Karnataka Budget 2023: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಗಮನಿಸಲೇಬೇಕಾದ ಸಂಗತಿಗಳಿವು!
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು; 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಐತಿಹಾಸಿಕ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ತೆರಿಗೆ ಸೋರಿಕೆ ತಡೆಯುವ ಜೊತೆಯಲ್ಲೇ ಮದ್ಯದ ತೆರಿಗೆ ಏರಿಕೆ ಮಾಡುವ ಮೂಲಕ ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಲಾಗಿದೆ. ಸಿದ್ದರಾಮಯ್ಯ ಬಜೆಟ್ನ ಮುಖ್ಯಾಂಶಗಳು ಇಂತಿವೆ
ಸಿದ್ದರಾಮಯ್ಯ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಮೂಲ ಮತ್ರದ ಬಜೆಟ್ ಮಂಡಿಸಿದ್ದಾರೆ. ಈ ಬಾರಿ 3 ಲಕ್ಷದ 27 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆಯಾಗಿದೆ. ಬಜೆಟ್ನಲ್ಲಿ ರೈತರಿಗೆ ಬಂಪರ್ ಸಿಕ್ಕಿದ್ದು, ರೈತರ ಉತ್ಪನ್ನದ ಏಕೀಕೃತ ಬ್ರಾಂಡಿಂಗ್ಗೆ 10,000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮಕ್ಕೆ ಉತ್ತೇಜನಕ್ಕೆ ಕ್ರಮ, ರೇಷ್ಮೆ ಮಾರುಕಟ್ಟೆಗಳ ಅಭಿವೃದ್ಧಿಗೆ 75 ಕೋಟಿ ರೂಪಾಯಿ ಅನುದಾನ, ರಾಮನಗರ ಹಾಗೂ ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಅಭಿವೃದ್ಧಿ, ಮೆಟ್ರೋ, ಉಪನಗರ ರೈಲಿಗೆ 30 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ, ಜೊತೆಗೆ ರೈತರಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರುಜಾರಿ ಮಾಡಲಾಗಿದೆ. ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸಿದ್ದರಾಮಯ್ಯ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಮೂಲ ಮತ್ರದ ಬಜೆಟ್ ಮಂಡಿಸಿದ್ದಾರೆ. ಈ ಬಾರಿ 3 ಲಕ್ಷದ 27 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆಯಾಗಿದೆ. ಬಜೆಟ್ನಲ್ಲಿ ರೈತರಿಗೆ ಬಂಪರ್ ಸಿಕ್ಕಿದ್ದು, ರೈತರ ಉತ್ಪನ್ನದ ಏಕೀಕೃತ ಬ್ರಾಂಡಿಂಗ್ಗೆ 10,000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮಕ್ಕೆ ಉತ್ತೇಜನಕ್ಕೆ ಕ್ರಮ, ರೇಷ್ಮೆ ಮಾರುಕಟ್ಟೆಗಳ ಅಭಿವೃದ್ಧಿಗೆ 75 ಕೋಟಿ ರೂಪಾಯಿ ಅನುದಾನ, ರಾಮನಗರ ಹಾಗೂ ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಅಭಿವೃದ್ಧಿ, ಮೆಟ್ರೋ, ಉಪನಗರ ರೈಲಿಗೆ 30 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ, ಜೊತೆಗೆ ರೈತರಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರುಜಾರಿ ಮಾಡಲಾಗಿದೆ. ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.