ರಾಜ್ಯ ಸಚಿವ ಸಂಪುಟ ರಚನೆ ಕಸರತ್ತು ಇನ್ನೂ ಮುಗಿದಿಲ್ಲ. ದಿಲ್ಲಿಯಲ್ಲಿ ಹೈಕಮಾಂಡ್ ಅಂಗಳದಲ್ಲಿ ಮಂತ್ರಿ ಸ್ಥಾನ ಹಾಗೂ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸಿ ಸರ್ಕಾರವನ್ನು ಪೂರ್ಣ ಪ್ರಮಾಣದಲ್ಲಿ ಟೇಕ್ ಆಫ್ ಮಾಡುವ ಕಸರತ್ತನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಸಾಕಷ್ಟು ಹಿರಿಯ ಶಾಸಕರಿಗೆ ಮಂತ್ರಿ ಭಾಗ್ಯ ಇಲ್ಲ ಅನ್ನೋ ಮಾತುಗಳೂ ಕೇಳಿ ಬರ್ತಿವೆ. ಇನ್ನು ಖಾತೆ ಕ್ಯಾತೆಯಂತೂ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ!