ಜಂತರ್ ಮಂತರ್ನಲ್ಲಿ ದಿಲ್ಲಿ ಪೊಲೀಸರಿಂದ ಕುಸ್ತಿಪಟುಗಳ ಮೇಲೆ ಹಲ್ಲೆ, ನಿಂದನೆ ಆರೋಪ
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಹೊಸದಿಲ್ಲಿ: ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಗೂ ದಿಲ್ಲಿ ಪೊಲೀಸರ ನಡುವೆ ಬುಧವಾರ ರಾತ್ರಿ ಜಟಾಪಟಿ ನಡೆದಿದೆ. ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ನಲ್ಲಿ ಕಳೆದ 12 ದಿನಗಳಿಂದ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿರುವ ಭಾರತದ ಪ್ರಮುಖ ಕುಸ್ತಿಪಟುಗಳು ಜಂತರ್ಮಂತರ್ನಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ದಿಲ್ಲಿ ಪೊಲೀಸರು ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ''ದಿಲ್ಲಿ ಪೊಲೀಸರು ಪಡೆಯ ಬಲವನ್ನು ಪ್ರಯೋಗಿಸುವ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನೆ ನಡೆಸಲು ನಮಗೆ ಇಡೀ ದೇಶದ ಬೆಂಬಲ ಬೇಕಾಗಿದೆ. ಇಲ್ಲಿ ಮಹಿಳೆಯರನ್ನು ಪೊಲೀಸರು ನಿಂದಿಸುತ್ತಿದ್ದಾರೆ, ದೇಶದ ಜನರು ದಿಲ್ಲಿಯತ್ತ ಬರಬೇಕು'' ಎಂದು ಕುಸ್ತಿಪಟು ಬಜರಂಗ್ ಪೂನಿಯಾ ಕೋರಿದ್ದಾರೆ.
ಪೊಲೀಸರು ಮತ್ತು ಕುಸ್ತಿಪಟುಗಳ ಜಟಾಪಟಿಯ ಬಳಿಕ ಜಂತರ್ ಮಂತರ್ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿನೇಶ್ ಫೋಗಟ್, ಸಾಕ್ಷಿ ಮಲ್ಲಿಕ್, ಬಜರಂಗ್ ಪೂನಿಯಾ ಸೇರಿದಂತೆ ದೇಶದ ಹಲವು ಪ್ರಮುಖ ಕುಸ್ತಿಪಟುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪೊಲೀಸರು ಹಲ್ಲೆ ನಡೆಸಿದ್ದಾರೆ, ಕೆಟ್ಟ ಪದಗಳಿಂದ ನಿಂದಿಸಿರುವುದಾಗಿ ಆರೋಪಿಸಲಾಗಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿರುವ ಭಾರತದ ಪ್ರಮುಖ ಕುಸ್ತಿಪಟುಗಳು ಜಂತರ್ಮಂತರ್ನಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ದಿಲ್ಲಿ ಪೊಲೀಸರು ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ''ದಿಲ್ಲಿ ಪೊಲೀಸರು ಪಡೆಯ ಬಲವನ್ನು ಪ್ರಯೋಗಿಸುವ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನೆ ನಡೆಸಲು ನಮಗೆ ಇಡೀ ದೇಶದ ಬೆಂಬಲ ಬೇಕಾಗಿದೆ. ಇಲ್ಲಿ ಮಹಿಳೆಯರನ್ನು ಪೊಲೀಸರು ನಿಂದಿಸುತ್ತಿದ್ದಾರೆ, ದೇಶದ ಜನರು ದಿಲ್ಲಿಯತ್ತ ಬರಬೇಕು'' ಎಂದು ಕುಸ್ತಿಪಟು ಬಜರಂಗ್ ಪೂನಿಯಾ ಕೋರಿದ್ದಾರೆ.
ಪೊಲೀಸರು ಮತ್ತು ಕುಸ್ತಿಪಟುಗಳ ಜಟಾಪಟಿಯ ಬಳಿಕ ಜಂತರ್ ಮಂತರ್ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿನೇಶ್ ಫೋಗಟ್, ಸಾಕ್ಷಿ ಮಲ್ಲಿಕ್, ಬಜರಂಗ್ ಪೂನಿಯಾ ಸೇರಿದಂತೆ ದೇಶದ ಹಲವು ಪ್ರಮುಖ ಕುಸ್ತಿಪಟುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪೊಲೀಸರು ಹಲ್ಲೆ ನಡೆಸಿದ್ದಾರೆ, ಕೆಟ್ಟ ಪದಗಳಿಂದ ನಿಂದಿಸಿರುವುದಾಗಿ ಆರೋಪಿಸಲಾಗಿದೆ.