ಕ್ಷೇತ್ರ ಹಂಚಿಕೆ ಮುನ್ನವೇ ಜೆಡಿಎಸ್ಗೆ ಬಿಗ್ ಶಾಕ್; ಮಂಡ್ಯ ಕಣದಿಂದ ನಿಖಿಲ್ ಹಿಂದಕ್ಕೆ..!
1113 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಮಂಡ್ಯ ಲೋಕಸಭಾ ಕ್ಷೇತ್ರ… ಸಾಕಷ್ಟು ಸಸ್ಪೆನ್ಸ್.. ಕುತೂಹಲ ಉಳಿಸಿಕೊಂಡ ಕ್ಷೇತ್ರ.. ಅಭ್ಯರ್ಥಿಗಳ ಆಯ್ಕೆ ಅಂತು ಕಗ್ಗಂಟು.. ಮೂರು ಪಕ್ಷಗಳಲ್ಲೂ ಪ್ರಭಾವಿ ನಾಯಕರೇ ಟಿಕೆಟ್ಗೆ ಲಾಬಿ ಇಟ್ಟಿದ್ದರಿಂದ ಯಾರನ್ನ ಆಯ್ಕೆ ಮಾಡಬೇಕು ಅನ್ನೋದೇ ಗೊಂದಲ.. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಎರಡು ಪಕ್ಷಗಳು ಕೂಡ ಇಕ್ಕಟ್ಟಿಗೆ ಸಿಲುಕಿಕೊಂಡಿವೆ.. ಒಂದು ಕಡೆ ಮಂಡ್ಯವನ್ನು ಬಿಜೆಪಿ ಬಿಟ್ಟುಕೊಡುವಂತೆ ಕೇಳಿದ್ರೆ ಇತ್ತ ಜೆಡಿಎಸ್ ತಮ್ಮ ಭದ್ರಕೋಟೆಯನ್ನು ಬಿಟ್ಟುಕೊಡಲು ಮನಸ್ಸಿಲ್ಲ.. ಒಂದು ಸುಮಲತಾ ಟಿಕೆಟ್ಗಾಗಿ ಈಗಾಗಲೇ ದೆಹಲಿ ಮಟ್ಟದಲ್ಲಿ ಲಾಬಿ ಶುರುಮಾಡಿದ್ದಾರೆ, ಇದು ಜೆಡಿಎಸ್ಗೆ ಚಿಂತೆ ಶುರುಮಾಡಿದೆ.. ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕೆಂದು ಜೆಡಿಎಸ್ ಪ್ಲಾನ್ ಮಾಡಿಕೊಂಡಿತ್ತು, ಆದ್ರೆ ಸ್ವತಃ ನಿಖಿಲ್ ಕುಮಾರಸ್ವಾಮಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ, ಇದು ಜೆಡಿಎಸ್ಗೆ ದೊಡ್ಡ ತಲೆನೋವಾಗಿದೆ..
ಹೌದು.. ನಿಖಿಲ್ ಕುಮಾರಸ್ವಾಮಿ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವುದರ ಮೂಲಕ ಮಂಡ್ಯ ಲೋಕಸಭಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಹಾಗಿದ್ರೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಆಯ್ಕೆ ಮತ್ತೆ ದಳಪತಿಗಳಿಗೆ ಕಗ್ಗಂಟಾಗಿದೆ..
ಮಂಡ್ಯ ಲೋಕಸಭಾ ಅಖಾಡದಿಂದ ನಿಖಿಲ್ ಹಿಂದೆ ಸರಿದ ಬೆನ್ನಲ್ಲೇ ದಳಪತಿಗಳು ಆಕ್ಟಿವ್ ಆಗಿದ್ದು, ಹೆಚ್ಡಿ ಕುಮಾರಸ್ವಾಮಿ ಬಳಿ ಅದೊಂದು ಡಿಮ್ಯಾಂಡ್ ಮಾಡ್ತಿದ್ದಾರೆ. ಹೌದು.. ಕುಮಾರಸ್ವಾಮಿ ಅವರೇ ಅಭ್ಯರ್ಥಿ ಆಗಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಒಂದು ನೀವು ಬನ್ನಿ ಇಲ್ಲ ನಿಖಿಲ್ ಮನವೊಲಿಸಿ ಎಂದು ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ. ಇತ್ತ.. ಮಂಡ್ಯದಿಂದ ಮಾಜಿ ಸಚಿವರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್ಗೌಡ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಮೂವರಲ್ಲಿ ಒಬ್ಬರು ಸ್ಪರ್ಧೆ ಮಾಡಿ ನಾವು ಇರ್ತೀವಿ ಎಂದು ಕುಮಾರಸ್ವಾಮಿ ಅವರು ಹೇಳುವ ಸಾಧ್ಯತೆಯೂ ಇದೆ. ಇಲ್ಲ ನಿಖಿಲ್ ಮನವೊಲಿಸಲು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಅಥವಾ ತಾವೇ ಮಂಡ್ಯ ಅಖಾಡಕ್ಕೆ ಪ್ರವೇಶ ಮಾಡ್ತಾರಾ ಎಂಬುವುದನ್ನು ಕಾದು ನೋಡಬೇಕಿದೆ.
ಯಾವುದೇ ಒತ್ತಡ ಬಂದರೂ ನಾನೂ ಸ್ಪರ್ಧಿಸಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸಂದೇಶ ರವಾನಿಸಿ ಆಗಿದೆ. ಇದರ ಬೆನ್ನಲ್ಲೆ ಪರ ವಿರೋಧ ಚರ್ಚೆಗಳು ಶುರುವಾಗಿದೆ. ನಿಖಿಲ್ ಸ್ಪರ್ಧೆಗೆ ಒಪ್ಪದಿರಲು ಕಾರಣಗಳೇನು?, ನಿಖಿಲ್ ನಿರ್ಧಾರದ ಹಿಂದೆ ರಾಜಕೀಯ ಭವಿಷ್ಯದ ಲೆಕ್ಕಾಚಾರ ಇದಿಯಾ? ಎನ್ನಲಾಗುತ್ತಿದೆ. ಈಗಾಗಲೇ ಎರಡು ಸೋಲು ಕಂಡಿರುವ ನಿಖಿಲ್ಗೆ ಮತ್ತೆ ಸೋಲಾದ್ರೆ ರಾಜಕೀಯ ಭವಿಷ್ಯ ಕಮರುವ ಚಿಂತೆ ಇದೆ. ನಿಖಿಲ್ ಸ್ಪರ್ಧೆಯೇ ವಿರೋಧಿಗಳಿಗೆ ಚುನಾವಣಾ ಅಸ್ತ್ರವಾಗುವ ಸಾಧ್ಯತೆ ಇದೆ. ಅವಕಾಶವಾದಿ ರಾಜಕಾರಣಿ ಎಂದು ಹಣೆಪಟ್ಟಿ ಕಟ್ಟುವ ಭೀತಿ ಇದೆ. ಮಂಡ್ಯ ಸೋಲಿನ ಬಳಿಕ ರಾಮನಗರ ಸೋಲಿನಿಂದ ಮತ್ತೆ ಮಂಡ್ಯಕ್ಕೆ ಬಂದ್ರು ಎಂದು ಅಪಪ್ರಚಾರ ಅಲ್ಲದೇ ಹೊರಗಡೆಯಿಂದ ಅಭ್ಯರ್ಥಿ ಕರೆತಂದರು ಎಂದು ಮತ್ತೆ ಕಳೆದ ಬಾರಿಯಂತೆ ಸ್ವಾಭಿಮಾನದ ಕಿಚ್ಚು ಹಚ್ಚುವ ಆತಂಕ ವಿದೆ.
ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಸ್ಪರ್ಧೆ ನಿರಾಕರಿಸಿದ ಹಿನ್ನೆಲೆ ಇಂದು ದೊಡ್ಡಗೌಡರ ಮನೆಯಲ್ಲಿ ಮಂಡ್ಯ ಕ್ಷೇತ್ರದ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಿಖಿಲ್ ಅಥವಾ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸುವಂತೆ ಒತ್ತಾಯ ಮಾಡಲಿದ್ದಾರೆ. ಸದ್ಯ ಮಂಡ್ಯ ಸ್ಪರ್ಧೆಯನ್ನು ನಿಖಿಲ್ ನಿರಾಕರಿಸಿದ್ದು ಇಂದಿನ ಸಭೆಯಲ್ಲಿ ಜೆಡಿಎಸ್ ನಾಯಕರು ಈ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ನಿಖಿಲ್ ಅವರನ್ನು ಮನವೊಲಿಸಿ ಸ್ಪರ್ಧಿಸುಂತೆ ತಿಳಿಸಿ. ಇಲ್ಲ ಕುಮಾರಸ್ವಾಮಿ ಅವರನ್ನು ನಿಲ್ಲಲು ಸೂಚನೆ ನೀಡಿ. ಇಬ್ಬರಲ್ಲಿ ಒಬ್ಬರು ಮಂಡ್ಯ ಅಭ್ಯರ್ಥಿಯಾಗಬೇಕು ಎಂದು ಹೆಚ್ಡಿಡಿ ಅವರಿಗೆ ಮನವಿ ಮಾಡಲಿದ್ದಾರೆ. ಹೀಗಾಗಿ ಇಂದಿನ ಸಭೆ ಸಾಕಷ್ಟು ಮಹತ್ವ ಪಡೆದಿದೆ.
ಹೌದು.. ನಿಖಿಲ್ ಕುಮಾರಸ್ವಾಮಿ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವುದರ ಮೂಲಕ ಮಂಡ್ಯ ಲೋಕಸಭಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಹಾಗಿದ್ರೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಆಯ್ಕೆ ಮತ್ತೆ ದಳಪತಿಗಳಿಗೆ ಕಗ್ಗಂಟಾಗಿದೆ..
ಮಂಡ್ಯ ಲೋಕಸಭಾ ಅಖಾಡದಿಂದ ನಿಖಿಲ್ ಹಿಂದೆ ಸರಿದ ಬೆನ್ನಲ್ಲೇ ದಳಪತಿಗಳು ಆಕ್ಟಿವ್ ಆಗಿದ್ದು, ಹೆಚ್ಡಿ ಕುಮಾರಸ್ವಾಮಿ ಬಳಿ ಅದೊಂದು ಡಿಮ್ಯಾಂಡ್ ಮಾಡ್ತಿದ್ದಾರೆ. ಹೌದು.. ಕುಮಾರಸ್ವಾಮಿ ಅವರೇ ಅಭ್ಯರ್ಥಿ ಆಗಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಒಂದು ನೀವು ಬನ್ನಿ ಇಲ್ಲ ನಿಖಿಲ್ ಮನವೊಲಿಸಿ ಎಂದು ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ. ಇತ್ತ.. ಮಂಡ್ಯದಿಂದ ಮಾಜಿ ಸಚಿವರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್ಗೌಡ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಮೂವರಲ್ಲಿ ಒಬ್ಬರು ಸ್ಪರ್ಧೆ ಮಾಡಿ ನಾವು ಇರ್ತೀವಿ ಎಂದು ಕುಮಾರಸ್ವಾಮಿ ಅವರು ಹೇಳುವ ಸಾಧ್ಯತೆಯೂ ಇದೆ. ಇಲ್ಲ ನಿಖಿಲ್ ಮನವೊಲಿಸಲು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಅಥವಾ ತಾವೇ ಮಂಡ್ಯ ಅಖಾಡಕ್ಕೆ ಪ್ರವೇಶ ಮಾಡ್ತಾರಾ ಎಂಬುವುದನ್ನು ಕಾದು ನೋಡಬೇಕಿದೆ.
ಯಾವುದೇ ಒತ್ತಡ ಬಂದರೂ ನಾನೂ ಸ್ಪರ್ಧಿಸಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸಂದೇಶ ರವಾನಿಸಿ ಆಗಿದೆ. ಇದರ ಬೆನ್ನಲ್ಲೆ ಪರ ವಿರೋಧ ಚರ್ಚೆಗಳು ಶುರುವಾಗಿದೆ. ನಿಖಿಲ್ ಸ್ಪರ್ಧೆಗೆ ಒಪ್ಪದಿರಲು ಕಾರಣಗಳೇನು?, ನಿಖಿಲ್ ನಿರ್ಧಾರದ ಹಿಂದೆ ರಾಜಕೀಯ ಭವಿಷ್ಯದ ಲೆಕ್ಕಾಚಾರ ಇದಿಯಾ? ಎನ್ನಲಾಗುತ್ತಿದೆ. ಈಗಾಗಲೇ ಎರಡು ಸೋಲು ಕಂಡಿರುವ ನಿಖಿಲ್ಗೆ ಮತ್ತೆ ಸೋಲಾದ್ರೆ ರಾಜಕೀಯ ಭವಿಷ್ಯ ಕಮರುವ ಚಿಂತೆ ಇದೆ. ನಿಖಿಲ್ ಸ್ಪರ್ಧೆಯೇ ವಿರೋಧಿಗಳಿಗೆ ಚುನಾವಣಾ ಅಸ್ತ್ರವಾಗುವ ಸಾಧ್ಯತೆ ಇದೆ. ಅವಕಾಶವಾದಿ ರಾಜಕಾರಣಿ ಎಂದು ಹಣೆಪಟ್ಟಿ ಕಟ್ಟುವ ಭೀತಿ ಇದೆ. ಮಂಡ್ಯ ಸೋಲಿನ ಬಳಿಕ ರಾಮನಗರ ಸೋಲಿನಿಂದ ಮತ್ತೆ ಮಂಡ್ಯಕ್ಕೆ ಬಂದ್ರು ಎಂದು ಅಪಪ್ರಚಾರ ಅಲ್ಲದೇ ಹೊರಗಡೆಯಿಂದ ಅಭ್ಯರ್ಥಿ ಕರೆತಂದರು ಎಂದು ಮತ್ತೆ ಕಳೆದ ಬಾರಿಯಂತೆ ಸ್ವಾಭಿಮಾನದ ಕಿಚ್ಚು ಹಚ್ಚುವ ಆತಂಕ ವಿದೆ.
ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಸ್ಪರ್ಧೆ ನಿರಾಕರಿಸಿದ ಹಿನ್ನೆಲೆ ಇಂದು ದೊಡ್ಡಗೌಡರ ಮನೆಯಲ್ಲಿ ಮಂಡ್ಯ ಕ್ಷೇತ್ರದ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಿಖಿಲ್ ಅಥವಾ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸುವಂತೆ ಒತ್ತಾಯ ಮಾಡಲಿದ್ದಾರೆ. ಸದ್ಯ ಮಂಡ್ಯ ಸ್ಪರ್ಧೆಯನ್ನು ನಿಖಿಲ್ ನಿರಾಕರಿಸಿದ್ದು ಇಂದಿನ ಸಭೆಯಲ್ಲಿ ಜೆಡಿಎಸ್ ನಾಯಕರು ಈ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ನಿಖಿಲ್ ಅವರನ್ನು ಮನವೊಲಿಸಿ ಸ್ಪರ್ಧಿಸುಂತೆ ತಿಳಿಸಿ. ಇಲ್ಲ ಕುಮಾರಸ್ವಾಮಿ ಅವರನ್ನು ನಿಲ್ಲಲು ಸೂಚನೆ ನೀಡಿ. ಇಬ್ಬರಲ್ಲಿ ಒಬ್ಬರು ಮಂಡ್ಯ ಅಭ್ಯರ್ಥಿಯಾಗಬೇಕು ಎಂದು ಹೆಚ್ಡಿಡಿ ಅವರಿಗೆ ಮನವಿ ಮಾಡಲಿದ್ದಾರೆ. ಹೀಗಾಗಿ ಇಂದಿನ ಸಭೆ ಸಾಕಷ್ಟು ಮಹತ್ವ ಪಡೆದಿದೆ.