ಕೇಂದ್ರ ಬಜೆಟ್ 2024; ವಿತ್ತ ಸಚಿವ ಮಂಡಿಸಿದ ಬಜೆಟ್ ಮುಖ್ಯಾಂಶಗಳು ಇಲ್ಲಿದೆ..!
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಸತತ 6ನೇ ಬಜೆಟ್ ಮಂಡಿಸಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಕೇಂದ್ರ ಸರ್ಕಾರ ಯಾವೆಲ್ಲ ಯೋಜನೆಗಳನ್ನು ಘೋಷಣೆ ಮಾಡಿದೆ. ರೈತರಿಗೆ ಸಿಕ್ಕೆದ್ದನು.. ಮಹಿಳೆಯರಿಗೆ ಸಿಕ್ಕಿದ್ದೇನು.. ಕೇಂದ್ರ ಬಜೆಟ್ನ ಪ್ರಮುಖ ಹೈಲೈಟ್ಸ್ ಈ ವಿಡಿಯೋದಲ್ಲಿದೆ.
ಆದಾಯ ತೆರಿಗೆ ಮಿತಿಯಲ್ಲಿ ಈ ವರ್ಷ ಯಾವುದೇ ಬದಲಾವಣೆ ಇರುವುದಿಲ್ಲ. ಕಳೆದ ವರ್ಷ ಘೋಷಿಸಿದ ರೀತಿ 7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಪಾವತಿಸುವಂತಿಲ್ಲ, ಆದಾಯ ತೆರಿಗೆ ನೀತಿಯಲ್ಲೂ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಹೊಸ ತೆರಿಗೆ ಪದ್ದತಿ ಹಾಗೂ ಹಳೇ ತೆರಿಗೆ ಪದ್ದತಿಗಳನ್ನೂ ಕೇಂದ್ರ ಸರ್ಕಾರ ಹಾಗೆಯೇ ಉಳಿಸಿದೆ
ಭವಿಷ್ಯದ ಸಾರಿಗೆ ಎಂದೇ ಬಿಂಬಿತವಾಗಿರುವ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಹಾಗೂ ಚಾರ್ಜಿಂಗ್ ಸ್ಟೇಷನ್ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಲ್ಲದೇ ಎಲೆಕ್ಟ್ರಿಕ್ ಬಸ್ಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಹಲವು ನಗರಗಳಲ್ಲಿ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಅನುದಾನ ನೀಡೋದಾಗಿ ಹೇಳಿದೆ. 40 ಸಾವಿರ ಹಳೆಯ ರೀತಿಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಪರಿವರ್ತನೆ ಮಾಡೋದಾಗಿ ಹೇಳಿದೆ. ಉಡಾನ್ ಯೋಜನೆಗೆ 517 ಹೊಸ ಮಾರ್ಗ ರೂಪಿಸುವ ಮೂಲಕ ಸಣ್ಣ ನಗರಗಳಿಗೂ ವಿಮಾನಯಾನ ಸೇವೆ ಒದಗಿಸುವ ಇರಾದೆ ಸರ್ಕಾರಕ್ಕಿದೆ
ಇನ್ನೂ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ಸರ್ಕಾರ ಬಡ್ಡಿ ರಹಿತ ಸಾಲ ನೀಡುವುದಾಗಿ ಹೇಳಿದೆ. ಹೀಗಾಗಿ ಪ್ರವಾಸೋದ್ಯಮಕ್ಕಾಗಿ 75 ಸಾವಿರ ಕೋಟಿ ಮೀಸಲು ಇಡುತ್ತೇವೆ ಎಂದು ಹೇಳಿದೆ. ಅಲ್ಲದೇ ರಾಜ್ಯಗಳಲ್ಲಿ ಟೂರಿಸಂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡ್ತೇವೆ ಎಂದು ಹೇಳಿದೆ. ಇನ್ನು ಲಕ್ಷ ದ್ವೀಪದಲ್ಲೂ ಪ್ರವಾಸೋದ್ಯಮ ಅಭಿವೃದ್ದಿ ಮಾಡಲು ಅನುದಾನ ನೀಡೋದಾಗಿ ಹೇಳಿದೆ.
ಆದಾಯ ತೆರಿಗೆ ಮಿತಿಯಲ್ಲಿ ಈ ವರ್ಷ ಯಾವುದೇ ಬದಲಾವಣೆ ಇರುವುದಿಲ್ಲ. ಕಳೆದ ವರ್ಷ ಘೋಷಿಸಿದ ರೀತಿ 7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಪಾವತಿಸುವಂತಿಲ್ಲ, ಆದಾಯ ತೆರಿಗೆ ನೀತಿಯಲ್ಲೂ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಹೊಸ ತೆರಿಗೆ ಪದ್ದತಿ ಹಾಗೂ ಹಳೇ ತೆರಿಗೆ ಪದ್ದತಿಗಳನ್ನೂ ಕೇಂದ್ರ ಸರ್ಕಾರ ಹಾಗೆಯೇ ಉಳಿಸಿದೆ
ಭವಿಷ್ಯದ ಸಾರಿಗೆ ಎಂದೇ ಬಿಂಬಿತವಾಗಿರುವ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಹಾಗೂ ಚಾರ್ಜಿಂಗ್ ಸ್ಟೇಷನ್ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಲ್ಲದೇ ಎಲೆಕ್ಟ್ರಿಕ್ ಬಸ್ಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಹಲವು ನಗರಗಳಲ್ಲಿ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಅನುದಾನ ನೀಡೋದಾಗಿ ಹೇಳಿದೆ. 40 ಸಾವಿರ ಹಳೆಯ ರೀತಿಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಪರಿವರ್ತನೆ ಮಾಡೋದಾಗಿ ಹೇಳಿದೆ. ಉಡಾನ್ ಯೋಜನೆಗೆ 517 ಹೊಸ ಮಾರ್ಗ ರೂಪಿಸುವ ಮೂಲಕ ಸಣ್ಣ ನಗರಗಳಿಗೂ ವಿಮಾನಯಾನ ಸೇವೆ ಒದಗಿಸುವ ಇರಾದೆ ಸರ್ಕಾರಕ್ಕಿದೆ
ಇನ್ನೂ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ಸರ್ಕಾರ ಬಡ್ಡಿ ರಹಿತ ಸಾಲ ನೀಡುವುದಾಗಿ ಹೇಳಿದೆ. ಹೀಗಾಗಿ ಪ್ರವಾಸೋದ್ಯಮಕ್ಕಾಗಿ 75 ಸಾವಿರ ಕೋಟಿ ಮೀಸಲು ಇಡುತ್ತೇವೆ ಎಂದು ಹೇಳಿದೆ. ಅಲ್ಲದೇ ರಾಜ್ಯಗಳಲ್ಲಿ ಟೂರಿಸಂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡ್ತೇವೆ ಎಂದು ಹೇಳಿದೆ. ಇನ್ನು ಲಕ್ಷ ದ್ವೀಪದಲ್ಲೂ ಪ್ರವಾಸೋದ್ಯಮ ಅಭಿವೃದ್ದಿ ಮಾಡಲು ಅನುದಾನ ನೀಡೋದಾಗಿ ಹೇಳಿದೆ.