ದಿಲ್ಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೋರಾಟ, ತೆರಿಗೆ ಹಂಚಿಕೆಯ ಲೆಕ್ಕ ತೆರೆದಿಟ್ಟ ಸಿಎಂ ಸಿದ್ದರಾಮಯ್ಯ
1231 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಹೊಸ ದಿಲ್ಲಿ: ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ರಚಿಸಲಾದ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದಿಲ್ಲಿಯ ಜಂತರ್ ಮಂತರ್ನಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳು ಉತ್ತರ ಭಾರತದ ರಾಜ್ಯಗಳಿಗಿಂತ ಪರಿಣಾಮಕಾರಿ ಜನಸಂಖ್ಯೆ ನಿಯಂತ್ರಣ ಮಾಡಿದವು. ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ನಮ್ಮ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ. ಕೇಂದ್ರ ಸರ್ಕಾರದ ಅಂಕಿ ಅಂಶಗಳೇ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಹೇಳುತ್ಯಿವೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ನಮಗೇ ಏಕೆ ಈ ಮಟ್ಟದ ಅನ್ಯಾಯ ಎಂದು ಸಿಎಂ ಪ್ರಶ್ನಿಸಿದರು. 4.3 ಲಕ್ಷ ಕೋಟಿ ರೂಪಾಯಿಯನ್ನು ನಾವು ಕನ್ನಡಿಗರು ತೆರಿಗೆ ಕಟ್ಟುತ್ತೇವೆ. ನಮಗೆ ವಾಪಾಸ್ ಬರುವುದು ಕೇವಲ 50,000 ಕೋಟಿ ರೂಪಾಯಿ ಮಾತ್ರ. ಅಂದರೆ ನಾವು ಕೊಡುವ ಪ್ರತಿ 100 ರೂ ನಲ್ಲಿ 13 ರೂ ಮಾತ್ರ ನಮಗೆ ವಾಪಾಸ್ ಬರ್ತದೆ. ಇದಕ್ಕಿಂತ ಭೀಕರ ಅನ್ಯಾಯ ಏನಿದೆ? ಈ ಅನ್ಯಾಯವನ್ನು ನಾವು ಸಹಿಸಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ. ಕೇಂದ್ರ ಸರ್ಕಾರದ ಅಂಕಿ ಅಂಶಗಳೇ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಹೇಳುತ್ಯಿವೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ನಮಗೇ ಏಕೆ ಈ ಮಟ್ಟದ ಅನ್ಯಾಯ ಎಂದು ಸಿಎಂ ಪ್ರಶ್ನಿಸಿದರು. 4.3 ಲಕ್ಷ ಕೋಟಿ ರೂಪಾಯಿಯನ್ನು ನಾವು ಕನ್ನಡಿಗರು ತೆರಿಗೆ ಕಟ್ಟುತ್ತೇವೆ. ನಮಗೆ ವಾಪಾಸ್ ಬರುವುದು ಕೇವಲ 50,000 ಕೋಟಿ ರೂಪಾಯಿ ಮಾತ್ರ. ಅಂದರೆ ನಾವು ಕೊಡುವ ಪ್ರತಿ 100 ರೂ ನಲ್ಲಿ 13 ರೂ ಮಾತ್ರ ನಮಗೆ ವಾಪಾಸ್ ಬರ್ತದೆ. ಇದಕ್ಕಿಂತ ಭೀಕರ ಅನ್ಯಾಯ ಏನಿದೆ? ಈ ಅನ್ಯಾಯವನ್ನು ನಾವು ಸಹಿಸಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.