾಹಣಿ ಏರ್ಪಟ್ಟಿದೆ. ಮಧ್ಯ ಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ.