ರಾಜ್ಯಸಭೆ ಚುನಾವಣೆ: ಸುರೇಶ್ ಕುಮಾರ್ ಮೊದಲ ಮತದಾರ, ಕಾಂಗ್ರೆಸ್ಗೆ ಅಡ್ಡ ಮತದಾನದ ಆತಂಕ!
1169 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮಂಗಳವಾರ ಮತದಾನ ಆರಂಭಗೊಂಡಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದರು. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಮತದಾನದ ಹಿನ್ನಲೆಯಲ್ಲಿ ಮೂರು ಪಕ್ಷಗಳ ಏಜೆಂಟ್ಗಳನ್ನು ನಿಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಏಜೆಂಟ್ ಗಳಾಗಿ ರಿಜ್ವಾನ್ ಹರ್ಷದ್, ಯುಬಿ ವೆಂಕಟೇಶ್, ನಾರಾಯಣ ಸ್ವಾಮಿ ಇದ್ದಾರೆ. ಬಿಜೆಪಿ ಏಜೆಂಟ್ ಆಗಿ ಸುನೀಲ್ ಕುಮಾರ್ ಹಾಗೂ ಅರವಿಂದ ಬೆಲ್ಲದ್ ಇದ್ದಾರೆ. ಜೆಡಿಎಸ್ ಏಜೆಂಟ್ ಆಗಿ ತಿಪ್ಪೇಸ್ವಾಮಿ ಇದ್ದಾರೆ. ಜೆಡಿಎಸ್ ಸದಸ್ಯರಾದ ಜಿಟಿ ದೇವೇಗೌಡ, ಸ್ವರೂಪ್, ಸಮೃದ್ಧಿ ಮಂಜುನಾಥ್, ಎಚ್ಡಿ ಕುಮಾರಸ್ವಾಮಿ ಮತದಾನ ಮಾಡಿದರು. ರೆಸಾರ್ಟ್ನಿಂದ ಕಾಂಗ್ರೆಸ್ ಸದಸ್ಯರು ಪ್ರತ್ಯೇಕ ಬ್ಯಾಚ್ಗಳಾಗಿ ಬಸ್ಗಳ ಮೂಲಕ ವಿಧಾನಸೌಧಕ್ಕೆ ಬಂದಿದ್ದಾರೆ.
ರಾಜ್ಯದ ನಾಲ್ಕು ಸ್ಥಾನಗಳಿಗೆ ರಾಜ್ಯಸಭೆ ಚುನಾವಣೆಯ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಗೆ ಮತದಾನ ಶುರುವಾಗಿದ್ದು, ಸಂಜೆ 4 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಇದೆ. ಐದನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಭವಿಷ್ಯ ಏನಾಗಲಿದೆ? ಎಂಬ ಕುತೂಹಲ ಇದೆ. ಕಾಂಗ್ರೆಸ್ ಶಾಸಕರು ರೆಸಾರ್ಟ್ನಿಂದಲೇ ಬಸ್ಗಳಲ್ಲಿ ವಿಧಾನಸೌಧಕ್ಕೆ ಬಂದಿದ್ದಾರೆ. ಹಂತ ಹಂತವಾಗಿ ಬಂದು ಮತ ಚಲಾಯಿಸುತ್ತಿದ್ದಾರೆ. ಅಡ್ಡ ಮತದಾನದ ಭೀತಿ ಇರುವುದರಿಂದ ಅಖಾಡ ರಂಗೇರಿದೆ.
ಅಂದುಕೊಂಡಂತೆ ಎಲ್ಲವೂ ನಡೆದರೆ ಇರುವ ನಾಲ್ಕು ಸೀಟಿನಲ್ಲಿ ಕಾಂಗ್ರೆಸ್ನ ಮೂವರು, ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಆದರೆ ಒಂದು ವೇಳೆ ಅಡ್ಡ ಮತದಾನ ಆದರೆ ಸೋಲು, ಗೆಲುವಿನ ಲೆಕ್ಕಾಚಾರವೆಲ್ಲವೂ ಬದಲಾವಣೆ ಆಗಲಿದೆ. ಐದನೇ ಅಭ್ಯರ್ಥಿ ಕಣಕ್ಕಿಳಿಸಿರುವುದರಿಂದ ಅಡ್ಡಮತದಾನದ ಭೀತಿ ಎದುರಾಗಿದೆ. ಒಂದು ವೇಳೆ ಅಡ್ಡಮತದಾನ ನಡೆದರೆ ಕಾಂಗ್ರೆಸ್ ನ ಮೂರನೇ ಅಭ್ಯರ್ಥಿ ಹಾಗೂ ಮೈತ್ರಿಯ ಐದನೇ ಅಭ್ಯರ್ಥಿಯ ಸೋಲು ಗೆಲುವಿನ ಫಲಿತಾಂಶವನ್ನು ಬುಡಮೇಲು ಮಾಡುವ ಸಾಧ್ಯತೆ ಇದೆ.
ರಾಜ್ಯ ಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ 45 ಮತಗಳ ಅಗತ್ಯವಿದೆ. ಶಾಸಕರು ಚಲಾಯಿಸುವ ಒಂದು ಮತದ ಮೌಲ್ಯ 100. ಫಾರ್ಮುಲಾ ಪ್ರಕಾರ ಒಬ್ಬ ಅಭ್ಯರ್ಥಿ ಗೆಲ್ಲಬೇಕಾದರೆ 4481 ಮತಮೌಲ್ಯದ ಅಗತ್ಯ ಇದೆ. ಅಂದರೆ ಒಂದು ಅಭ್ಯರ್ಥಿ ಗೆಲುವಿಗೆ ಕನಿಷ್ಠ 45 ಸದಸ್ಯರು ಮತವನ್ನು ಚಲಾಯಿಸಬೇಕಾಗುತ್ತದೆ. ಇದನ್ನು ಮೊದಲ ಪ್ರಾಶಸ್ತ್ಯದ ಮತಗಳು ಎನ್ನಲಾಗುತ್ತದೆ. ಕಾಂಗ್ರೆಸ್ ಶಾಸಕರ ಬಲ ಸದ್ಯ 134 ಇದ್ದರೆ, ಬಿಜೆಪಿ 66 ಶಾಸಕರ ಬಲವನ್ನು ಹೊಂದಿದೆ. ಇನ್ನು ಜೆಡಿಎಸ್ 19 ಶಾಸಕರ ಬಲ ಹೊಂದಿದೆ.
ಪಕ್ಷೇತರ ಅಭ್ಯರ್ಥಿಗಳ ಬೆಂಬಲದೊಂದಿಗೆ ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಖ್ಯಾಬಲವನ್ನು ಹೊಂದಿದೆ. ದರ್ಶನ್ ಪುಟ್ಟಣ್ಣಯ್ಯ, ಲತಾ ಮಲ್ಲಿಕಾರ್ಜುನ್, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಜನಾರ್ದನ ರೆಡ್ಡಿ ಮತಗಳು ನಿರ್ಣಾಯಕವಾಗಿವೆ. ಮೂವರು ಪಕ್ಷೇತರರು ಕಾಂಗ್ರೆಸ್ ಪರವಾಗಿದ್ದು, ಜನಾರ್ದನ ರೆಡ್ಡಿ ಕೂಡಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕುವ ಸಾಧ್ಯತೆ ಇದೆ.
ಬಿಜೆಪಿ ತನ್ನ ಒಬ್ಬ ಅಭ್ಯರ್ಥಿಯನ್ನು ನಿರಾಯಾಸವಾಗಿ ಗೆಲ್ಲಿಸಲಿದೆ. ತನ್ನ ಅಭ್ಯರ್ಥಿಗೆ 45 ಮತ ಹಾಕಿದ ಬಳಿಕ ಉಳಿದ 21 ಮತಗಳನ್ನು ಮೈತ್ರಿ ಅಭ್ಯರ್ಥಿಗೆ ವರ್ಗಾವಣೆ ಮಾಡಲಿದೆ. ಜೊತೆಗೆ ಜೆಡಿಎಸ್ ನ 19 ಸಂಖ್ಯಾಬಲದೊಂದಿಗೆ ಐದನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 40 ಮತಗಳು ಬೀಳಲಿದ್ದು, ಐದು ಮತಗಳ ಕೊರತೆಯಾಗಲಿದೆ. ಪ್ರಾಶಸ್ತ್ಯ ಮತಗಳ ಲೆಕ್ಕಾಚಾರ ಹಾಗೂ ಅಡ್ಡ ಮತದಾನದ ಸಾಧ್ಯತೆ ಮೇರೆಗೆ ಐದನೇ ಅಭ್ಯರ್ಥಿಯ ಗೆಲುವು ನಿಗದಿಯಾಗಲಿದೆ.
ಮತದಾನದ ಹಿನ್ನಲೆಯಲ್ಲಿ ಮೂರು ಪಕ್ಷಗಳ ಏಜೆಂಟ್ಗಳನ್ನು ನಿಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಏಜೆಂಟ್ ಗಳಾಗಿ ರಿಜ್ವಾನ್ ಹರ್ಷದ್, ಯುಬಿ ವೆಂಕಟೇಶ್, ನಾರಾಯಣ ಸ್ವಾಮಿ ಇದ್ದಾರೆ. ಬಿಜೆಪಿ ಏಜೆಂಟ್ ಆಗಿ ಸುನೀಲ್ ಕುಮಾರ್ ಹಾಗೂ ಅರವಿಂದ ಬೆಲ್ಲದ್ ಇದ್ದಾರೆ. ಜೆಡಿಎಸ್ ಏಜೆಂಟ್ ಆಗಿ ತಿಪ್ಪೇಸ್ವಾಮಿ ಇದ್ದಾರೆ. ಜೆಡಿಎಸ್ ಸದಸ್ಯರಾದ ಜಿಟಿ ದೇವೇಗೌಡ, ಸ್ವರೂಪ್, ಸಮೃದ್ಧಿ ಮಂಜುನಾಥ್, ಎಚ್ಡಿ ಕುಮಾರಸ್ವಾಮಿ ಮತದಾನ ಮಾಡಿದರು. ರೆಸಾರ್ಟ್ನಿಂದ ಕಾಂಗ್ರೆಸ್ ಸದಸ್ಯರು ಪ್ರತ್ಯೇಕ ಬ್ಯಾಚ್ಗಳಾಗಿ ಬಸ್ಗಳ ಮೂಲಕ ವಿಧಾನಸೌಧಕ್ಕೆ ಬಂದಿದ್ದಾರೆ.
ರಾಜ್ಯದ ನಾಲ್ಕು ಸ್ಥಾನಗಳಿಗೆ ರಾಜ್ಯಸಭೆ ಚುನಾವಣೆಯ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಗೆ ಮತದಾನ ಶುರುವಾಗಿದ್ದು, ಸಂಜೆ 4 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಇದೆ. ಐದನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಭವಿಷ್ಯ ಏನಾಗಲಿದೆ? ಎಂಬ ಕುತೂಹಲ ಇದೆ. ಕಾಂಗ್ರೆಸ್ ಶಾಸಕರು ರೆಸಾರ್ಟ್ನಿಂದಲೇ ಬಸ್ಗಳಲ್ಲಿ ವಿಧಾನಸೌಧಕ್ಕೆ ಬಂದಿದ್ದಾರೆ. ಹಂತ ಹಂತವಾಗಿ ಬಂದು ಮತ ಚಲಾಯಿಸುತ್ತಿದ್ದಾರೆ. ಅಡ್ಡ ಮತದಾನದ ಭೀತಿ ಇರುವುದರಿಂದ ಅಖಾಡ ರಂಗೇರಿದೆ.
ಅಂದುಕೊಂಡಂತೆ ಎಲ್ಲವೂ ನಡೆದರೆ ಇರುವ ನಾಲ್ಕು ಸೀಟಿನಲ್ಲಿ ಕಾಂಗ್ರೆಸ್ನ ಮೂವರು, ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಆದರೆ ಒಂದು ವೇಳೆ ಅಡ್ಡ ಮತದಾನ ಆದರೆ ಸೋಲು, ಗೆಲುವಿನ ಲೆಕ್ಕಾಚಾರವೆಲ್ಲವೂ ಬದಲಾವಣೆ ಆಗಲಿದೆ. ಐದನೇ ಅಭ್ಯರ್ಥಿ ಕಣಕ್ಕಿಳಿಸಿರುವುದರಿಂದ ಅಡ್ಡಮತದಾನದ ಭೀತಿ ಎದುರಾಗಿದೆ. ಒಂದು ವೇಳೆ ಅಡ್ಡಮತದಾನ ನಡೆದರೆ ಕಾಂಗ್ರೆಸ್ ನ ಮೂರನೇ ಅಭ್ಯರ್ಥಿ ಹಾಗೂ ಮೈತ್ರಿಯ ಐದನೇ ಅಭ್ಯರ್ಥಿಯ ಸೋಲು ಗೆಲುವಿನ ಫಲಿತಾಂಶವನ್ನು ಬುಡಮೇಲು ಮಾಡುವ ಸಾಧ್ಯತೆ ಇದೆ.
ರಾಜ್ಯ ಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ 45 ಮತಗಳ ಅಗತ್ಯವಿದೆ. ಶಾಸಕರು ಚಲಾಯಿಸುವ ಒಂದು ಮತದ ಮೌಲ್ಯ 100. ಫಾರ್ಮುಲಾ ಪ್ರಕಾರ ಒಬ್ಬ ಅಭ್ಯರ್ಥಿ ಗೆಲ್ಲಬೇಕಾದರೆ 4481 ಮತಮೌಲ್ಯದ ಅಗತ್ಯ ಇದೆ. ಅಂದರೆ ಒಂದು ಅಭ್ಯರ್ಥಿ ಗೆಲುವಿಗೆ ಕನಿಷ್ಠ 45 ಸದಸ್ಯರು ಮತವನ್ನು ಚಲಾಯಿಸಬೇಕಾಗುತ್ತದೆ. ಇದನ್ನು ಮೊದಲ ಪ್ರಾಶಸ್ತ್ಯದ ಮತಗಳು ಎನ್ನಲಾಗುತ್ತದೆ. ಕಾಂಗ್ರೆಸ್ ಶಾಸಕರ ಬಲ ಸದ್ಯ 134 ಇದ್ದರೆ, ಬಿಜೆಪಿ 66 ಶಾಸಕರ ಬಲವನ್ನು ಹೊಂದಿದೆ. ಇನ್ನು ಜೆಡಿಎಸ್ 19 ಶಾಸಕರ ಬಲ ಹೊಂದಿದೆ.
ಪಕ್ಷೇತರ ಅಭ್ಯರ್ಥಿಗಳ ಬೆಂಬಲದೊಂದಿಗೆ ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಖ್ಯಾಬಲವನ್ನು ಹೊಂದಿದೆ. ದರ್ಶನ್ ಪುಟ್ಟಣ್ಣಯ್ಯ, ಲತಾ ಮಲ್ಲಿಕಾರ್ಜುನ್, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಜನಾರ್ದನ ರೆಡ್ಡಿ ಮತಗಳು ನಿರ್ಣಾಯಕವಾಗಿವೆ. ಮೂವರು ಪಕ್ಷೇತರರು ಕಾಂಗ್ರೆಸ್ ಪರವಾಗಿದ್ದು, ಜನಾರ್ದನ ರೆಡ್ಡಿ ಕೂಡಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕುವ ಸಾಧ್ಯತೆ ಇದೆ.
ಬಿಜೆಪಿ ತನ್ನ ಒಬ್ಬ ಅಭ್ಯರ್ಥಿಯನ್ನು ನಿರಾಯಾಸವಾಗಿ ಗೆಲ್ಲಿಸಲಿದೆ. ತನ್ನ ಅಭ್ಯರ್ಥಿಗೆ 45 ಮತ ಹಾಕಿದ ಬಳಿಕ ಉಳಿದ 21 ಮತಗಳನ್ನು ಮೈತ್ರಿ ಅಭ್ಯರ್ಥಿಗೆ ವರ್ಗಾವಣೆ ಮಾಡಲಿದೆ. ಜೊತೆಗೆ ಜೆಡಿಎಸ್ ನ 19 ಸಂಖ್ಯಾಬಲದೊಂದಿಗೆ ಐದನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 40 ಮತಗಳು ಬೀಳಲಿದ್ದು, ಐದು ಮತಗಳ ಕೊರತೆಯಾಗಲಿದೆ. ಪ್ರಾಶಸ್ತ್ಯ ಮತಗಳ ಲೆಕ್ಕಾಚಾರ ಹಾಗೂ ಅಡ್ಡ ಮತದಾನದ ಸಾಧ್ಯತೆ ಮೇರೆಗೆ ಐದನೇ ಅಭ್ಯರ್ಥಿಯ ಗೆಲುವು ನಿಗದಿಯಾಗಲಿದೆ.