ನಮ್ಮ ಮಕ್ಕಳನ್ನಷ್ಟೇ ಅಲ್ಲ, ಎಲ್ಲ ಕಾಂಗ್ರೆಸ್ ಅಭ್ಯರ್ಥಿಗಳನ್ನೂ ಗೆಲ್ಲಿಸಬೇಕಿದೆ: ಸಚಿವ ರಾಮಲಿಂಗಾ ರೆಡ್ಡಿ
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ನಮ್ಮ ಮಕ್ಕಳನ್ನು ಗೆಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿಲ್ಲ. ಬದಲಾಗಿ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಗೆಲ್ಲಿಸಲು ಟಾಸ್ಕ್ ನೀಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿಜಯ ಕರ್ನಾಟಕ ವೆಬ್ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರದ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ, ಅನುದಾನ ತಾರತಮ್ಯ ಸೇರಿದಂತೆ ವಿವಿಧ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತೇವೆ. ಬೆಂಗಳೂರು ದಕ್ಷಿಣದಲ್ಲಿ ನಮಗೆ ಗೆಲ್ಲುವ ವಿಶ್ವಾಸ ಇದೆ ಎಂದರು. ಅವರ ಜೊತೆಗಿನ ಪೂರ್ಣ ಸಂದರ್ಶನದ ವಿಡಿಯೋ ಇಲ್ಲಿದೆ.