ಕಾಂಗ್ರೆಸ್ ನಾಯಕರ ಮಕ್ಕಳಿಗೆ ಟಿಕೆಟ್, ಹೊಸ ಮುಖಗಳ ಮೂಲಕ ಲೋಕಸಭಾ ಕಣದಲ್ಲಿ ಪ್ರಯೋಗ
1331 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬಹುನಿರೀಕ್ಷಿತ ಕಾಂಗ್ರೆಸ್ನ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಮಾರ್ಚ್ 8ರಂದು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರಲ್ಲಿ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗಿತ್ತು. ಉಳಿದ 21 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಕಾಂಗ್ರೆಸ್ ಪ್ರಕಟಿಸಿದೆ. ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ಸಿಕ್ಕಿದೆ. ಈ ಹೊಸಬರಲ್ಲಿ ಹೆಚ್ಚಿನವರು ರಾಜಕೀಯ ಕುಟುಂಬದ ಹಿನ್ನೆಲೆ ಇರೋರೆ.
ಕಾಂಗ್ರೆಸ್ನ ಎರಡನೇ ಪಟ್ಟಿಯಲ್ಲಿ ರಾಜ್ಯದಿಂದ 8 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ 5 ಮಂದಿ ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಯುವಜನರಿಗೂ ಅವಕಾಶ ಸಿಕ್ಕಿದ್ದು, 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ಕು ಅಭ್ಯರ್ಥಿಗಳಿದ್ದಾರೆ. ಸಮರ್ಥರು ಮತ್ತು ಗೆಲುವಿನ ಮಾನದಂಡದ ಸೂತ್ರದಡಿ ಹೆಚ್ಚಿನ ಕ್ಷೇತ್ರಗಳಲ್ಲಿ ಸಚಿವರನ್ನು ಕಣಕ್ಕಿಳಿಸುವ ಹೈಕಮಾಂಡ್ನ ಯತ್ನ ಕೈಗೂಡಿಲ್ಲ. ಬದಲಿಗೆ ಸಚಿವರ ಮಕ್ಕಳು, ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಈ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಸಚಿವರ ಹೆಗಲಿಗೆ ಹಾಕಲಾಗಿದೆ.
ಮೊದಲ ಪಟ್ಟಿಯಲ್ಲಿ ಬಿಜಾಪುರದಿಂದ ಎಚ್.ಆರ್. ಅಲಗೂರು, ಹಾವೇರಿಯಿಂದ ಆನಂದಸ್ವಾಮಿ ಗಡ್ಡದೇವರ ಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ಹಾಸನದಿಂದ ಶ್ರೇಯಸ್ ಪಟೇಲ್, ತುಮಕೂರಿನಿಂದ ಎಸ್.ಪಿ. ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಈಗ ಎರಡನೇ ಪಟ್ಟಿ ಬಿಡುಗಡೆಯಾದರೂ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗುವುದು ಬಾಕಿಯಿದೆ.
ಈ ಬಾರಿ ಅಭ್ಯರ್ಥಿಗಳ ಆಯ್ಕೆಗೆ ಗೆಲುವಿನ ಮಾನದಂಡವನ್ನೇ ಮುಖ್ಯವಾಗಿ ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಮಣೆ ಹಾಕಲಾಗಿದೆ. ಸಚಿವೆ ಲಕ್ಷ್ಮೇ ಹೆಬ್ಬಾಳಕರ್ ಪುತ್ರ ಮೃಣಾಲ್ ಅವರಿಗೆ ಬೆಳಗಾವಿಯಿಂದ ಟಿಕೆಟ್ ಘೋಷಣೆಯಾಗಿದೆ. ಪಕ್ಕದ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಅವರಿಗೆ ಅವಕಾಶ ನೀಡಲಾಗಿದೆ. ವೀಣಾ ಕಾಶಪ್ಪನವರ್ ಕಣ್ಣೀರು ಮತ್ತು ಬೆಂಬಲಿಗರ ಆಕ್ರೋಶದ ನಡುವೆಯೂ ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್ನಿಂದ ಟಿಕೆಟ್ ಗಿಟ್ಟಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ರಾಜಶೇಖರ ಪಾಟೀಲ್ ಅವರಿಗೆ ನಿರಾಶೆಯಾಗಿದೆ.
ಕಾಂಗ್ರೆಸ್ನ ಎರಡನೇ ಪಟ್ಟಿಯಲ್ಲಿ ರಾಜ್ಯದಿಂದ 8 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ 5 ಮಂದಿ ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಯುವಜನರಿಗೂ ಅವಕಾಶ ಸಿಕ್ಕಿದ್ದು, 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ಕು ಅಭ್ಯರ್ಥಿಗಳಿದ್ದಾರೆ. ಸಮರ್ಥರು ಮತ್ತು ಗೆಲುವಿನ ಮಾನದಂಡದ ಸೂತ್ರದಡಿ ಹೆಚ್ಚಿನ ಕ್ಷೇತ್ರಗಳಲ್ಲಿ ಸಚಿವರನ್ನು ಕಣಕ್ಕಿಳಿಸುವ ಹೈಕಮಾಂಡ್ನ ಯತ್ನ ಕೈಗೂಡಿಲ್ಲ. ಬದಲಿಗೆ ಸಚಿವರ ಮಕ್ಕಳು, ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಈ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಸಚಿವರ ಹೆಗಲಿಗೆ ಹಾಕಲಾಗಿದೆ.
ಮೊದಲ ಪಟ್ಟಿಯಲ್ಲಿ ಬಿಜಾಪುರದಿಂದ ಎಚ್.ಆರ್. ಅಲಗೂರು, ಹಾವೇರಿಯಿಂದ ಆನಂದಸ್ವಾಮಿ ಗಡ್ಡದೇವರ ಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ಹಾಸನದಿಂದ ಶ್ರೇಯಸ್ ಪಟೇಲ್, ತುಮಕೂರಿನಿಂದ ಎಸ್.ಪಿ. ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಈಗ ಎರಡನೇ ಪಟ್ಟಿ ಬಿಡುಗಡೆಯಾದರೂ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗುವುದು ಬಾಕಿಯಿದೆ.
ಈ ಬಾರಿ ಅಭ್ಯರ್ಥಿಗಳ ಆಯ್ಕೆಗೆ ಗೆಲುವಿನ ಮಾನದಂಡವನ್ನೇ ಮುಖ್ಯವಾಗಿ ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಮಣೆ ಹಾಕಲಾಗಿದೆ. ಸಚಿವೆ ಲಕ್ಷ್ಮೇ ಹೆಬ್ಬಾಳಕರ್ ಪುತ್ರ ಮೃಣಾಲ್ ಅವರಿಗೆ ಬೆಳಗಾವಿಯಿಂದ ಟಿಕೆಟ್ ಘೋಷಣೆಯಾಗಿದೆ. ಪಕ್ಕದ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಅವರಿಗೆ ಅವಕಾಶ ನೀಡಲಾಗಿದೆ. ವೀಣಾ ಕಾಶಪ್ಪನವರ್ ಕಣ್ಣೀರು ಮತ್ತು ಬೆಂಬಲಿಗರ ಆಕ್ರೋಶದ ನಡುವೆಯೂ ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್ನಿಂದ ಟಿಕೆಟ್ ಗಿಟ್ಟಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ರಾಜಶೇಖರ ಪಾಟೀಲ್ ಅವರಿಗೆ ನಿರಾಶೆಯಾಗಿದೆ.