Lok Sabha Elections 2024 : ಸಿಎಂ ಸಿದ್ದರಾಮಯ್ಯ ಆಪ್ತ ಬಿಜೆಪಿಗೆ ಸೇರ್ಪಡೆ, ಕಾಂಗ್ರೆಸ್ಗೆ ಬಿಗ್ ಶಾಕ್..!
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಬಿಗ್ ಆಪರೇಷನ್ ಮಾಡಿದೆ. ಸಿದ್ದರಾಮಯ್ಯ ಆಪ್ತನಿಗೆ ಬಿಜೆಪಿ ಗಾಳ ಹಾಕಿ ಕಾಂಗ್ರೆಸ್ಗೆ ಶಾಕ್ ನೀಡಿದೆ. ಇಂದು ಅಥವಾ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸೇರೋದಾಗಿ ಸಿದ್ದರಾಮಯ್ಯ ಆಪ್ತ ಗುರುಪಾದಸ್ವಾಮಿ ಹೇಳಿಕೊಂಡಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಪಾದಸ್ವಾಮಿ ಟಿಕೆಟ್ ಸಿಗದ ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಗೆ ಕೃಷ್ಣರಾಜ ಕ್ಷೇತ್ರದಿಂದ ಟಿಕೆಟ್ ಕೇಳಿದ್ದೆ ಆದರೆ ನೀಡಲಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ವರುಣಾ ಕ್ಷೇತ್ರದ ಪ್ರಬಲ ಲಿಂಗಾಯತ ಸಮುದಾಯದ ನಾಯಕರಾಗಿರೋ ಗುರುಪಾದಸ್ವಾಮಿ ಬಿಜೆಪಿ ಸೇರ್ಪಡೆಯಿಂದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಆಘಾತ ಉಂಟುಮಾಡಿದೆ. ಕಾಂಗ್ರೆಸ್ನಲ್ಲಿ ಯಾವುದೇ ಹುದ್ದೆ ನೀಡಿಲ್ಲ ಎಂಬ ಕಾರಣ ನೀಡಿರೋ ಗುರುಪಾದಸ್ವಾಮಿ ಸಿದ್ದರಾಮಯ್ಯ ನನಗೆ ಏನೂ ಕೊಟ್ಟಿಲ್ಲ ವರುಣಾದಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲಿಸಿದ್ದೇವು ಆದರೆ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದವರಿಗೆ ಮಣೆ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.