`ಎಚ್ಡಿಕೆ ಲೋಕಸಭೆಗೆ ಸ್ಪರ್ಧಿಸಿದ್ರೆ ಸ್ವಾಗತ’ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಚರ್ಚೆ ನಡೆಯುತ್ತಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಸ್ವಾಗತಿಸುತ್ತಿವೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು. “ಕುಮಾರಸ್ವಾಮಿ ಅವರು ಎಲ್ಲೇ ಸ್ಪರ್ಧೆ ಮಾಡಿದರು ನಾನು ಸ್ವಾಗತಿಸುತ್ತೇನೆ. ನಾನು ಅವರ ಅವರ ಪತ್ನಿ ವಿರುದ್ಧ ಸ್ಪರ್ಧಿಸಿದ್ದೆ. ನಾನು ರಾಜಕಾರಣಕ್ಕೆ ಬರಲು ಹಾಗೂ ಲೋಕಸಭೆಗೆ ಬರಲು ಕುಮಾರಸ್ವಾಮಿ ಅವರೇ ಕಾರಣ. ಎಲ್ಲವನ್ನು ನಾನು ಸ್ವಾಗತಿಸುತ್ತೇನೆ” ಎಂದರು.