Lok Sabha Eelections 2024; ಮಂಡ್ಯ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಚಾರ
1168 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದೆ. ಅಬ್ಬರದ ಪ್ರಚಾರಗಳು ಎಲ್ಲಾ ಪಕ್ಷಗಳಿಂದಲೂ ನಡೆಯುತ್ತಿದೆ, ಭಾರೀ ಕುತೂಹಲ ಮೂಡಿಸಿರೋ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ರಂಗೇರುತ್ತಿದೆ. ಇನ್ನಷ್ಟು ರಂಗೇರಲು ಗುರುವಾರ ಮಳವಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಚಾರದಲ್ಲಿ ತೊಡಗಿಲಿದ್ದಾರೆ. ಕಳೆದ ಬಾರಿ ಸುಮಲತಾ ಅಂಬರೀಷ್ ಪರ ಪ್ರಚಾರ ಮಾಡಿದ್ದರು ನಟ ದರ್ಶನ್. ಸುಮಲತಾ ಅಂಬರೀಷ್ ಲೋಕಸಭಾ ಕಣದಿಂದ ಹಿಂದೆ ಸರಿದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿದಿಲ್ಲ ಅನ್ನೋದು ಚರ್ಚೆಗೆ ಗ್ರಾಸವಾಗಿದೆ. ನಟ ದರ್ಶನ್ ಸುಮಲತಾ ಪರ ಯಾವಾಗಲೂ ನಿಂತಿದ್ದರು, ಮಂಡ್ಯದಲ್ಲಿ ಸಾಕಷ್ಟು ಬೆಳವಣಿಗೆ ನಡೆದ ನಂತರ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಮಾಡ್ತಾಯಿರೋದು ಎಲ್ಲರ ಕುತೂಹಲಕ್ಕೆ ಹಾಗೂ ಚರ್ಚೆಗೆ ಕಾರಣವಾಗಿದೆ. ಸಭೆಯಲ್ಲಿ ಅಮ್ಮ ಹೇಗೆ ಹೇಳ್ತಾರೋ ಹಾಗೆ ಕೇಳ್ತಿನಿ ಎಂದು ಕೂಡ ನಟ ದರ್ಶನ್ ಹೇಳಿದ್ದರು.