ಬಿಜೆಪಿಗೆ `ಪಂಚ’ ಕಂಟಕ; ಶೋಭಾ, ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ರೆ ಏನಾಗುತ್ತೆ..? ಇಕ್ಕಟ್ಟಿನಲ್ಲಿ ಹೈಕಮಾಂಡ್
1764 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಹಂಚಿಕೆಯೇ ದೊಡ್ಡ ತಲೆನೋವಾಗಿದೆ. ಕರ್ನಾಟಕದಲ್ಲಿ ಜೆಡಿಎಸ್ ಮೈತ್ರಿಯೊಂದಿಗೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಆದರೆ, ಇದುವರೆಗೂ ಕರ್ನಾಟಕದ ಯಾವುದೇ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಗಳಯನ್ನು ಬಿಜೆಪಿ ಘೋಷಿಸಿಲ್ಲ. ಅಭ್ಯರ್ಥಿಗಳ ಘೋಷಣೆಗೆ ತುಂಬಾ ಕಸರತ್ತು ನಡೆಸುತ್ತಿದ್ದಾರೆ, ಕರ್ನಾಟಕದ ಈ ಐದು ಲೋಕಸಭಾ ಕ್ಷೇತ್ರಗಳು ಬಿಜೆಪಿಗೆ ತಲೆನೋವನ್ನು ತಂದಿವೆ. ಈ ಐದು ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುವುದೇ ಕಮಲ ಪಡೆಗೆ ಸವಾಲಿನ ಕೆಲಸ ಹಾಗಾದ್ರೆ ಆ ಐದು ಕ್ಷೇತ್ರಗಳು ಯಾವುದು..? ಬಿಜೆಪಿಗೆ ಈ ಕ್ಷೇತ್ರಗಳೇ ಯಾಕೆ ಸವಾಲು..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಹೌದು.. ಐದು ಕ್ಷೇತ್ರಗಳ ಪೈಕಿ.. ಎರಡು ಕ್ಷೇತ್ರಗಳಲ್ಲಿ ಇಂಥವರಿಗೆ ಟಿಕೆಟ್ ಕೊಡಿ, ಇಂಥವರಿಗೆ ಕೊಡಬೇಡಿ ಎಂಬ ಕೂಗುಗಳು ಕೇಳಿಬರುತ್ತಿವೆ. ಇನ್ನೆರಡು ಕ್ಷೇತ್ರಗಳಲ್ಲಿ ಗೋಬ್ಯಾಕ್ ಆಂದೋಲನವೂ ಕೂಡ ನಡೆಯುತ್ತಿದೆ. ಒಂದು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾಯಿಸಲು ಮುಂದಾಗಿರುವ ನಾಯಕರ ನಡೆಗೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಒಂದು ಉಡುಪಿ - ಚಿಕ್ಕಮಗಳೂರು, ತುಮಕೂರು, ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಕ್ಷೇತ್ರಗಳು ಬಿಜೆಪಿ ನಾಯಕರಿಗೆ ಭಾರೀ ತಲೆಬಿಸಿ ತಂದಿವೆ. ಒಂದೊಂದೇ ಕ್ಷೇತ್ರದ ಚಿತ್ರಣವನ್ನ ನೋಡೋದಾದ್ರೆ..
ಪ್ರಮುಖವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದೆ. ಇಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಲಿ ಸಂಸದರಾಗಿದ್ದಾರೆ. ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಆಗ್ರಹಿಸುತ್ತಿದ್ದಾರೆ. ಅದಲ್ಲದೇ ಉಡುಪಿ - ಚಿಕ್ಕಮಗಳೂರಿನವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಗೋಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಕೂಡ ನಡೆಸುತ್ತಿದ್ದು, ಪತ್ರ ಚಳವಳಿ ಮೂಲಕ ತಮ್ಮ ಅಭಿಪ್ರಾಯವನ್ನು ಬಿಜೆಪಿ ನಾಯಕರಿಗೆ ಮುಟ್ಟಿಸುತ್ತಿದ್ದಾರೆ. ಆದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತಿದ್ದು, ಟಿಕೆಟ್ ಅನ್ನು ಶೋಭಾ ಅವರಿಗೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಇದರಿಂದ ಹೈಕಮಾಂಡ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವಾಗಿ ಹೋಗುವುದೋ? ಅಥವಾ ಬಿಎಸ್ ಯಡಿಯೂರಪ್ಪ ಸೂಚನೆಯನ್ನು ಧಿಕ್ಕರಿಸುವುದೋ? ಎಂಬ ಗೊಂದಲ ಸೃಷ್ಟಿಯಾಗಿದೆ. ಈ ಎರಡು ಕಾರಣಕ್ಕೆ ಬಿಜೆಪಿ ಹೈಕಮಾಂಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ.
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಂತರ ಬಿಜೆಪಿ ಹೈಕಮಾಂಡ್ಗೆ ಟೆನ್ಷನ್ ಇರೋದೆ ತುಮಕೂರು ಲೋಕಸಭಾ ಕ್ಷೇತ್ರ. ಹೌದು.. ತುಮಕೂರು ಕ್ಷೇತ್ರದ ಹಾಲಿ ಸಂಸದ ಜಿಎಸ್ ಬಸವರಾಜು ಚುನಾವಣೆಗೆ ನಿಲ್ಲಲ್ಲ ಎಂದಿರುವುದರಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಈ ಹಿನ್ನೆಲೆ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಆದರೆ, ವಿ ಸೋಮಣ್ಣ ಅವರ ಸ್ಪರ್ಧೆಗೆ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಹೊರಗಿನವರು ನಮ್ಮ ಕ್ಷೇತ್ರಕ್ಕೆ ಬೇಡ ಎಂದು ಗೋಬ್ಯಾಕ್ ಸೋಮಣ್ಣ ಎಂಬ ಅಭಿಯಾನ ಶುರು ಮಾಡಿದ್ದಾರೆ. ಆದ್ದರಿಂದ ಇಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಜಿಜ್ಞಾಸೆಯಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಜೆಸಿ ಮಾಧುಸ್ವಾಮಿ ಸೇರಿ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದು, ಯಾರಿಗೆ ಹೈಕಮಾಂಡ್ ಮಣೆ ಹಾಕುತ್ತದೆ ಎಂಬುದೇ ಈಗಿನ ಕುತೂಹಲ.
ಇನ್ನೂ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಚುನಾವಣೆಯಿಂದ ಹಿಂದಕ್ಕೆ ಸರಿದಿರುವುದರಿಂದ ಹೊಸ ಅಭ್ಯರ್ಥಿಯನ್ನು ಘೋಷಿಸುವ ಅನಿವಾರ್ಯತೆ ಬಿಜೆಪಿಗಿದೆ. ಈ ಹಿನ್ನೆಲೆ ಹಾವೇರಿ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇದರ ಜೊತೆ ಮಾಜಿ ಸಚಿವ ಬಿಸಿ ಪಾಟೀಲ್ ಕೂಡ ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಪೈಪೋಟಿಯ ಕಾರಣಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಹೈಕಮಾಂಡ್ ತೇಲಿಬಿಟ್ಟಿದೆ. ಇದು ಕೆಎಸ್ ಈಶ್ವರಪ್ಪ ಅವರ ಬಂಡಾಯಕ್ಕೆ ಕಾರಣವಾಗಿದೆ. ಟಿಕೆಟ್ ಸಿಕ್ಕಿಲ್ಲ ಎಂದರೆ ಕಾಂತೇಶ್ ಅವರನ್ನು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಾತುಗಳು ಕೇಳಿಬರುತ್ತಿವೆ. ಈ ಬಿಕ್ಕಟ್ಟನ್ನು ಹೈಕಮಾಂಡ್ ಯಾವ ರೀತಿ ಪರಿಹರಿಸುತ್ತದೆ ಎಂಬುದನ್ನ ನೋಡಬೇಕು..
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹಗೆ ಇಷ್ಟು ದಿನ ಟಿಕೆಟ್ ಸಿಗುತ್ತದೆ ಎಂದು ಹೇಳಲಾಗಿತ್ತು. ಆದರೆ ದಿಢೀರ್ ಯದುವೀರ್ ಕೃಷ್ಣದತ್ತ ಒಡೆಯರ್ ಅವರ ಹೆಸರು ಬಿಜೆಪಿ ಟಿಕೆಟ್ಗೆ ಕೇಳಿಬರುತ್ತಿದೆ. ಇದರಿಂದ ಬಿಜೆಪಿ ಕಾರ್ಯಕರ್ತರು ರಾಜ್ಯ ಬಿಜೆಪಿ ನಾಯಕರ ಮೇಲೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಬದಲಾಯಿಸುವ ಅನಿವಾರ್ಯತೆ ಏನಿದೆ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಆದರೆ, ಮೈಸೂರು ಜಿಲ್ಲೆಯ ಕೆಲವು ಪ್ರಮುಖ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಬೇರೆಯವರಿಗೆ ಟಿಕೆಟ್ ನೀಡೋಣ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಇದರ ಜೊತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಬಿಜೆಪಿ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಸಚಿವ ಡಾ ಕೆ ಸುಧಾಕರ್ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೇ ಜೆಡಿಎಸ್ ನಾಯಕರನ್ನು ಸಂಪರ್ಕಿಸಿ ಮಾತುಕತೆಯೂ ನಡೆಸಿದ್ದಾರೆ. ಆದರೆ ಸುಧಾಕರ್ಗೆ ಪ್ರಬಲ ಪೈಪೋಟಿ ಎಂಬಂತೆ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ ಅವರ ಪುತ್ರ ಅಲೋಕ್ ವಿಶ್ವನಾಥ್ ಅವರು ಕೂಡ ಬೈಕ್ ರ್ಯಾಲಿ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ತಮಗೆ ಟಿಕೆಟ್ ಮಿಸ್ ಆದರೆ ಕಾಂಗ್ರೆಸ್ಗೆ ಹೋಗುವ ಯೋಚನೆಯನ್ನು ಕೂಡ ಡಾ ಕೆ ಸುಧಾಕರ್ ಮಾಡಿದ್ದಾರಂತೆ. ಈ ಹಿನ್ನೆಲೆ ಈ ಕ್ಷೇತ್ರ ಕೂಡ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.
ಒಂದೆಡೆ ಈಗಿರುವ ಹಾಲಿ ಸಂಸದರಿಗೆ ಟಿಕೆಟ್ ನೀಡದಿದ್ರೆ ಬಂಡಾಯದ ಬಿಸಿ ಹೈಕಮಾಂಡ್ಗೆ ತಟ್ಟಲಿದೆ. ಮತ್ತೊಂದೆಡೆ ಕಾರ್ಯಕರ್ತರ ಅಸಮಾಧಾನ.. ಇದೆಲ್ಲವನ್ನು ಕೂಡ ಹೈಕಮಾಂಡ್ ಹೇಗೆ ನಿಭಾಯಿಸುತ್ತೆ ಅನ್ನೋದೆ ಸದ್ಯದ ಕುತೂಹಲ
ಹೌದು.. ಐದು ಕ್ಷೇತ್ರಗಳ ಪೈಕಿ.. ಎರಡು ಕ್ಷೇತ್ರಗಳಲ್ಲಿ ಇಂಥವರಿಗೆ ಟಿಕೆಟ್ ಕೊಡಿ, ಇಂಥವರಿಗೆ ಕೊಡಬೇಡಿ ಎಂಬ ಕೂಗುಗಳು ಕೇಳಿಬರುತ್ತಿವೆ. ಇನ್ನೆರಡು ಕ್ಷೇತ್ರಗಳಲ್ಲಿ ಗೋಬ್ಯಾಕ್ ಆಂದೋಲನವೂ ಕೂಡ ನಡೆಯುತ್ತಿದೆ. ಒಂದು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾಯಿಸಲು ಮುಂದಾಗಿರುವ ನಾಯಕರ ನಡೆಗೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಒಂದು ಉಡುಪಿ - ಚಿಕ್ಕಮಗಳೂರು, ತುಮಕೂರು, ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಕ್ಷೇತ್ರಗಳು ಬಿಜೆಪಿ ನಾಯಕರಿಗೆ ಭಾರೀ ತಲೆಬಿಸಿ ತಂದಿವೆ. ಒಂದೊಂದೇ ಕ್ಷೇತ್ರದ ಚಿತ್ರಣವನ್ನ ನೋಡೋದಾದ್ರೆ..
ಪ್ರಮುಖವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದೆ. ಇಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಲಿ ಸಂಸದರಾಗಿದ್ದಾರೆ. ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಆಗ್ರಹಿಸುತ್ತಿದ್ದಾರೆ. ಅದಲ್ಲದೇ ಉಡುಪಿ - ಚಿಕ್ಕಮಗಳೂರಿನವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಗೋಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಕೂಡ ನಡೆಸುತ್ತಿದ್ದು, ಪತ್ರ ಚಳವಳಿ ಮೂಲಕ ತಮ್ಮ ಅಭಿಪ್ರಾಯವನ್ನು ಬಿಜೆಪಿ ನಾಯಕರಿಗೆ ಮುಟ್ಟಿಸುತ್ತಿದ್ದಾರೆ. ಆದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತಿದ್ದು, ಟಿಕೆಟ್ ಅನ್ನು ಶೋಭಾ ಅವರಿಗೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಇದರಿಂದ ಹೈಕಮಾಂಡ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವಾಗಿ ಹೋಗುವುದೋ? ಅಥವಾ ಬಿಎಸ್ ಯಡಿಯೂರಪ್ಪ ಸೂಚನೆಯನ್ನು ಧಿಕ್ಕರಿಸುವುದೋ? ಎಂಬ ಗೊಂದಲ ಸೃಷ್ಟಿಯಾಗಿದೆ. ಈ ಎರಡು ಕಾರಣಕ್ಕೆ ಬಿಜೆಪಿ ಹೈಕಮಾಂಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ.
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಂತರ ಬಿಜೆಪಿ ಹೈಕಮಾಂಡ್ಗೆ ಟೆನ್ಷನ್ ಇರೋದೆ ತುಮಕೂರು ಲೋಕಸಭಾ ಕ್ಷೇತ್ರ. ಹೌದು.. ತುಮಕೂರು ಕ್ಷೇತ್ರದ ಹಾಲಿ ಸಂಸದ ಜಿಎಸ್ ಬಸವರಾಜು ಚುನಾವಣೆಗೆ ನಿಲ್ಲಲ್ಲ ಎಂದಿರುವುದರಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಈ ಹಿನ್ನೆಲೆ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಆದರೆ, ವಿ ಸೋಮಣ್ಣ ಅವರ ಸ್ಪರ್ಧೆಗೆ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಹೊರಗಿನವರು ನಮ್ಮ ಕ್ಷೇತ್ರಕ್ಕೆ ಬೇಡ ಎಂದು ಗೋಬ್ಯಾಕ್ ಸೋಮಣ್ಣ ಎಂಬ ಅಭಿಯಾನ ಶುರು ಮಾಡಿದ್ದಾರೆ. ಆದ್ದರಿಂದ ಇಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಜಿಜ್ಞಾಸೆಯಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಜೆಸಿ ಮಾಧುಸ್ವಾಮಿ ಸೇರಿ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದು, ಯಾರಿಗೆ ಹೈಕಮಾಂಡ್ ಮಣೆ ಹಾಕುತ್ತದೆ ಎಂಬುದೇ ಈಗಿನ ಕುತೂಹಲ.
ಇನ್ನೂ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಚುನಾವಣೆಯಿಂದ ಹಿಂದಕ್ಕೆ ಸರಿದಿರುವುದರಿಂದ ಹೊಸ ಅಭ್ಯರ್ಥಿಯನ್ನು ಘೋಷಿಸುವ ಅನಿವಾರ್ಯತೆ ಬಿಜೆಪಿಗಿದೆ. ಈ ಹಿನ್ನೆಲೆ ಹಾವೇರಿ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇದರ ಜೊತೆ ಮಾಜಿ ಸಚಿವ ಬಿಸಿ ಪಾಟೀಲ್ ಕೂಡ ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಪೈಪೋಟಿಯ ಕಾರಣಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಹೈಕಮಾಂಡ್ ತೇಲಿಬಿಟ್ಟಿದೆ. ಇದು ಕೆಎಸ್ ಈಶ್ವರಪ್ಪ ಅವರ ಬಂಡಾಯಕ್ಕೆ ಕಾರಣವಾಗಿದೆ. ಟಿಕೆಟ್ ಸಿಕ್ಕಿಲ್ಲ ಎಂದರೆ ಕಾಂತೇಶ್ ಅವರನ್ನು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಾತುಗಳು ಕೇಳಿಬರುತ್ತಿವೆ. ಈ ಬಿಕ್ಕಟ್ಟನ್ನು ಹೈಕಮಾಂಡ್ ಯಾವ ರೀತಿ ಪರಿಹರಿಸುತ್ತದೆ ಎಂಬುದನ್ನ ನೋಡಬೇಕು..
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹಗೆ ಇಷ್ಟು ದಿನ ಟಿಕೆಟ್ ಸಿಗುತ್ತದೆ ಎಂದು ಹೇಳಲಾಗಿತ್ತು. ಆದರೆ ದಿಢೀರ್ ಯದುವೀರ್ ಕೃಷ್ಣದತ್ತ ಒಡೆಯರ್ ಅವರ ಹೆಸರು ಬಿಜೆಪಿ ಟಿಕೆಟ್ಗೆ ಕೇಳಿಬರುತ್ತಿದೆ. ಇದರಿಂದ ಬಿಜೆಪಿ ಕಾರ್ಯಕರ್ತರು ರಾಜ್ಯ ಬಿಜೆಪಿ ನಾಯಕರ ಮೇಲೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಬದಲಾಯಿಸುವ ಅನಿವಾರ್ಯತೆ ಏನಿದೆ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಆದರೆ, ಮೈಸೂರು ಜಿಲ್ಲೆಯ ಕೆಲವು ಪ್ರಮುಖ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಬೇರೆಯವರಿಗೆ ಟಿಕೆಟ್ ನೀಡೋಣ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಇದರ ಜೊತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಬಿಜೆಪಿ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಸಚಿವ ಡಾ ಕೆ ಸುಧಾಕರ್ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೇ ಜೆಡಿಎಸ್ ನಾಯಕರನ್ನು ಸಂಪರ್ಕಿಸಿ ಮಾತುಕತೆಯೂ ನಡೆಸಿದ್ದಾರೆ. ಆದರೆ ಸುಧಾಕರ್ಗೆ ಪ್ರಬಲ ಪೈಪೋಟಿ ಎಂಬಂತೆ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ ಅವರ ಪುತ್ರ ಅಲೋಕ್ ವಿಶ್ವನಾಥ್ ಅವರು ಕೂಡ ಬೈಕ್ ರ್ಯಾಲಿ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ತಮಗೆ ಟಿಕೆಟ್ ಮಿಸ್ ಆದರೆ ಕಾಂಗ್ರೆಸ್ಗೆ ಹೋಗುವ ಯೋಚನೆಯನ್ನು ಕೂಡ ಡಾ ಕೆ ಸುಧಾಕರ್ ಮಾಡಿದ್ದಾರಂತೆ. ಈ ಹಿನ್ನೆಲೆ ಈ ಕ್ಷೇತ್ರ ಕೂಡ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.
ಒಂದೆಡೆ ಈಗಿರುವ ಹಾಲಿ ಸಂಸದರಿಗೆ ಟಿಕೆಟ್ ನೀಡದಿದ್ರೆ ಬಂಡಾಯದ ಬಿಸಿ ಹೈಕಮಾಂಡ್ಗೆ ತಟ್ಟಲಿದೆ. ಮತ್ತೊಂದೆಡೆ ಕಾರ್ಯಕರ್ತರ ಅಸಮಾಧಾನ.. ಇದೆಲ್ಲವನ್ನು ಕೂಡ ಹೈಕಮಾಂಡ್ ಹೇಗೆ ನಿಭಾಯಿಸುತ್ತೆ ಅನ್ನೋದೆ ಸದ್ಯದ ಕುತೂಹಲ