ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ; ಸಿಐಡಿಗೆ ವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
1171 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ವಹಿಸಲಾಗಿದೆ. ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಗರ ಪಾಲಿಕೆ ಸದಸ್ಯೆ ನಿರಂಜನ ಹೀರೆಮಠ್ರವರ ಪುತ್ರಿ ನೇಹಾ ಕೊಲೆಯಾಗಿತ್ತು. ಪ್ರತಿಪಕ್ಷದವರು, ಹಲವಾರು ಸಂಘಟನೆಗಳು ಸೇರಿ ಕಾಲೇಜಿನ ವಿದ್ಯಾರ್ಥಿಗಳು ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದವು. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನೇಹಾ ಹತ್ಯೆ ಕೇಸ್ನ್ನು ಸಿಐಡಿಗೆ ವಹಿಸಿದ್ದಾರೆ. ನೇಹಾ ಹತ್ಯೆ ಬಳಿಕ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ನೀಡಿ ಈ ಕೇಸ್ಅನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದರು. ಇನ್ನೂ ಈ ಪ್ರಕರಣ ಸಂಬಂಧ ಸೋಮವಾರ ಹುಬ್ಬಳ್ಳಿ ಧಾರವಾಡದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಬಂದ್ಗೆ ಕರೆ ನೀಡಿದ್ದರು.