ಲೋಕ ಚುನಾವಣೆಗೆ ಅಸ್ತ್ರ ತೂರಿ ಬಿಟ್ಟ ಕಾಂಗ್ರೆಸ್-ಬಿಜೆಪಿ ; ಕೇಸರಿಗೆ ಜೈ ಎಂದ ದಳಪತಿಗಳು!
1136 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಲೋಕಸಭೆ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಇವೆ. ರಾಜ್ಯದಲ್ಲೂ ಲೋಕ ಸಮರವನ್ನು ಎದುರಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಸಿದ್ದತೆಗಳನ್ನು ನಡೆಸುತ್ತಿದೆ. ಕಾಂಗ್ರೆಸ್ಗೆ ಗ್ಯಾರಂಟಿ ಯೋಜನೆಗಳು ಲೋಕ ಚುನಾವಣೆಯಲ್ಲಿ ಕೈ ಹಿಡಿಯುವ ನಂಬಿಕೆಯಲ್ಲಿದ್ದರೆ, ಕಮಲ ಹಾಗೂ ದಳಪತಿಗಳ ಮೈತ್ರಿಕೂಟ ರಾಮ, ಹನುಮ ಹಾಗೂ ಹಿಂದುತ್ವದ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿವೆ.
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಕೊಟ್ಟಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದೆ. ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಉಚಿತ ಅಕ್ಕಿ, ಮಹಿಳೆಯರಿಗೆ 2000 ರೂಪಾಯಿ ಹಾಗೂ ಪದವೀಧರರಿಗೆ ನಿರುದ್ಯೋಗ ಭತ್ಯೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಮುಂದಾಗಿದೆ. ಇದಕ್ಕಾಗಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ಚುನಾವಣೆಯಲ್ಲಿ ಗ್ಯಾರಂಟಿ ವಿಚಾರಕ್ಕೆ ಹೆಚ್ಚಿನ ಪ್ರಚಾರ ನೀಡಲಿದೆ.
ಇನ್ನು ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಕಡೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಅದರ ಪ್ರಚಾರವನ್ನು ಪಡೆಯುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಬಿಂಬಿಸಲು ಕಾಂಗ್ರೆಸ್ ಹೊರಟಿದೆ.
ಗ್ಯಾರಂಟಿ ಯೋಜನೆಗಳು ತಲುಪಿಲ್ಲ ಎಂದು ಕೇಳಿಬರುತ್ತಿರುವ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರವಾಗಿ ರಾಜ್ಯಾದ್ಯಂತ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳುವ ಮೂಲಕ ತಿರುಗೇಟು ನೀಡಲು ಮುಂದಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ.
ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಚುನಾವಣೆಯನ್ನು ಎದುರಿಸಿದರೆ ಬಿಜೆಪಿ ಹಾಗೂ ಜೆಡಿಎಸ್ ಇದೀಗ ಹಿಂದುತ್ವದ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಮುಂದಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲೂ ವ್ಯವಸ್ಥಿತವಾಗಿ ಪ್ರಚಾರ ಹಾಗೂ ಸಂಘಟನೆ ಮಾಡುವ ಮೂಲಕ ಭಾವನಾತ್ಮಕವಾಗಿ ಜನರ ಗಮನವನ್ನು ಬಿಜೆಪಿ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಇದೀಗ ರಾಜ್ಯದಲ್ಲಿ ಹಿಂದುತ್ವದ ಒಂದೊಂದೇ ಅಸ್ತ್ರಗಳನ್ನು ಪ್ರಯೋಗ ಮಾಡಲು ಬಿಜೆಪಿ ನಿರ್ಧಾರ ಮಾಡಿದೆ. ಅದಕ್ಕೆ ಪೂರಕ ಎಂಬಂತೆ ಮಂಡ್ಯದಲ್ಲಿ ಹನುಮ ಧ್ವಜದ ಅಸ್ತ್ರ ಬಿಜೆಪಿಗೆ ಸಿಕ್ಕಿದೆ. ಈ ಹೋರಾಟಕ್ಕೆ ಜೆಡಿಎಸ್ ಕೂಡಾ ಸಾಥ್ ನೀಡಿದೆ.
ಹೆಗಲ ಮೇಲೆ ರೈತರ ಹಸಿರು ಶಾಲು ಹಾಕಿಕೊಳ್ಳುತ್ತಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಇದೀಗ ಕೇಸರಿ ಶಾಲು ಹಾಕಿಕೊಳ್ಳಲು ಶುರುಮಾಡಿಕೊಂಡಿದ್ದಾರೆ. ಸ್ವತಃ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿಕೊಳ್ಳುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಹಿಂದುತ್ವದ ಪ್ರಯೋಗಕ್ಕೆ ತಾವೂ ಸಾಥ್ ನೀಡುತ್ತಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ ಪಾಲಿಗೆ ಗ್ಯಾರಂಟಿ ಅಸ್ತ್ರವಾದರೆ ಹಿಂದುತ್ವ ಬಿಜೆಪಿ ಹಾಗೂ ದಳಪತಿಗಳ ಪಾಲಿನ ಅಸ್ತ್ರವಾಗಿದೆ. ಇದನ್ನು ಈ ಮೂರು ರಾಜಕೀಯ ಪಕ್ಷಗಳು ಹೇಗೆ ಪ್ರಯೋಗ ಮಾಡುತ್ತವೆ ಹಾಗೂ ಮತದಾರರು ಯಾವುದನ್ನು ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಚುನಾವಣಾ ಫಲಿತಾಂಶ ತಿಳಿಸಲಿದೆ.
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಕೊಟ್ಟಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದೆ. ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಉಚಿತ ಅಕ್ಕಿ, ಮಹಿಳೆಯರಿಗೆ 2000 ರೂಪಾಯಿ ಹಾಗೂ ಪದವೀಧರರಿಗೆ ನಿರುದ್ಯೋಗ ಭತ್ಯೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಮುಂದಾಗಿದೆ. ಇದಕ್ಕಾಗಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ಚುನಾವಣೆಯಲ್ಲಿ ಗ್ಯಾರಂಟಿ ವಿಚಾರಕ್ಕೆ ಹೆಚ್ಚಿನ ಪ್ರಚಾರ ನೀಡಲಿದೆ.
ಇನ್ನು ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಕಡೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಅದರ ಪ್ರಚಾರವನ್ನು ಪಡೆಯುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಬಿಂಬಿಸಲು ಕಾಂಗ್ರೆಸ್ ಹೊರಟಿದೆ.
ಗ್ಯಾರಂಟಿ ಯೋಜನೆಗಳು ತಲುಪಿಲ್ಲ ಎಂದು ಕೇಳಿಬರುತ್ತಿರುವ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರವಾಗಿ ರಾಜ್ಯಾದ್ಯಂತ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳುವ ಮೂಲಕ ತಿರುಗೇಟು ನೀಡಲು ಮುಂದಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ.
ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಚುನಾವಣೆಯನ್ನು ಎದುರಿಸಿದರೆ ಬಿಜೆಪಿ ಹಾಗೂ ಜೆಡಿಎಸ್ ಇದೀಗ ಹಿಂದುತ್ವದ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಮುಂದಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲೂ ವ್ಯವಸ್ಥಿತವಾಗಿ ಪ್ರಚಾರ ಹಾಗೂ ಸಂಘಟನೆ ಮಾಡುವ ಮೂಲಕ ಭಾವನಾತ್ಮಕವಾಗಿ ಜನರ ಗಮನವನ್ನು ಬಿಜೆಪಿ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಇದೀಗ ರಾಜ್ಯದಲ್ಲಿ ಹಿಂದುತ್ವದ ಒಂದೊಂದೇ ಅಸ್ತ್ರಗಳನ್ನು ಪ್ರಯೋಗ ಮಾಡಲು ಬಿಜೆಪಿ ನಿರ್ಧಾರ ಮಾಡಿದೆ. ಅದಕ್ಕೆ ಪೂರಕ ಎಂಬಂತೆ ಮಂಡ್ಯದಲ್ಲಿ ಹನುಮ ಧ್ವಜದ ಅಸ್ತ್ರ ಬಿಜೆಪಿಗೆ ಸಿಕ್ಕಿದೆ. ಈ ಹೋರಾಟಕ್ಕೆ ಜೆಡಿಎಸ್ ಕೂಡಾ ಸಾಥ್ ನೀಡಿದೆ.
ಹೆಗಲ ಮೇಲೆ ರೈತರ ಹಸಿರು ಶಾಲು ಹಾಕಿಕೊಳ್ಳುತ್ತಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಇದೀಗ ಕೇಸರಿ ಶಾಲು ಹಾಕಿಕೊಳ್ಳಲು ಶುರುಮಾಡಿಕೊಂಡಿದ್ದಾರೆ. ಸ್ವತಃ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿಕೊಳ್ಳುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಹಿಂದುತ್ವದ ಪ್ರಯೋಗಕ್ಕೆ ತಾವೂ ಸಾಥ್ ನೀಡುತ್ತಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ ಪಾಲಿಗೆ ಗ್ಯಾರಂಟಿ ಅಸ್ತ್ರವಾದರೆ ಹಿಂದುತ್ವ ಬಿಜೆಪಿ ಹಾಗೂ ದಳಪತಿಗಳ ಪಾಲಿನ ಅಸ್ತ್ರವಾಗಿದೆ. ಇದನ್ನು ಈ ಮೂರು ರಾಜಕೀಯ ಪಕ್ಷಗಳು ಹೇಗೆ ಪ್ರಯೋಗ ಮಾಡುತ್ತವೆ ಹಾಗೂ ಮತದಾರರು ಯಾವುದನ್ನು ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಚುನಾವಣಾ ಫಲಿತಾಂಶ ತಿಳಿಸಲಿದೆ.